spot_img
spot_img
spot_img
34.1 C
Belagavi
Monday, May 29, 2023
spot_img

ಕರ್ನಾಟಕಕ್ಕೆ ಸೇರಲು ತುದಿಗಾಲ ಮೇಲೆ ನಿಂತಿದ್ದೇವೆ : ಮಹಾರಾಷ್ಟ್ರ ಕನ್ನಡಿಗರು 

ಬೆಳಗಾವಿ : ಗಡಿ ವಿವಾದದ ಕಳೆದ ಎರಡು ದಿನಗಳಿಂದ ಮತ್ತೆ ಮುನ್ನೆಲೆಗೆ ಬಂದಿದೆ. ಇತ್ತ ಮಹಾರಾಷ್ಟ್ರದ ಜತ್ತ್ ತಾಲೂಕಿನ ತಿಕ್ಕುಂಡಿ ಗ್ರಾಮದ ಕನ್ನಡಿಗರು ಕನ್ನಡ ಧ್ವಜ ಹಾಗೂ ಕರುನಾಡಿಗೆ ಜೈ ಎಂದು ನಾಮಫಲಕ ಹಾಕಿ, ಮುಖ್ಯಮಂತ್ರಿ ಬೊಮ್ಮಾಯಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕನ್ನಡ ಧ್ವಜಗಳನ್ನು ಹಿಡಿದು ಕರುನಾಡಿಗೆ ಜೈಕಾರ ಹಾಕಿದ ಕನ್ನಡಿಗರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಕಳೆದ 75 ವರ್ಷಗಳಿಂದ ಮಹಾರಾಷ್ಟ್ರ ಸರ್ಕಾರ ಈ ಭಾಗದಲ್ಲಿ ನೀರಾವರಿ ಯೋಜನೆಯನ್ನು ರೂಪಿಸಿಲ್ಲ.

ಆದರೆ, ಮುಖ್ಯಮಂತ್ರಿ ಬೊಮ್ಮಾಯಿ ಜತ್ ತಾಲೂಕಿನ 42 ಹಳ್ಳಿಗೆ ನೀರು ಕೊಡುತ್ತೇವೆ ಎಂದು ಹೇಳಿದ್ದು, ನಮಗೆ ಸಂತೋಷವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡುತ್ತಿದ್ದಂತೆ ಮಹಾರಾಷ್ಟ್ರದಲ್ಲಿ ಸಭೆ ಮೇಲೆ ಸಭೆ ನಡೆಸಿ ಜತ್ ಕಡೆ ತಿರುಗಿ ನೋಡುವಂತಾಗಿದೆ. ಇದಕ್ಕೆ ಕಾರಣವಾದ ಬಸವರಾಜ ಬೊಮ್ಮಾಯಿ ಅವರಿಗೆ ನಾವು ಧನ್ಯವಾದ ಸಲ್ಲಿಸುತ್ತೇವೆ ಎಂದು ಕನ್ನಡಿಗರು ಹೇಳಿದ್ದಾರೆ.

ಇಲ್ಲಿ ಕಳೆದ 40 ವರ್ಷಗಳಿಂದ ಕುಡಿಯುವ ನೀರಿಗಾಗಿ ಹಾಗೂ ಮೂಲ ಸೌಕರ್ಯ ನೀಡುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದಾಗಿ ಕರ್ನಾಟಕಕ್ಕೆ ಸೇರಲು ನಾವು ತುದಿಗಾಲ ಮೇಲೆ ನಿಂತಿದ್ದೇವೆ.

ಜತ್ತ ತಾಲೂಕಿನ 42 ಗ್ರಾಮಗಳ ಗ್ರಾಮಸ್ಥರ ಸಭೆ ಮಾಡಲು ನಾವು ತಯಾರಿದ್ದೇವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಬೇಗನೆ ತಾಲೂಕಿಗೆ ಭೇಟಿ ನೀಡುವಂತೆ ಮಹಾ ಕನ್ನಡಿಗಳು ಆಹ್ವಾನ ನೀಡಿದ್ದಾರೆ.

Related News

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ, ಊಹಾಪೋಹಗಳಿಗೆ ಕಿವಿಗೊಡಬೇಡಿ: ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ. ಊಹಾಪೋಹಗಳಿಗೆ ಕಿವಿಗೊಡಬೇಡಿ, ಗಾಬರಿಯಾಗಬೇಡಿ ಯಾರು ಬೇಕಾದರೂ ಟೀಕೆ ಮಾಡಲಿ ಅದಕ್ಕೆ ನಾವು ಬೇಡ ಅನ್ನಲ್ಲ. ಎಲ್ಲರಿಗೂ ವಾಕ್​ ಸ್ವಾತಂತ್ರ್ಯ ಇದೆ. ಮಾತನಾಡುವವರು ನಮ್ಮನ್ನು ತಿದ್ದಲಿ, ನಾವು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -