spot_img
spot_img
spot_img
spot_img
spot_img
30.1 C
Belagavi
Sunday, December 3, 2023
spot_img

ನನಗೆ 3 ಪಟ್ಟು ಜಾಸ್ತಿ ದಂಡ ಹಾಕಿದ್ದಾರೆ: ಬೆಸ್ಕಾಂ ವಿರುದ್ಧ ಕುಮಾರಸ್ವಾಮಿ ಆರೋಪ

ಬೆಂಗಳೂರು: ವಿದ್ಯುತ್ ಕಳವು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 2,526 ರೂ. ಬಿಲ್ ಬದಲು 68,526 ರೂಪಾಯಿ ಬಿಲ್ ನೀಡಿದ್ದಾರೆ.

ಬೆಸ್ಕಾಂ ಇಲಾಖೆ ಅಧಿಕಾರಿಗಳು 68,526 ರೂಪಾಯಿ ದಂಡ ವಿಧಿಸಿದ್ದಾರೆ. ಹಣ ಕಟ್ಟಲು ನಾನು ಸಿದ್ಧನಿದ್ದೇನೆ. ಆದರೆ ಬೆಸ್ಕಾಂ 2.5 ಕಿಲೋ ವ್ಯಾಟ್​​​ಗೆ ಲೆಕ್ಕ ತೆಗೆದುಕೊಂಡಿದೆ. 7 ದಿನಕ್ಕೆ 71 ಯೂನಿಟ್ ಆಗಲಿದೆ ಅಂತ ಕೊಟ್ಟಿದ್ದಾರೆ. 71 ಯೂನಿಟ್​ಗೆ ಮೂರು ಪಟ್ಟು ದಂಡ ಹಾಕಿದ್ದಾರೆ. ಆದರೆ ಕರೆಂಟ್​ ಬಿಲ್​ ಬಗ್ಗೆ ಪುನರ್​ ಪರಿಶೀಲನೆ ಮಾಡಲು ಹೇಳಿದ್ದೇನೆ.

ನೀವು ನೀಡಿದ ಬಿಲ್ ಕೂಡ ಸರಿ ಇಲ್ಲ ಅಂತ ಪ್ರತಿಭಟನೆ ಮಾಡಿದ್ದೇನೆ. ಬೆಸ್ಕಾಂ ಇಲಾಖೆ ಪ್ರಕಾರ 2,526 ರೂಪಾಯಿ ಬಿಲ್​​ ನೀಡಬೇಕಿತ್ತು. ಆದರೆ ಬೆಸ್ಕಾಂ ಇಲಾಖೆ 68,526 ರೂ. ಕರೆಂಟ್​ ಬಿಲ್ ನೀಡಿದೆ ಎಂದು ಬೆಸ್ಕಾಂ ವಿರುದ್ಧ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆರೋಪ ಮಾಡಿದರು.

Related News

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ -ಜಮೀರ್ ಅಹ್ಮದ್ ಖಾನ್

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್​ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು -ಎಂ.ಬಿ.ಪಾಟೀಲ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....

Latest News

- Advertisement -
- Advertisement -
- Advertisement -
- Advertisement -