spot_img
31.1 C
Belagavi
Tuesday, March 21, 2023
spot_img

ಭವಾನಿ ರೇವಣ್ಣ ವಿಚಾರಕ್ಕೆ ಈಶ್ವರಪ್ಪ ವ್ಯಂಗ್ಯ

ಶಿವಮೊಗ್ಗ: ಪ್ರತಿಯೊಂದು ರಾಜಕೀಯ ಪಕ್ಷಕ್ಕೂ ರಾಜ್ಯಾಧ್ಯಕ್ಷರು ಮತ್ತು ಚುನಾವಣೆ ಸಮೀತಿ ಇರುತ್ತದೆ ಯಾರು ಪಕ್ಷದಿಂದ ಸ್ಪರ್ಧಿಸಬೇಕೆಂದು ಅವರೇ ನಿರ್ಧರಿಸುತ್ತಾರೆ. ಆದರೆ ಅನಿತಾ ಕುಮಾರಸ್ವಾಮಿಯವರು ಮಗ ನಿಖಿಲ್ ಅಭ್ಯರ್ಥಿ ಘೋಷಣೆ, ಭವಾನಿ ರೇವಣ್ಣ ನಾನೇ ಅಭ್ಯರ್ಥಿಯೆಂದು ಘೋಷಣೆ, ಸಿದ್ದು ಕೋಲಾರಕ್ಕೆ ನಾನೇ ಅಭ್ಯರ್ಥಿ ಘೋಷಣೆ ಎಂದು ಹೇಳಿಕೊಳ್ಳಯತ್ತಿದ್ದಾರೆ. ಅವರಿಗೆ ಪಕ್ಷ, ಚುನಾವಣೆ ಸಮಿತಿ ಇಲ್ಲವೇ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕುಟುಕಿದ್ದಾರೆ

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪ್ರಜಾಪ್ರಭುತ್ವ ಅಂತ ಮಾತನಾಡುವ ವ್ಯಕ್ತಿಗೆ ಅದರ ಬಗ್ಗೆ ನಂಬಿಕೆ ಇಲ್ಲ. ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಪಕ್ಷ ನೋಡಿದರೆ ಗೊತ್ತಾಗುತ್ತದೆ. ರಮೇಶ್ ಜಾರಳಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಆಡಿಯೋ ಬಿಡುಗಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಇಲ್ಲಿಯವರೆಗೆ ಡಿಕೆ ಶಿವಕುಮಾರ್ ಯಾವುದೇ ಉತ್ತರ ಕೊಟ್ಟಿಲ್ಲ. ತಲೆಹರಟೆ ಮಾತು ಏನೇನೋ ಹೇಳುತ್ತಿದ್ದಾರೆ. ಆ ಆಡಿಯೋ ಕುರಿತು ಉತ್ತರ ಏನು? ಆಡಿಯೋದಲ್ಲಿ ಡಿಕೆ ಶಿವಕುಮಾರ್ ಅವರು 40 ಮತ್ತು 50 ಕೋಟಿ ಕುರಿತು ಅವರೇ ಒಪ್ಪಿಕೊಂಡಿದ್ದಾರೆ. ಅದು ಅವರ ವೈಯಕ್ತಿಕ ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದರು.

 

Related News

ನಮಗಿಲ್ಲದ ಅವಕಾಶ ಇವರಿಗೆ ಹೇಗೆ ದೊರಕಿತು

ಬೆಳಗಾವಿಯಲ್ಲಿ ನಡೆದ ಯುವ ಕ್ರಾಂತಿ ಸಮಾವೇಶ ಚುನಾವಣೆ ಆಕಾಂಕ್ಷಿಗಳ ನಾಯಕರುಗಳಿಗೆ ಒಂದು ಉತ್ಸಾಹ ವಾತಾವರಣವನ್ನು ಸೃಷ್ಟಿಸಿತ್ತು. ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ವೇದಿಕೆಯನ್ನೆರಿದ್ದೆ ತಡ ಅವರ ಬಳಿ ಹೋಗುಲು ಮತ್ತು ಅವರನ್ನು ಸನ್ಮಾನಿಸಿ...

ಬೆಳಗಾವಿ ದಕ್ಷಿಣ ಕ್ಷೇತ್ರ ಸಾಮಾನ್ಯ ಜನತೆ ಆತಂಕದಲ್ಲಿದೆ: ನ್ಯಾಯವಾದಿ ಪ್ರಭು ಯತನಟ್ಟಿ

ನಗರದ ಹೋಟೆಲ್ ಒಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಜನಸಾಮಾನ್ಯರು, ವ್ಯಾಪಾರಸ್ಥರು, ಬಿಲ್ಡರ್ , ಆತಂಕದಲ್ಲಿದ್ದಾರೆ ಸಾಮಾನ್ಯ ಜನರಿಗೆ ನ್ಯಾಯ ಕೊಡುವವರೇ ಅನ್ಯಾಯವನ್ನು ಮಾಡುತ್ತಿದ್ದಾರೆ ಆಡಳಿತ ರೂಢ ಶಾಸಕರು ತಮ್ಮ ಆಡಳಿತ...

PSS epaper 16-03-2023

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -