spot_img
spot_img
spot_img
24.8 C
Belagavi
Thursday, June 1, 2023
spot_img

ಆರಂಭದ ಚಳಿಗೆ ಉತ್ತರ ಕರ್ನಾಟಕ ಗಡಗಡ

ಬೆಂಗಳೂರು: ಈ ಬಾರಿ ಮಳೆಯ ಅಬ್ಬರದಂತೆಯೇ ಉತ್ತರ ಕರ್ನಾಟಕ ಭಾಗದಲ್ಲಿ ಮೈಕೊರೆಯುವ ಚಳಿಗೆ ಜನರು ತತ್ತರಿಸಲಿದ್ದಾರೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ. ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಹವಾಮಾನ ಮುನ್ಸೂಚನಾ ಕೇಂದ್ರದ ಡಾ.ಆರ್.ಹೆಚ್.ಪಾಟೀಲ್ ಈ ಬಾರಿ ಚಳಿ ಬಗ್ಗೆ ಮುನ್ಸೂಚನೆ ನೀಡಿದ್ದು, ರಾಜ್ಯದಲ್ಲಿ ಚಳಿ ಡಿಸೆಂಬರ್ ಮೂರನೇ ವಾರದ ಬಳಿಕ ಹೆಚ್ಚಾಗಬೇಕಿತ್ತು.

ಆದರೆ ಈ ಬಾರಿ ನವೆಂಬರ್ ಆರಂಭದಿಂದಲೇ ಶುರುವಾಗಿದೆ. ನವೆಂಬರ್ 24ರ ಬಳಿಕ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಚಳಿ ಇನ್ನಷ್ಟು ಹೆಚ್ಚಾಗಲಿದ್ದು, ಜನರನ್ನು ನಡುಗಿಸಲಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಹುಬ್ಬಳ್ಳಿ-ಧಾರವಾಡ, ಗದಗ, ರಾಯಚೂರು, ಕೊಪ್ಪಳ, ಬೆಳಗಾವಿ ಸೇರಿದಂತೆ ಹಲವೆಡೆಗಳಲ್ಲಿ ಮೈ ಕೊರೆಯುವ ಚಳಿಗೆ ಜನರು ಬೆಳಿಗ್ಗೆ 10 ಗಂಟೆಯಾದರೂ ಮನೆಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ. ಇನ್ನು ನವೆಂಬರ್ 24ರ ಬಳಿಕ ಆರಂಭವಾಗಲಿರುವ ಚಳಿ ಜನರ ಇನ್ನಿಲ್ಲದಂತೆ ಕಾಡಲಿದೆ ಎಂದು ಹೇಳಲಾಗುತ್ತಿದೆ.

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -