spot_img
spot_img
spot_img
32.1 C
Belagavi
Tuesday, June 6, 2023
spot_img

ಕೆಪಿಟಿಸಿಎಲ್ ಪ್ರಶ್ನೆಪತ್ರಿಕೆ ಅಕ್ರಮ : ಅಭ್ಯರ್ಥಿಗಳ ಜೊತೆಗೆ ಎಂಟು ಲಕ್ಷಕ್ಕೆ ಡೀಲ್

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ನಕಲು ವಿಚಾರ ಸಂಬಂಧ 4.5 ಲಕ್ಷಕ್ಕೆ ಪ್ರಶ್ನೆ ಪತ್ರಿಕೆ ಲೀಕ್ ಮಾಡಿ ಕಳುಹಿಸಲು ಗದಗ ಮುನ್ಸಿಪಲ್ ಕಾಲೇಜು ಉಪ ಪ್ರಾಂಶುಪಾಲ ಮಾರುತಿ ಜತೆಗೆ ಡೀಲ್ ಮಾಡಲಾಗಿದೆ.

ಆರೋಪಿ ಮಾರುತಿ ಮಗ ಸಮಿತಕುಮಾರ್ ಸೋನವಣಿ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದ. ಒಬ್ಬೊಬ್ಬ ಅಭ್ಯರ್ಥಿಗಳಿಗೆ ಎಂಟು ಲಕ್ಷಕ್ಕೆ ಡೀಲ್ ಮಾಡಿದ್ದು, ಕಿಂಗ್ ಪಿನ್ ಸಂಜು ಭಂಡಾರಿ ಜತೆಗೆ ಅಭ್ಯರ್ಥಿಗಳು ಹಣದ ವ್ಯವಹಾರ ಮಾಡಿದ್ದರು ಎನ್ನಲಾಗಿದೆ.

ಪತ್ರಿಕೆ ಕೀ ಆನ್ಸರ್ ಬಂದಕೂಡಲೇ ಮೂರು ಲಕ್ಷ, ರಿಸಲ್ಟ್ ಬಂದ ನಂತರ ಐದು ಲಕ್ಷ ನೀಡುವಂತೆ ಒಪ್ಪಂದ ಮಾಡಲಾಗಿದೆ. ಆರೋಪಿ ಸುನೀಲ್ ಭಂಗಿ ಪರೀಕ್ಷಾರ್ಥಿಗಳನ್ನ ಸಂಜು ಭಂಡಾರಿಗೆ ಪರಿಚಯ ಮಾಡ್ತಿದ್ದ. ಹೀಗೆ ಪರೀಕ್ಷೆ ಪಾಸ್ ಮಾಡಿಸಿ ಕೊಡುವ ಡೀಲ್ ಮಾಡಿ ಕಿಂಗ್ ಪಿನ್ ಸಂಜು ಕೋಟ್ಯಾಂತರ ಹಣ ಸಂಪಾದಿಸಿದ್ದ ಎನ್ನಲಾಗಿದೆ.

ಇನ್ನು ಕಳೆದ ವರ್ಷ ಸಿವಿಲ್ ಪೊಲೀಸ್ ಕಾಂನ್ಸ್ಟೆಬಲ್ ಪರೀಕ್ಷೆಯಲ್ಲಿ ನಕಲು ಮಾಡಿಸಿ ಸಂಜು ಭಂಡಾರಿ ಅರೆಸ್ಟ್ ಕೂಡ ಆಗಿದ್ದ.

ಜಾಮೀನು ಮೇಲೆ ಹೊರ ಬಂದು ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲೂ ನಕಲು ಮಾಡಿದ್ದು, ಸದ್ಯ ತಲೆಮರೆಸಿಕೊಂಡಿರುವ ಸಂಜು ಭಂಡಾರಿಗೆ ಶೋಧಕಾರ್ಯ‌ ಮುಂದುವರೆದಿದೆ.

Related News

ಬೆಳಗಾವಿಯಲ್ಲಿ ಬ್ರಿಡ್ಜ್ ಮೇಲಿಂದ ಉರುಳಿಬಿದ್ದ ಟ್ಯಾಂಕರ್ ಅದೃಷ್ಟವಶಾತ್ ಬದುಕುಳಿದ ಚಾಲಕ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ವಾಹನವೊಂದು ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಮೇಲಿಂದ ಬಿದ್ದಿರುವ ಘಟನೆ ಎಂ.ಕೆ ಹುಬ್ಬಳ್ಳಿ ಸಮೀಪದಲ್ಲಿ ನಡೆದಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಹಾರಾಷ್ಟ್ರ ಮೂಲದ ರಾಮದಾಸ್...

ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಐವರ ಸಾವು

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಚಿ) ನಲ್ಲಿ ನಡೆದಿದೆ. ಮುನೀರ್(40), ನಯಾಮತ್ (40), ಮುದ್ದತ್ ಶಿರ್ (12), ರಮಿಜಾ ಬೇಗಂ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -