ಚಿಕ್ಕೋಡಿ: ಮಾಜಿ ಶಾಸಕ ಕಲ್ಲಪ್ಪ ಮಗೆಣ್ಣನವರ ಪ್ರಯಾಣಿಸುತ್ತಿದ್ದ ಕಾರು ಅಥಣಿ ಪಟ್ಟಣದ ಹೊರವಲಯದಲ್ಲಿ ಅಪಘಾತಕ್ಕೀಡಾಗಿದೆ.
ವಿಜಯಪುರದಿಂದ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮಕ್ಕೆ ಮಾಜಿ ಶಾಸಕ ಸೇರಿದಂತೆ 6 ಜನರು ಕಾರಿನಲ್ಲಿ ತಡರಾತ್ರಿ ತೆರಳುತ್ತಿದ್ದರು.
ಲಾರಿಯೊಂದರ ಟೈಯರ್ ಬ್ಲಾಸ್ಟ್ ಆಗಿ ಕಾರಿನ ಮೇಲೆ ಟೈಯರ್ ಬಿದ್ದ ಪರಿಣಾಮ, ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಮಗೆಣ್ಣವರ ಸೇರಿದಂತೆ 6 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಥಣಿ ಪೊಲೀಸ್ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.