ಬೆಂಗಳೂರು: ವಾಹನ ಅಪಘಾತದ ಪ್ರಕರಣದಲ್ಲಿ ವಿವಾಹೇತರ ಸಂಬಂಧ ಹೊಂದಿದ್ದಂತ ಮಹಿಳೆಗೆ ಪರಿಹಾರದ ಹಕ್ಕಿಲ್ಲ. ಆದರೇ ಮೃತ ವಿವಾಹೇತರ ಸಂಬಂಧದ ಮಕ್ಕಳಿಗೆ ಪರಿಹಾರದ ಹಕ್ಕಿದೆ ಎಂದು ಹೈಕೋರ್ಟ್ ಮಹತ್ವದ ಆದೇಶದಲ್ಲಿ ತಿಳಿಸಿದೆ.
2012ರಲ್ಲಿ ಮೋಟಾರು ವಾಹನ ಅಪಘಾತದಲ್ಲಿ ಮಲ್ಲಿಕಾರ್ಜುನ ಎಂಬುವರು ಮೃತಪಟ್ಟಿದ್ದರು. ಪರಿಹಾರ ನೀಡದ ವಿಮಾ ಕಂಪನಿಯಿಂದ ಪರಿಹಾರ ಕೋರಿ ಹೈಕೋರ್ಟ್ ಗೆ ಮೃತನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಂತ ಮಹಿಳೆ, ಪುತ್ರ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾಯಮೂರ್ತಿ ಹೆಚ್ ಪಿ ಸಂದೇಶ್ ಅವರಿದ್ದ ನ್ಯಾಯಪೀಠವು, ವಿವಾಹೇತರ ಸಂಬಂಧ ಹೊಂದಿದ್ದಂತ ಮಹಿಳೆಗೆ ಪರಿಹಾರದಲ್ಲಿ ಹಕ್ಕಿಲ್ಲ. ಆದ್ರೇ ಆ ಸಂಬಂಧಕ್ಕೆ ಹುಟ್ಟಿದ ಪುತ್ರನಿಗೆ ಪರಿಹಾರದಲ್ಲಿ ಹಕ್ಕಿದೆ ಎಂದು ಅಭಿಪ್ರಾಯ ಪಟ್ಟರು.