ಅನ್ನಭಾಗ್ಯ ಯೋಜನೆ ಜಾರಿ ಮಾಡಲು ಅಕ್ಕಿಯ ಸಮಸ್ಯೆ ಎದುರಾಗಿದ್ದು ಈ ಬಗ್ಗೆ ಇಂದು ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯ ಆಹಾರ ಇಲಾಖೆ ಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಛತ್ತಿಸ್ ಗಡ್, ಮಧ್ಯಪ್ರದೇಶ ರಾಜ್ಯಗಳನ್ನ ಸಂಪರ್ಕ ಮಾಡಿದ್ದು ದೂರವಾಣಿ ಮೂಲಕ ಮಾಹಿತಿ ಪಡೆದಿದೆ. ಅಧಿಕಾರಿಗಳು ಅಕ್ಕಿಯ ದರ ಹಾಗೂ ಎಕ್ಸಸ್, ಟ್ರಾನ್ಸ್ ಪೋರ್ಟ್ ಚಾರ್ಜ್ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಈ ಕುರಿತು ಆಹಾರ ಇಲಾಖೆ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯಗೆ ಮಾಹಿತಿ ನೀಡಿದ್ದಾರೆ.
ನಿನ್ನೆಯಷ್ಟೇ ಕರ್ನಾಟಕದ ನೂತನ ಮುಖ್ಯಮಂತ್ರಿಗಳ ಫೋನ್ ಬಂದಿತ್ತು. ಚಂದ್ರಶೇಖರ್ ರಾವ್ ಸರ್ ಅವರೇ ನನಗೆ 27 ಲಕ್ಷ ಟನ್ ನಷ್ಟು ಅಕ್ಕಿಯ ಅವಶ್ಯಕತೆ ಇದೆ. ನಿಮ್ಮ ಬಳಿ ಇದ್ಧರೆ ಬೆಲೆ ಎಷ್ಟು ಅಂತ ತಿಳಿಸಿ, ನಾವು ಖರೀದಿ ಮಾಡುತ್ತೇವೆ ಎಂದು ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ತಿಳಿಸಿದ್ದಾರೆ.