spot_img
spot_img
spot_img
spot_img
spot_img
spot_img
spot_img
spot_img
23.1 C
Belagavi
Thursday, September 28, 2023
spot_img

ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಸ್ವಲ್ಪ ಮುಂದೂಡಿಕೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಸ್ವಲ್ಪ ಮುಂದೂಡಿಕೆಯಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ, ಅರ್ಜಿ ಸಲ್ಲಿಕೆ 4-5 ದಿನಗಳ ಕಾಲ ವಿಳಂಬವಾಗಲಿದೆ ಎಂದಿದ್ದಾರೆ.

ಗ್ರಾಮ ಪಂಚಾಯಿತಿಯ ಬಾಪೂಜಿ ಸೇವಾ ಕೇಂದ್ರ, ನಾಡ ಕಚೇರಿಯಲ್ಲೂ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕೆನ್ನುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಹಾಗಾಗಿ ಆ್ಯಪ್ ಸಿದ್ಧಪಡಿಸಲು ಸ್ವಲ್ಪ ಸಮಯಾವಕಾಶ ಬೇಕಿರುವುದರಿಂದ ಅರ್ಜಿ ಸಲ್ಲಿಕೆಯನ್ನು ಸ್ವಲ್ಪ ಮುಂದೂಡೋಣ ಎನ್ನುವ ಸಲಹೆ ಹಿರಿಯರಿಂದ ಬಂದಿರುವುದರಿಂದ ಸ್ವಲ್ಪ ಮುಂದೂಡಲಾಗಿದೆ ಎಂದು ಅವರು ವಿವರಿಸಿದರು.

ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ. ಸೇವಾಸಿಂಧು ಆಪ್, ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ನಾಡಕಚೇರಿಗಳಿಗೂ ತೆರಳಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ. ಅಲ್ಲದೇ ಗೃಹಲಕ್ಷ್ಮೀ ಯೋಜನೆಗಾಗಿ ಹೊಸ ಆಪ್ ಸಿದ್ಧಪಡಿಸಲು ಇ-ಗವರ್ನನ್ಸ್ ಗೆ ಕೇಳಿಕೊಂಡಿದ್ದೆವು. ಹೊಸ ಆಪ್ ಸಿದ್ಧಪಡಿಸಲು 4-5 ದಿನ ಬೇಕಾಗುತ್ತದೆ ಎಂದು ಹೇಳಿದ್ದಾರೆ. ಇದರ ಜೊತೆಗೆ ಸ್ವಯಂಸೇವಾ ಸಂಸ್ಥೆಗಳಿಗೂ ಆಹ್ವಾನ ನೀಡಿದ್ದೆವು. ಅವರು ಕೂಡ 4-5 ದಿನ ಸಮಯ ನೀಡುವಂತೆ ಕೇಳಿದ್ದಾರೆ.

ಈ ವಿಚಾರ ಸಚಿವ ಸಂಪುಟದಲ್ಲಿಯೂ ಪ್ರಸ್ತಾಪಿಸಲಾಗಿದ್ದು, ಸಂಪುಟ ಸದಸ್ಯರ ಸಲಹೆ ಮೇರೆಗೆ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ 4-5 ದಿನ ಮುಂದೂಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

Related News

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...

ಹಾಕಿ ಆಸ್ಟ್ರೋಟರ್ಫ್ ಮೈದಾನಕ್ಕೆ ಬೇಡಿಕೆ ಜನತಾ ದರ್ಶನದಲ್ಲಿ ಹೇಳಿಕೆ: ಭರವಸೆ

ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -