spot_img
spot_img
spot_img
spot_img
spot_img
28.1 C
Belagavi
Sunday, December 3, 2023
spot_img

ಮಹಾನ್ ಪುರುಷರ ಸಾಧನೆ ತಿಳಿಸಿಕೊಡಲು ಪುತ್ಥಳಿಗಳ ಪ್ರತಿಷ್ಠಾಪನೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ರಾಷ್ಟ್ರದಲ್ಲಿ, ರಾಜ್ಯದಲ್ಲಿ ಎಂತೆಂತಹ ಮಹಾನ್ ಪುರುಷರು ಆಗಿ ಹೋಗಿದ್ದಾರೆ ಎಂದು ಮುಂದಿನ ಪೀಳಿಗೆಗೆ ತಿಳಿಸಿಕೊಡಲು ಅಂತವರ ಪುತ್ಥಳಿಗಳನ್ನು ಸ್ಥಾಪಿಸುತ್ತೇವೆ. ಅವರ ಆದರ್ಶದಲ್ಲಿ ಮುನ್ನಡೆಯಲು ಅವು ನಮಗೆ ಪ್ರೇರಕವಾಗುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೊಳ್ಳಿ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನೂತನವಾಗಿ ನಿರ್ಮಾಣಗೊಂಡ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಮಂಗಳವಾರ ಸಂಜೆ ಅನಾವರಣಗೊಳಿಸಿ ಅವರು ಮಾತನಾಡಿದರು.

ಸಂಗೊಳ್ಳಿ ರಾಯಣ್ಣನಂತಹ ವೀರ ಪುರುಷರ ಮೂರ್ತಿಯನ್ನು ಸ್ಥಾಪಿಸುವ ಮೂಲಕ ನಮ್ಮ ಸಂಸ್ಕೃತಿಯನ್ನು, ಇತಿಹಾಸವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸವನ್ನು ಮಾಡುತ್ತಿದ್ದೇವೆ. ನಮ್ಮ ಮಾತುಗಳೇ ಸಾಧನೆಯಾಗಬಾರದು, ಸಾಧನೆಗಳೇ ಮಾತಾಗಬೇಕು.

ನಾನು ತಮ್ಮೆಲ್ಲರ ಪ್ರೀತಿ, ಆಶೀರ್ವಾದದಿಂದ ರಾಜ್ಯ ಸರ್ಕಾರದಲ್ಲಿ ಮಂತ್ರಿಯಾಗಿ ತಮ್ಮೆಲ್ಲರ ಸೇವೆ ಮಾಡುವ ಅವಕಾಶ ಪಡೆದಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಟ್ಟ ಭಾಷೆಯನ್ನು ಕೇವಲ ಮೂರೇ ಮೂರು ತಿಂಗಳಲ್ಲಿ ಈಡೇರಿಸಿ ನಮಗೆಲ್ಲ ಆದರ್ಶವಾಗಿದ್ದಾರೆ. ನಾನು ಚುನಾವಣೆ ಪೂರ್ವ ವಚನ ಕೊಟ್ಟಂತೆ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಮಾಡಿ ತೋರಿಸುತ್ತೇನೆ ಎಂದು ಹೆಬ್ಬಾಳಕರ್ ಹೇಳಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರ ಋಣವನ್ನು ನಾನು ಸಾಯುವ ತನಕ ನನ್ನ ತಲೆ ಮೇಲೆ ಹೊತ್ತುಕೊಂಡು ಓಡಾಡುತ್ತೇನೆ. ಪಕ್ಷಾತೀತವಾಗಿ ಅಭಿವೃದ್ಧಿ ಮಾಡುವ ಮೂಲಕ ಸಾಧ್ಯವಾದಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇನೆ. ತನ್ಮೂಲಕ ನಿಮ್ಮ ಪ್ರೀತಿ, ವಿಶ್ವಾಸವನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇನೆ ಎಂದು ಸಚಿವರು ತಿಳಿಸಿದರು.

ಈ ವೇಳೆ ಸಿದ್ದಸಿರಿ ಸಿದ್ಧಾಶ್ರಮ ಹಣಮಾಪುರ ಮತ್ತು ಕೌಲಗುಡ್ಡದ ಶ್ರೀ ಸಿದ್ದಯೋಗಿ ಅಮರೇಶ್ವರ ಮಹಾರಾಜರು, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗ್ರಾಮದ ಹಿರಿಯರು, ಮೂರ್ತಿ ಸಂಸ್ಥಾಪಕರಾದ ರಾಮಲಿಂಗ ರಾ ಅನಗೊಳಕರ್, ಕುರುಬ ಸಮಾಜದ ಮುಖಂಡರು, ಸಂಗೊಳ್ಳಿ ರಾಯಣ್ಣ ಸಂಘದ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Related News

ಬೆಳಗಾವಿ ಹೆಮ್ಮೆ ಪುತ್ರ ಬಾಲಚಂದ್ರ ಕಿಲಾರಿ ಸನ್ಮಾನ ಕಾರ್ಯಕ್ರಮದಲ್ಲಿ ಗೈರ್ ಹಾಜರಾದ ಬೆಳಗಾವಿ ಮಹಾಪೌರ ಹಾಗೂಉಪ ಮಹಾಪೌರ

ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ,ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು...

ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಬೆಳಗಾವಿ ಬಾಲಚಂದ್ರ ಕಿಲಾರಿ ಅವರ ಬಹುದೊಡ್ಡ ಪಾತ್ರ

ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ, ರಕ್ಷಣಾ ಕಾರ್ಯಾಚರಣೆಯಲ್ಲಿ...

Latest News

- Advertisement -
- Advertisement -
- Advertisement -
- Advertisement -