ಬೆಂಗಳೂರು : ರಾಜಕೀಯ ಮರುಪ್ರವೇಶಕ್ಕೆ ಸಿದ್ಧತೆ ನಡೆಸಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೊಸ ರಾಜಕೀಯ ಪಕ್ಷ ಘೋಷಣೆ ಮಾಡಿದ್ದಾರೆ.
ಇಂದು ಬೆಂಗಳೂರಿನ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ. ಕಾಯಕವೇ ಕೈಲಾಸ ಎಂದು ನಂಬಿದವನು ನಾನು, ಗ್ರಾಮಪಂಚಾಯಿತಿಯಿಂದ ಹಿಡಿದು ಬಳ್ಳಾರಿ ಜಿಲ್ಲೆಯನ್ನು ಬಿಜೆಪಿಯನ್ನಾಗಿ ಮಾಡಿರುವ ಕೀರ್ತಿ ಜನಾರ್ದನ ರೆಡ್ಡಿ ಮಾತ್ರ ಎಂದಿದ್ದಾರೆ.
2006 ರಲ್ಲಿ ಸಮಿಶ್ರ ಸರ್ಕಾರದಲ್ಲಿ ಯಡಿಯೂರಪ್ಪ- ಕುಮಾರಸ್ವಾಮಿ ಇದ್ರು. ಅಧಿಕಾರದ ಹಂಚಿಕ ಆಧಾರದ ಮೇಲೆ ಸರ್ಕಾರ ರಚನೆ ಮಾಡಿದ್ದರು. ಈ ವೇಳೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಕೊಡಲು ಬಂದಾಗ ನಿರಾಕರಿಸಿ ಶ್ರೀರಾಮುಲು ಅವರನ್ನು ಮಂತ್ರಿ ಮಾಡಲು ಹೇಳಿದ್ದೆ ಎಂದರು.
ಬಿಜೆಪಿಯಿಂದ ನನಗೆ ಅಮಾನತು ಮಾಡಿದ್ದು, ತೀವ್ರ ನೋವಾಗಿದೆ. ಹೀಗಾಗಿ ನಾನು ಇನ್ಮುಂದೆ ಬಿಜೆಪಿಯಲ್ಲಿ ಮುಂದುವರೆಯುವುದಿಲ್ಲ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿ ರಾಜಕೀಯಕ್ಕೆ ಪ್ರವೇಶ ಮಾಡುತ್ತೇನೆ ಎಂದು ಘೋಷಿಸಿಸದ್ದಾರೆ.