spot_img
spot_img
spot_img
spot_img
spot_img
spot_img
spot_img
spot_img
spot_img
26.1 C
Belagavi
Friday, September 22, 2023
spot_img

ಡಿಜಿಟಲ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮೀ ಯೋಜನೆಗೆ ಮಲ್ಲಿಕಾರ್ಜುನ ಖರ್ಗೆ ಚಾಲನೆ

ರಾಜ್ಯ ಸರ್ಕಾರದ ಮಹತ್ತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಡಿಜಿಟಲ್ ಬಟನ್ ಒತ್ತುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದರು. ಗೃಹಲಕ್ಷ್ಮೀ ಯೋಜನೆಗೆ ನೋಂದಾಯಿತರ ಖಾತೆಗೆ ₹2000 ವರ್ಗಾವಣೆ ಮಾಡಲಾಗಿದೆ.

ಕಾಂಗ್ರೆಸ್ ವಾಗ್ದಾನ ಮಾಡಿದನ್ನು ಪೂರೈಸಿದೆ. ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದರು ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಅದನ್ನೇ ನಾನು ಹೇಳುತ್ತಿದ್ದೇನೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ಗ್ಯಾರಂಟಿಗಳನ್ನು ಘೋಷಿಸಿದ್ದು ಈಗಾಗಲೇ 4 ಗ್ಯಾರಂಟಿ ಘೋಷಣೆಯಾಗಿದೆ. ಒಂದು ಮಾತ್ರ ಬಾಕಿ ಇದೆ. ಯಾವ ಸರ್ಕಾರವೂ ಈ ರೀತಿಯ ಯೋಜನೆಗಳನ್ನು ಮಾಡಿಲ್ಲ. ಇಡೀ ಭಾರತದಲ್ಲಿ ಒಪ್ಪುವಂತಹ ಗ್ಯಾರಂಟಿಗಳಿವು. ಚುನಾವಣೆ ಮುಂಚೆ ನಾವು ಗ್ಯಾರಂಟಿ ಘೋಷಣೆ ಮಾಡಿದಗ, ಕೇಂದ್ರ ನಾಯಕರು ಟೀಕೆ ಮಾಡಿದರು. ಇದರಿಂದ ಆರ್ಥಿಕತೆ ಕುಸಿಯುತ್ತೆ. ಬೋಗಸ್ ಎಂದಿದ್ದರು. ಆದ್ರೆ ನಾವು ಇದನ್ನು ಮಾಡಿ ತೊರಿಸಿದ್ದೇವೆ ಎಂದರು.

ಕೇಂದ್ರ ನಾಯಕರು ಹೇಳುತ್ತಾರೆ 50 ವರ್ಷದಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು. ಆದ್ರೆ ನಾವು ವಿಮಾನ ನಿಲ್ದಾಣ, ಅನೇಕ ಸಂಸ್ಥೆಗಳನ್ನು ಮಾಡಿದ್ದೇವೆ. ನಾವು ಮಾಡಿದ ಕೆಲಸಗಳಲ್ಲಿ ಹುಡುಕಾಡಿ ಸುಟ್ಟ ಬಣ್ಣ ಬಳಿದು ತಮ್ಮದೆನ್ನುತ್ತಾರೆ. ನಮ್ಮ ಬಳಿ ಕಾಂಗ್ರೆಸ್ ಸರ್ಕಾರ ಏನು ಮಾಡಿದೆ ಎಂಬ ರಿಪೋರ್ಟ್ ಕಾರ್ಡ್ ಇದೆ. ನೆಹರು, ಇಂದಿರಾ ಗಾಂದಿ, ಸೋನಿಯಾ ಗಾಂದಿ ಮಾಡಿದ ಎಲ್ಲಾ ಕಾರ್ಯಗಳ ರಿಪೋರ್ಟ್ ನಮ್ಮ ಬಳಿ ಇದೆ. 14% ಇಂದ 74% ಜನರಿಗೆ ನಮ್ಮ ಸರ್ಕಾರದ ಸಮಯದಲ್ಲಿ ಶಿಕ್ಷಿತರನ್ನಾಗಿ ಮಾಡಲಾಗಿದೆ.

ಎಸ್​ಟಿ, ಎಸ್​ಗಳ ಶಿಕ್ಷಣ ಕೇವಲ 7% ಇತ್ತು. ನಾವು 60% ಮಾಡಿದ್ದೇವೆ. ಕಾಂಗ್ರೆಸ್ 50 ವರ್ಷದಲ್ಲಿ ಏನು ಮಾಡಿಲ್ಲ ಅಂತ ಹೇಳ್ತಾರೆ. ನಾವು ಮಾಡಿದ್ದು ಬಹಳ ಇದೆ. 1947ರ ಹಿಂದೆ 2 ಲಕ್ಷ ಪ್ರಾರ್ಥಮಿಕ ಶಾಲೆಗಳಿದ್ದವು. ಈಗ 8 ಲಕ್ಷ ಇದೆ. ನರೇಗಾ ನಾವು ತಂದಿದ್ದು, ಸೋನಿಯಾ ಗಾಂಧಿಯವರು ಫುಡ್ ಸೆಕ್ಯೂರಿಟಿ ಆ್ಯಕ್ಟ್ ತಂದ್ರು, ಅದಕ್ಕೆ ಉಚಿತ ಅನ್ನ ಭಾಗ್ಯವೂ ನಾವು ತಂದದ್ದು. ಬಡವರಿಗಾಗಿ ನಾವು ಯೋಜನೆಗಳನ್ನು ಮಾಡಿದ್ದೇವೆ. ಆದರೆ ಅವರು ಶ್ರೀಮಂತರಿಗಾಗಿದ್ದಾರೆ. ಇಲ್ಲಿ ಮೋದಿ ಅಂತ ಹೇಳಿದರೆ ಕೇಸ್ ಹಾಕ್ತಾರೆ. ಮೋದಿ ಎಂದಿದಕ್ಕೆ ರಾಹುಲ್ ಗಾಂಧಿ ಮೇಲೆ ಕೇಸ್ ಹಾಕಿದರು. ಆದ್ರೆ ರಾಹುಲ್ ಯಾವುದಕ್ಕೂ ಹೆದರುವುದಿಲ್ಲ. ಕನ್ಯಾಕುಮಾರಿಯಿಂದ ಕಶ್ಮೀರವರೆಗೆ ಪಾದಯಾತ್ರೆ ಮಾಡಿ ರಾಹುಲ್ ಗಾಂಧಿ ಜನರ ಮಾತು ಆಲಿಸಿದ್ದಾರೆ. ಕೇಂದ್ರದ ಯಾವ ನಾಯಕ ಈ ರೀತಿ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Related News

ಬೆಳಗಾವಿ ಜಿಲ್ಲೆಯಲ್ಲಿ 14 ಗ್ರಾ.ಪಂಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ. ಖಾನಾಪುರ – ಬೇಕವಾಡ, ಕಿತ್ತೂರು –...

ಚಂದ್ರಯಾನ-3 ಮೇಲೆ ಇಸ್ರೋ ಕಣ್ಣು ಇಂದು ಎಚ್ಚೆತ್ತುಕ್ಕೊಳ್ಳುತ್ತಾ ಲ್ಯಾಂಡರ್ ಮತ್ತು ರೋವರ್

ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -