spot_img
spot_img
spot_img
32.1 C
Belagavi
Tuesday, June 6, 2023
spot_img

ಸರಕಾರದ ಸೌಲಭ್ಯಗಳನ್ನು ಪಡೆಯುವುದು ಜನರ ಹಕ್ಕು : ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಸರಕಾರದ ಅಭಿವೃದ್ಧಿ ಯೋಜನೆಗಳನ್ನು ಪಡೆಯುವುದು ಜನರ ಹಕ್ಕಾಗಿದ್ದು, ಅವುಗಳನ್ನು ಒದಗಿಸುವುದು ಜನಪ್ರತಿನಿಧಿಗಳ ಕರ್ತವ್ಯವಾಗಿದೆ. ಕಳೆದ ಹಲವು ವರ್ಷಗಳಿಂದ ತಮ್ಮ ಹಕ್ಕಿನ ಸೌಲಭ್ಯಗಳನ್ನು ಪಡೆಯಲು ವಂಚಿತರಾಗಿದ್ದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರಿಗೆ ಅವರಿಗೆ ಸಲ್ಲಬೇಕಾದ ನ್ಯಾಯ ಒದಗಿಸುವ ಕೆಲಸವನ್ನು ಮಾಡುತ್ತಿದ್ದೇನೆ ಎಂದು ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬಡಾಲ ಅಂಕಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮ ಪಂಚಾಯತ ಕಾರ್ಯಾಲಯ ಕಟ್ಟಡವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಜನರು ತಮ್ಮ ಪ್ರತಿನಿಧಿಯಾಗಿ ಶಾಸಕರನ್ನು ಆಯ್ಕೆ ಮಾಡಿ ಕಳಿಸುತ್ತಾರೆ. ಹಾಗಾಗಿ ಜನರ ಸೇವೆ ಮಾಡುವುದು, ಅವರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಒದಗಿಸುವುದು ಶಾಸಕರ ಕರ್ತವ್ಯ. ಕಳೆದ ನಾಲ್ಕೂವರೆ ವರ್ಷಗಳಿಂದಲೂ ನನ್ನ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುತ್ತಿದ್ದೇನೆ. ಇದಕ್ಕೆ ಜನರ ಪ್ರೀತಿ, ವಿಶ್ವಾಸ ಮತ್ತು ಸಹಕಾರ ಕಾರಣ ಎಂದು ಹೆಬ್ಬಾಳಕರ್ ಹೇಳಿದರು.

ಕಾ* ರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬಡಾಲ ಅಂಕಲಗಿಯ ವೇದ ಮೂರ್ತಿ ಶ್ರೀ ರಾಚಯ್ಯ ಅಜ್ಜನವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹಿರೇಮಠ, ಉಪಾಧ್ಯಕ್ಷ ಬಸವಂತ ನಾಯಿಕ, ಪಿಡಿಒ ಪಾರ್ವತಿ ಮಾ ಜಾಧವ್, ಡಿ. ಎಂ. ಬನ್ನೂರ, ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related News

ಬೆಳಗಾವಿಯಲ್ಲಿ ಬ್ರಿಡ್ಜ್ ಮೇಲಿಂದ ಉರುಳಿಬಿದ್ದ ಟ್ಯಾಂಕರ್ ಅದೃಷ್ಟವಶಾತ್ ಬದುಕುಳಿದ ಚಾಲಕ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ವಾಹನವೊಂದು ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಮೇಲಿಂದ ಬಿದ್ದಿರುವ ಘಟನೆ ಎಂ.ಕೆ ಹುಬ್ಬಳ್ಳಿ ಸಮೀಪದಲ್ಲಿ ನಡೆದಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಹಾರಾಷ್ಟ್ರ ಮೂಲದ ರಾಮದಾಸ್...

ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಐವರ ಸಾವು

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಚಿ) ನಲ್ಲಿ ನಡೆದಿದೆ. ಮುನೀರ್(40), ನಯಾಮತ್ (40), ಮುದ್ದತ್ ಶಿರ್ (12), ರಮಿಜಾ ಬೇಗಂ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -