Ad imageAd image

ಕಿತ್ತೂರು ಪಟ್ಟಣ ಪಂಚಾಯತಿ ಬಿಜೆಪಿ ಸದಸ್ಯನ ಅಪಹರಣ

ratnakar
ಕಿತ್ತೂರು ಪಟ್ಟಣ ಪಂಚಾಯತಿ ಬಿಜೆಪಿ ಸದಸ್ಯನ ಅಪಹರಣ
WhatsApp Group Join Now
Telegram Group Join Now

ಕಿತ್ತೂರು : ಸೆಪ್ಟೆಂಬರ್ 3 ರಂದು ಕಿತ್ತೂರು ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯಲಿದ್ದು ನಿನ್ನೆ ತಡರಾತ್ರಿ ಪಟ್ಟಣ ಪಂಚಾಯತಿ ಸದಸ್ಯನನ್ನು ಅಪಹರಣ ಮಾಡಿರುವ ಘಟನೆ ನಡೆದಿದೆ.

ಕಿತ್ತೂರು ಪಟ್ಟಣ ಪಂಚಾಯತಿ ಬಿಜೆಪಿ ಸದಸ್ಯ ನಾಗೇಶ ಅಸೂಂಡಿ ಅವರನ್ನು ಅಪಹರಣ ಮಾಡಲಾಗಿದ್ದು ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಚೌಕಿಮಠ ಕ್ರಾಸ್ ಬಳಿ ನಿಂತ ಸಂದರ್ಭದಲ್ಲಿ ಅಪಹರಣ ಮಾಡಲಾಗಿದೆ.

ಒಟ್ಟು 20 ಸದಸ್ಯರ‌ ಪೈಕಿ ಬಿಜೆಪಿ – 10, ಕಾಂಗ್ರೆಸ್ – ಬೆಂಬಲಿತ 10 ಸದಸ್ಯರಿದ್ದಾರೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ಕಾವಿನ ಬೆನ್ನಲ್ಲೇ ಬಿಜೆಪಿ ಸದಸ್ಯನ ಅಪಹರಣವಾಗಿದ್ದು ಇದಕ್ಕೆ ಪ್ರತಿಕ್ರಿಯಿಸಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೆದ್. ಬಿಜೆಪಿ ಸದಸ್ಯನ ಅಪಹರಣ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಮೂರು ತಂಡ ರಚಿಸಲಾಗಿದೆ ಎಂದು ಹೇಳಿದ್ದಾರೆ.

 

WhatsApp Group Join Now
Telegram Group Join Now
Share This Article