spot_img
spot_img
spot_img
spot_img
spot_img
spot_img
spot_img
spot_img
spot_img
26.1 C
Belagavi
Friday, September 22, 2023
spot_img

ಹಳೆ ಸಂಸತ್ ಭವನ ಬಿಟ್ಟು ಹೋಗುವುದು ಕಷ್ಟದ ಕೆಲಸ: ಪ್ರಧಾನಿ ಮೋದಿ

ಹಳೆ ಸಂಸತ್ ಭವನ ಬಿಟ್ಟು ಹೋಗುವುದು ಕಷ್ಟದ ಕೆಲಸ. ಹಳೆಯ ಮನೆಯನ್ನು ಬಿಟ್ಟು ಹೋಗುವುದು ಒಂದು ಕುಟುಂಬಕ್ಕೆ ಎಷ್ಟು ಕಷ್ಟವೋ ಹಾಗೆ ಕಷ್ಟವಾಗುತ್ತದೆ. ಅನೇಕ ಕಹಿ, ಸಿಹಿ ನೆನಪುಗಳ ಮಿಳಿತ ಹಳೆಯ ಸಂಸತ್ ಭವನದಲ್ಲಿದೆ. ಸಂಘರ್ಷದ ಘಟನೆಗಳು ಈ ಸಂಸತ್ ಭವನದಲ್ಲಿ ನಡೆದಿವೆ ಎಂದು ಪ್ರಧಾನಿ ಮೋದಿ ಹೇಳಿದರು.
ಹಳೆಯ ಸಂಸತ್ ಭವನವನ್ನು ವಿದೇಶಿಗರು ಕಟ್ಟಿರಬಹುದು. ಭವನ ಕಟ್ಟಲು ಈ ದೇಶದ ಜನರು ಬೆವರು ಹರಿಸಿದ್ದಾರೆ. ಈ ದೇಶ ಹಣದಿಂದ ಸಂಸತ್ ಭವನ ಕಟ್ಟಲಾಗಿದೆ. ಮುಂದೆ ಹೊಸ ಸಂಸತ್ ಭವನಕ್ಕೆ ಹೋಗಲಿದ್ದೇವೆ. ಹಳೆ ಸಂಸತ್ ಭವನ ನಮಗೆ ಯಾವಾಗಲು ಪ್ರೇರಣೆ ನೀಡಲಿದೆ ಎಂದರು.

ಇಡೀ ವಿಶ್ವವೇ ಭಾರತದ ಸ್ನೇಹವನ್ನು ಸ್ವೀಕರಿಸಿದೆ. ಸಬ್​ ಕಾ ಸಾಥ್ ಸಬ್​ ಕಾ ವಿಕಾಸ್ ನಮ್ಮ ಮಂತ್ರ. ಸಂಸತ್​ಗೆ ವಿದಾಯ ಹೇಳುತ್ತಿರುವುದು ದುಃಖದ ಸಂಗತಿ. ಹಳೆಯ ಸಂಸತ್ ಭವನ ಬಿಟ್ಟು ಹೋಗುವುದು ಕಷ್ಟದ ಕೆಲಸ. ಹಳೇ ಮನೆ ಬಿಟ್ಟು ಹೋಗಲು ಕುಟುಂಬಕ್ಕೆ ಎಷ್ಟು ಕಷ್ಟವೋ ಹಾಗೆ. ಅನೇಕ ಕಹಿ, ಸಿಹಿ ನೆನಪುಗಳ ಸಮ್ಮಿಲನ ಹಳೆಯ ಸಂಸತ್ ಭವನ. ಒಂದು ಕುಟುಂಬ ಹಳೇ ಮನೆ ಬಿಟ್ಟು ಹೋಗಲು ಆಗಲ್ಲ. ಈ ಸದನ ಬಿಟ್ಟು ಹೊಸ ಸದನಕ್ಕೆ ಪ್ರವೇಶ ಮಾಡುತ್ತಿದ್ದೇವೆ. ಮೊದಲ ಬಾರಿ ಸಂಸತ್ ಭವನ ಪ್ರವೇಶಿಸಿದಾಗ ಭಾವುಕನಾಗಿದ್ದೆ. ಸಂಸತ್ ಭವನದ ಮೆಟ್ಟಿಲುಗಳಿಗೆ ಶಿರಬಾಗಿ ನಮಸ್ಕಾರ ಮಾಡಿದ್ದೆ. ಸಂಸತ್ ಪ್ರವೇಶಿಸುತ್ತೇನೆಂದು ಕನಸಿನಲ್ಲೂ ಯೋಚಿಸಿರಲಿಲ್ಲ ಎಂದು ಪ್ರಧಾನಿ ಹೇಳಿದರು.

ನೂತನ ಸಂಸತ್​ನ ಪ್ರವೇಶದ ದ್ವಾರದಲ್ಲಿ ಜನರಿಗಾಗಿ ಬಾಗಿಲು ತೆರೆಯಿರಿ ಎಂಬ ವಾಕ್ಯವಿದೆ. ಇದನ್ನು ಋಷಿ ಮುನಿಗಳು ಇದನ್ನು ಬರೆದಿದ್ದಾರೆ. ಆರಂಭದಲ್ಲಿ ಮಹಿಳಾ ಸದಸ್ಯರ ಸಂಖ್ಯೆ ತುಂಬಾ ಕಡಿಮೆ ಇತ್ತು. ದಿನ ಕಳೆದಂತೆ ಮಹಿಳಾ ಸದಸ್ಯರ ಸಂಖ್ಯೆಯೂ ಹೆಚ್ಚಳವಾಗಿದೆ. ವಾದ-ಪ್ರತಿವಾದ ಪ್ರತಿಯೊಂದು ನಮಗೆ ಅನುಭವ ಆಗಿದೆ. ನಮ್ಮ ಕುಟುಂಬದ ನಡುವೆ ವಾದ ಆಗಿದೆ. ಈವರೆಗೂ 7,500 ಸಂಸದರು ಸಂಸತ್​ನಲ್ಲಿ ಸೇವೆ ಸಲ್ಲಿಸಿದ್ದಾರೆ. 600ಕ್ಕೂ ಹೆಚ್ಚು ಮಹಿಳೆಯರು ಸಂಸತ್​​ನ ಗೌರವ ಹೆಚ್ಚಿಸಿದ್ದಾರೆ. ಎರಡು ಸದನಗಳ ಸದಸ್ಯರು ಸಂಸತ್ ಮೂಲಕ ಸೇವೆ ಸಲ್ಲಿಸಿದ್ದಾರೆ ಎಂದರು.

ಭಾರತದ ವಿಕಾಸ ಯಾತ್ರೆಯಲ್ಲಿ ಪತ್ರಕರ್ತರ ಸೇವೆ ಮರೆಯಲು ಆಗಲ್ಲ. ದೇಶದ ಕನ್ನಡಿಯಂತೆ ಪತ್ರಕರ್ತರು ಸೇವೆ ಸಲ್ಲಿಸುತ್ತಿದ್ದಾರೆ. ಹಳೇ ಸಂಸತ್​ ಭವನ ಬಿಟ್ಟು ಹೋಗಲು ದುಃಖ ಆಗುತ್ತಿದೆ. ಪತ್ರಕರ್ತರಿಗೂ ಕೂಡ ನಮಗಿಂತ ಹೆಚ್ಚು ದುಃಖ ಆಗುತ್ತದೆ. ನಮಗಿಂತ ಹೆಚ್ಚು ಸಮಯ ಪತ್ರಕರ್ತರು ಇಲ್ಲಿ ಕಳೆದಿದ್ದಾರೆ ಎಂದು ಪ್ರಧಾನಿ ಮೋದಿ ತಿಳಿಸಿದರು.

Related News

ಬೆಳಗಾವಿ ಜಿಲ್ಲೆಯಲ್ಲಿ 14 ಗ್ರಾ.ಪಂಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ. ಖಾನಾಪುರ – ಬೇಕವಾಡ, ಕಿತ್ತೂರು –...

ಚಂದ್ರಯಾನ-3 ಮೇಲೆ ಇಸ್ರೋ ಕಣ್ಣು ಇಂದು ಎಚ್ಚೆತ್ತುಕ್ಕೊಳ್ಳುತ್ತಾ ಲ್ಯಾಂಡರ್ ಮತ್ತು ರೋವರ್

ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -