Ad imageAd image

ಬಸವಾದಿ ಶಿವಶರಣ ಹೂಗಾರ ಮಾದಯ್ಯನವರ ಜಯಂತ್ಯೋತ್ಸವ

ratnakar
ಬಸವಾದಿ ಶಿವಶರಣ ಹೂಗಾರ ಮಾದಯ್ಯನವರ ಜಯಂತ್ಯೋತ್ಸವ
WhatsApp Group Join Now
Telegram Group Join Now

ಬೆಳಗಾವಿ: ಬಸವಾದಿ ಶಿವಶರಣ ಹೂಗಾರ ಮಾದಯ್ಯನವರ ಜಯಂತಿ ಅಂಗವಾಗಿ, ಬೆಳಗಾವಿ ಜಿಲ್ಲೆ ಹೂಗಾರ, ಗುರವ, ಜೀರ ಮತ್ತು ಪೂಜಾರ ಸಮಾಜ ಸೇವಾ ಸಂಘ (ರಿ) ಅವರಿಂದ 2024ರ ಅಕ್ಟೋಬರ್ 20ರಂದು ವಿಜೃಂಭಣೆಯಿಂದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಮೆರವಣಿಗೆ:
ನಿಖರ 9:30 ಕ್ಕೆ ರಾಣಿ ಚನ್ನಮ್ಮ ವೃತ್ತದಿಂದ ಪ್ರಾರಂಭಗೊಂಡು, ಕೊಲ್ಲಾಪೂರ ವೃತ್ತದ ಮಾರ್ಗವಾಗಿ ಕುಮಾರ ಗಂಧರ್ವ ಕಲಾ ಮಂದಿರ ತಲುಪಲಿದೆ. ಸಕಲ ವಾದ್ಯ ಮೇಳಗಳೊಂದಿಗೆ ನಡೆಯುವ ಈ ಮೆರವಣಿಗೆಯಲ್ಲಿ, ಹೂಗಾರ ಮಾದಯ್ಯನವರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ.

ವೇದಿಕೆ ಕಾರ್ಯಕ್ರಮ:
ಮೆರವಣಿಗೆ ನಂತರ, 11:00 ಗಂಟೆಗೆ ವೇದಿಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಸನ್ಮಾನ್ಯ ಶ್ರೀ ಸತೀಶ ಲ. ಜಾರಕಿಹೋಳಿ, ಮಾನ್ಯ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ವಹಿಸಲಿದ್ದಾರೆ.

ಇದರಲ್ಲಿ, ಬೆಳಗಾವಿಯ ಶಾಸಕರು, ಸಂಸದರು ಸೇರಿದಂತೆ ಜಿಲ್ಲೆಯ ಗಣ್ಯರು ಭಾಗವಹಿಸಲಿದ್ದಾರೆ.
ಅತ್ಯಂತ ವೈಭವದಿಂದ ನಡೆಯುವ ಈ ಸಮಾರಂಭಕ್ಕೆ ಹೂಗಾರ ಸಮಾಜದ ಎಲ್ಲಾ ಸದಸ್ಯರು, ಕುಟುಂಬ ಸಮೇತ ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗುವಂತೆ ಕೋರಲಾಗಿದೆ.

WhatsApp Group Join Now
Telegram Group Join Now
Share This Article