spot_img
spot_img
spot_img
34.1 C
Belagavi
Monday, May 29, 2023
spot_img

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ 

ಬೆಂಗಳೂರು: ಜನಸಂಖ್ಯೆ ಆಧಾರದ ಮೇಲೆ ಮತ್ತೊಮ್ಮೆ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಸದಸ್ಯರ ಸಂಖ್ಯೆ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಈ ಸಂಬಂಧ ವಿಧಾನಸಭೆಯಲ್ಲಿ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ -2022 ಮಂಡಿಸಲಾಗಿದೆ.

ಕಳೆದ ಬಜೆಟ್ ಅಧಿವೇಶನದಲ್ಲಿ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ -2022 ಮಂಡಿಸಿ ಅಂಗೀಕಾರ ಪಡೆದಿದ್ದು, ಈ ತಿದ್ದುಪಡಿ ಕಾಯ್ದೆಯ ಸೆಕ್ಷನ್ 121 ಮತ್ತು ಸೆಕ್ಷನ್ 160ರ ತಿದ್ದುಪಡಿಗೆ ಸುಗ್ರೀವಾಜ್ಞೆ ತರಲಾಗಿತ್ತು. ಈ ಸುಗ್ರೀವಾಜ್ಞೆಗೆ ಕಾಯ್ದೆಯ ಸ್ವರೂಪ ನೀಡಲು ಮತ್ತೊಮ್ಮೆ ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಲಾಗಿದೆ.

ಇದರೊಂದಿಗೆ ಜಿಲ್ಲಾ ಪಂಚಾಯಿತಿ ಸದಸ್ಯರ ಸಂಖ್ಯೆ ಮತ್ತೆ ಹೆಚ್ಚಾಗಲಿದ್ದು, ಇದು ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ಪ್ರಕ್ರಿಯೆ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗಿದೆ.

7 ಲಕ್ಷ ಗ್ರಾಮೀಣ ಜನಸಂಖ್ಯೆ ಹೊಂದಿರುವ ಜಿಲ್ಲೆಯಲ್ಲಿ ಕನಿಷ್ಠ 20 ಮಂದಿ ಜಿಲ್ಲಾ ಪಂಚಾಯಿತಿ ಸದಸ್ಯರು ಇರಬೇಕು ಎನ್ನುವ ನಿಯಮವನ್ನು 25 ಜಿಲ್ಲಾ ಪಂಚಾಯಿತಿ ಸದಸ್ಯರು ಎಂದು ತಿದ್ದುಪಡಿ ಮಾಡಲಾಗಿದೆ.

7 -9.5 ಲಕ್ಷ ಜನಸಂಖ್ಯೆಗೆ 28 ಜಿಲ್ಲಾ ಪಂಚಾಯಿತಿ ಸದಸ್ಯರು ಇರಬೇಕು. 2.30 ಲಕ್ಷ ಗ್ರಾಮೀಣ ಜನಸಂಖ್ಯೆಗೆ ಕನಿಷ್ಠ 12 ತಾಲೂಕು ಪಂಚಾಯಿತಿ ಸದಸ್ಯರು ಇರಬೇಕು ಎನ್ನುವ ಅಂಶ ಸೇರಿಸಲಾಗಿದೆ.

Related News

ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ವಂದೇ ಭಾರತ್ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಅಸ್ಸಾಂನ ಗುವಾಹಟಿಗೆ ಹೊರಟಿದೆ. ಈ...

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -