spot_img
spot_img
spot_img
34.1 C
Belagavi
Monday, May 29, 2023
spot_img

ವಿಧಾನ ಪರಿಷತ್​ ನೂತನ ಸಭಾಪತಿಯಾಗಿ ಹೊರಟ್ಟಿ ಆಯ್ಕೆ 

ಬೆಳಗಾವಿ: ​ ನೂತನ ವಿಧಾನ ಪರಿಷತ್ ಸಭಾಪತಿಯಾಗಿ ಬಿಜೆಪಿಯ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಹೊರಟ್ಟಿ ಅವರು ಮೂರನೇ ಸಲ ಸಭಾಪತಿ ಹುದ್ದೆ ಅಲಂಕರಿಸಿದರು.

ಚಳಿಗಾಲದ ಅಧಿವೇಶನದ ಮೂರನೇ ದಿನವಾದ ಇಂದು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಿತು. ಕಲಾಪ ಆರಂಭಗೊಳ್ಳುತ್ತಿದ್ದಂತೆ ಹಂಗಾಮಿ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಚುನಾವಣಾ ಪ್ರಕ್ರಿಯೆ ಕೈಗೆತ್ತಿಕೊಂಡರು. ಸಭಾಪತಿ ಸ್ಥಾನಕ್ಕೆ 4 ಪ್ರಸ್ತಾವ ಮಂಡಿಸಲಾಯಿತು.

ಸರ್ಕಾರಿ ಮುಖ್ಯ ಸಚೇತಕ ಡಾ.ವೈ.ಎ ನಾರಾಯಣಸ್ವಾಮಿ, ತೇಜಸ್ವಿನಿಗೌಡ, ಶಾಂತಾರಾಮ್ ಬುಡ್ನ ಸಿದ್ದ, ಅ.ದೇವೇಗೌಡ ಅವರು ಬಸವರಾಜ ಹೊರಟ್ಟಿ ಅವರನ್ನು ಪರಿಷತ್ತಿನ ಸಭಾಪತಿಯಾಗಿ ಚುನಾಯಿಸಬೇಕೆಂದು ಸೂಚಿಸಿದರು. ಇದನ್ನು ಬಿಜೆಪಿಯ ಹಿರಿಯ ಸದಸ್ಯರಾದ ಆಯನೂರು ಮಂಜುನಾಥ್, ಆರ್.ಶಂಕರ್, ಎಸ್.ವಿ ಸಂಕನೂರು, ಪ್ರದೀಪ್ ಶೆಟ್ಟರ್ ಅನುಮೋದಿಸಿದರು.

ಪ್ರತಿಪಕ್ಷಗಳಿಂದ ಯಾವುದೇ ಅಭ್ಯರ್ಥಿ ಕಣಕ್ಕಿಳಿಯದ ಕಾರಣ ನಾಮಪತ್ರ ಸಲ್ಲಿಸಿದ್ದ ಏಕೈಕ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರ ಪರವಿದ್ದ ನಾಲ್ಕೂ ಪ್ರಸ್ತಾವಗಳನ್ನು ಹಂಗಾಮಿ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಸದನದಲ್ಲಿ ಮಂಡಿಸಿದರು. ನಂತರ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಲಾಯಿತು.

ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಪ್ರತಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ನೂತನ ಸಭಾಪತಿಯನ್ನು ಸಭಾಪತಿ ಪೀಠಕ್ಕೆ ಕರೆದೊಯ್ದರು. ಹಂಗಾಮಿ ಸಭಾಪತಿಗಳು ನೂತನ ಸಭಾಪತಿಗೆ ಹಸ್ತಲಾಘವ ಮಾಡಿ ಸಭಾಪತಿ ಪೀಠವನ್ನು ಹೊರಟ್ಟಿ ಅವರಿಗೆ ಬಿಟ್ಟುಕೊಟ್ಟರು.

 

Related News

ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ವಂದೇ ಭಾರತ್ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಅಸ್ಸಾಂನ ಗುವಾಹಟಿಗೆ ಹೊರಟಿದೆ. ಈ...

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -