spot_img
spot_img
spot_img
spot_img
spot_img
spot_img
spot_img
19.1 C
Belagavi
Sunday, December 10, 2023
spot_img

ಡಾ. ಅಬುಲ್ ಕಲಾಂ ಆಜಾದ್ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ, ಶಾಸಕರಾದ ಲಕ್ಷ್ಮಣ ಸಂ. ಸವದಿ ಸಲಹೆ

ಅಥಣಿ : ಶಿಕ್ಷಣ ಕ್ಷೇತ್ರಕ್ಕೆ ಡಾ . ಅಬುಲ್ ಕಲಾಂ ಆಜಾದ್ ಅವರ* ಕೊಡುಗೆ ಅಪಾರವಾಗಿದೆ. ಅವರು ದೇಶದ ಪ್ರತಿಯೊಬ್ಬರೂ ಶಿಕ್ಷಣ ಕಲಿಬೇಕು. ಇದರಿಂದ ದೇಶದ ಪ್ರಗತಿ ಕಾಣಲು ಸಾಧ್ಯವೆಂದು ಶೈಕ್ಷಣಿಕ ಕ್ಷೇತ್ರದ ಸುಧಾರಣೆಗೆ ಶ್ರಮಿಸಿದ್ದರು ಎಂದು ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಲಕ್ಷ್ಮಣ ಸಂ. ಸವದಿಯವರು ಹೇಳಿದರು.


ಅವರು ಪಟ್ಟಣದಲ್ಲಿ ದಿ. 11-11-23ರಂದು ಜರುಗಿದ ದೇಶದ ಪ್ರಥಮ ಶಿಕ್ಷಣ ಸಚಿವರು, ಸ್ವಾತಂತ್ರ್ಯ ಹೋರಾಟಗಾರರು , ಭಾರತ ರತ್ನ ಡಾ. ಅಬುಲ್ ಕಲಾಂ ಆಜಾದ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಡಾ. ಅಬುಲ್ ಕಲಾಂ ಆಜಾದ್ ಅವರು ಶೈಕ್ಷಣಿಕ ಕ್ಷೇತ್ರದ ಸುಧಾರಣೆ, ಸ್ವಾತಂತ್ರ್ಯ ಚಳವಳಿಯಲ್ಲಿ ಸಕ್ರಿಯ ಪಾತ್ರ ವಹಿಸಿದ್ದರು. ದೇಶದಲ್ಲಿ ಹಿಂದು-ಮುಸ್ಲಿಂ ಬಾಂಧವರು ಒಗ್ಗಟ್ಟಿನಿಂದ ಬಾಳಲು ಸೌಹಾರ್ದತೆ ಸಂದೇಶ ಪಸರಿಸಿದ್ದರು. ಮಹಾತ್ಮಾ ಗಾಂಧೀಜಿ, ಡಾ. ಬಿ.ಆರ್. ಅಂಬೇಡ್ಕರ್, ಅಬುಲ್ ಕಲಾಂ ಆಜಾದ್ ಅವರಂತಹ ಮಹಾನ್ ವ್ಯಕ್ತಿಗಳ ವಿಚಾರಧಾರೆಗಳ ಮಾರ್ಗದರ್ಶನದಲ್ಲಿ ಪ್ರಸ್ತುತ ಸಮಾಜದ ಜನತೆ ಮುನ್ನಡೆದರೆ ದೇಶದಲ್ಲಿ ಬದಲಾವಣೆ ಕಾಣಲು ಸಾಧ್ಯವಾಗಲಿದೆ. ಇಂತಹ ಮಹಾತ್ಮರ ಜಯಂತಿಗಳನ್ನು ಆಚರಿಸುವುದಕ್ಕೂ ಸಾರ್ಥಕವಾಗಲಿದೆ ಎಂದು ಲಕ್ಷ್ಮಣ ಸಂ. ಸವದಿಯವರು ಅಭಿಪ್ರಾಯಪಟ್ಟರು. ಮುಸ್ಲಿಂ ಬಾಂಧವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಶಿಕ್ಷಣದಿಂದ ಮಾತ್ರ ಮಕ್ಕಳ ಭವಿಷ್ಯ ಉಜ್ವಲಗೊಳ್ಳುವುದು ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಗಜಾನನ ಮಂಗಸೂಳಿ, ತೆಲಸಂಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಕಾಂತ ಪೂಜಾರಿ, ಶಿವಾನಂದ ಗುಡ್ಡಾಪುರ, ಅಸ್ಲಂ ನಾಲಬಂದ, ಯೂನಸ್ ಮುಲ್ಲಾ, ಮೌಲಾನ್ ಅಬ್ಬಾಸ್, ಮುಪ್ತಿ ಹಬಿಬುಲ್ಲಾ, ಪುರಸಭೆ ಸದಸ್ಯರಾದ ರಾವಸಾಬ ಐಹೊಳೆ, ಸಯ್ಯದ್ ಅಮೀನ್ ಗದ್ಯಾಳ, ಆಶೀಫ್ ತಾಂಬೋಳಿ, ಕಲ್ಲೇಶ ಮಡ್ಡಿ ಸೇರಿದಂತೆ ಮತ್ತಿತರ ಗಣ್ಯಮಾನ್ಯರು, ಮುಸ್ಲಿಂ ಸಮಾಜ ಬಾಂಧವರು ಪಾಲ್ಗೊಂಡಿದ್ದರು.

ವರದಿ: ಹಜರತಅಲಿ ಕಮಾಲನವರ

Related News

ಡಿ.15ರ ವರೆಗೆ ಬೆಳಗಾವಿ ಕೋಟೆ ಕೆರೆಯಲ್ಲಿ ಜಲ ಸಾಹಸ ಕ್ರೀಡಾ ಯೋಜನೆ

ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...

ಜಾತ್ರೆ ಹಿನ್ನೆಲೆಯಲ್ಲಿ ಬೆನಕನಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...

Latest News

- Advertisement -
- Advertisement -
- Advertisement -
- Advertisement -