spot_img
spot_img
spot_img
36.1 C
Belagavi
Tuesday, June 6, 2023
spot_img

ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳ ನಿರ್ವಹಣಾ ಅನುದಾನ ಹೆಚ್ಚಳ : ಜೊಲ್ಲೆ

ಬೆಳಗಾವಿ : ಮುಜರಾಯಿ ಇಲಾಖೆ ವ್ಯಾಪ್ತಿಗೊಳಪಡುವ ದೇವಸ್ಥಾನಗಳ ವಾರ್ಷಿಕ ನಿರ್ವಹಣಾ ವೆಚ್ಚವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಧಾರ್ಮಿಕ ದತ್ತಿ,ಹಜ್ ಹಾಗೂ ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದರು

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿಂದು ಲಿಂಗಸುಗೂರು ಶಾಸಕ ಡಿ.ಎಸ್. ಹೂಲಗೇರಿಯವರ ಪರವಾಗಿ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಅವರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿದರು, ಮುಜರಾಯಿ ಇಲಾಖೆಗೆ ಅನುದಾನ ಬಹಳ ಕಡಿಮೆಯಿದ್ದು, ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಸೇರಿದಂತೆ ಇಲಾಖೆಯ ಕಾರ್ಯಕ್ರಮಗಳಿಗೆ ಅನುದಾನ ಹೆಚ್ಚಿಸಲು ಪ್ರಯತ್ನಿಸಲಾಗುವುದ ಎಂದರು.

… ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಮಾತನಾಡಿ, ಮುಜರಾಯಿ ದೇವಸ್ಥಾನಗಳಿಗೆ 50 ಸಾವಿರ ರೂ., 1 ಲಕ್ಷ ರೂ., 2 ಲಕ್ಷ ರೂ.ಹೀಗೆ ಕನಿಷ್ಠ ಪ್ರಮಾಣದ ಅನುದಾನ ನೀಡಿದರೆ ನಿರ್ವಹಣೆ ಮಾಡುವುದು ಹೇಗೆ?, ವಾರ್ಷಿಕ ಅನುದಾನವನ್ನು ಕನಿಷ್ಟ 25 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿದರು.

ಪ್ರಶ್ನೆಗೆ ಒದಗಿಸಿರುವ ಲಿಖಿತ ಉತ್ತರದಲ್ಲಿ ದೇವಸ್ಥಾನಗಳ ಹೆಸರು ಹಾಗೂ ಮಾಹಿತಿ ಆಂಗ್ಲಭಾಷೆಯಲ್ಲಿದೆ. ಗ್ರಾಮಗಳ ಹೆಸರುಗಳೂ ಕೂಡ ತಪ್ಪಾಗಿವೆ ಅದನ್ನು ಸರಿಪಡಿಸಬೇಕು ಎಂದರು.

Related News

ಸ್ಲೀಪರ್ ಕೋಚ್ ಬಸ್ಸಿನಲ್ಲಿ ವಿಷ ಕುಡಿದು ಪ್ರೇಮಿಗಳು ಪ್ರಿಯತಮೆ ಸಾವು

ಹಾವೇರಿ: ಸ್ಲೀಪರ್ ಕೋಚ್ ಬಸ್ಸಿ ನಲ್ಲಿ ವಿಷ ಕುಡಿದು ಪ್ರೇಮಿಗಳು ಮಲಗಿದ್ದು, ಯುವತಿ ಮೃತಪಟ್ಟ ಘಟನೆ ರಾಣೆಬೆನ್ನೂರು ನಗರದ ಚಳಗೇರಿ ಟೋಲ್ ಬಳಿ ಇರುವ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ ನಡೆದಿದೆ. ಹೇಮಾ ರಾಮಕೃಷ್ಣಪ್ಪ (20)...

ಎಲ್ಲ ನಾಯಕರ ಸಹಮತದ ಆಧಾರದ ಮೇಲೆ ಬೆಳಗಾವಿ ಜಿಲ್ಲಾ ವಿಭಜನೆ ಆಗಬೇಕು

ಬೆಳಗಾವಿ: ಅಭಿವೃದ್ಧಿ ದೃಷ್ಟಿಯಿಂದ ಅಖಂಡ ಬೆಳಗಾವಿ ಜಿಲ್ಲಾ ವಿಭಜನೆ ಆಗಬೇಕು. ಆದರೆ ಜಿಲ್ಲೆಯ ಎಲ್ಲ ನಾಯಕರ ಸಹಮತದ ಆಧಾರದ ಮೇಲೆ ಜಿಲ್ಲಾ ವಿಭಜನೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -