spot_img
spot_img
spot_img
spot_img
spot_img
spot_img
spot_img
spot_img
23.1 C
Belagavi
Thursday, September 28, 2023
spot_img

ಹೆಚ್ಚು ಜನರಿಗೆ ತಲುಪಿಸಬೇಕೆನ್ನುವ ಕಾರಣಕ್ಕೆ ಗೃಹಲಕ್ಷ್ಮೀ ಅರ್ಜಿ ವಿಳಂಬ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಚಿಕ್ಕಮಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ಹೆಚ್ಚಿನ ಜನರಿಗೆ ತಲುಪಬೇಕು ಎನ್ನುವ ಸದುದ್ದೇಶದಿಂದ ಕೆಲವು ಮಾರ್ಪಾಡುಗಳನ್ನು ಮಾಡಲಾಗುತ್ತಿದೆ. ಹಾಗಾಗಿ ಅರ್ಜಿ ಸಲ್ಲಿಕೆ ಸ್ವಲ್ಪ ವಿಳಂಬವಾಗತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೃಹಲಕ್ಷ್ಮೀ ಯೋಜನೆ ಬಹಳಷ್ಟು ಜನರಿಗೆ ತಲುಪಬೇಕು ಹಾಗೂ ಸರಳವಾಗಿ ಸಿಗಬೇಕು ಎಂಬ ಕಾರಣಕ್ಕೆ ಯೋಜನೆಯಲ್ಲಿ ಹಲವು ಬದಲಾವಣೆಯನ್ನು ಮಾಡಲಾಗುತ್ತಿದೆ. ಅಧಿಕಾರಿಗಳಿಗೆ ಕೆಲ ಬದಲಾವಣೆ ಮಾಡಲು ಸೂಚಿಸಿದ್ದೇವೆ. ಇದರಿಂದಾಗಿ ಸ್ವಲ್ಪ ಸಮಯ ಬೇಕಾಗಿದೆಯೇ ವಿನಃ ಬೇರೇನೂ ಸಮಸ್ಯೆ ಇಲ್ಲ ಎಂದು ಹೇಳಿದರು.

ಪ್ರತ್ಯೇಕ ಆ್ಯಪ್ ಕೂಡ ಸಿದ್ಧಪಡಿಸಲು ಸೂಚಿಸಲಾಗಿದೆ. ಅದಾದಲ್ಲಿ ವೇಗವಾಗಿ ಅರ್ಜಿ ಸ್ವೀಕಾರ ಸಾಧ್ಯವಾಗುತ್ತದೆ. ಸಾಧ್ಯವಾದಷ್ಟು ಹೆಚ್ಚಿನ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುವುದು ಸರಕಾರದ ಉದ್ದೇಶವಾಗಿದೆ. ಈ ಎಲ್ಲಾ ಕಾರಣದಿಂದಾಗಿ ಯೋಜನೆಗೆ ಅರ್ಜಿ ಸಲ್ಲಿಕೆ ಕೊಂಚ ವಿಳಂಬವಾಗುತ್ತಿದೆ. ಆಗಸ್ಟ್ 17 ಅಥವಾ 18ರಿಂದ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುತ್ತದೆ ಎಂದು ತಿಳಿಸಿದರು.

Related News

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...

ಹಾಕಿ ಆಸ್ಟ್ರೋಟರ್ಫ್ ಮೈದಾನಕ್ಕೆ ಬೇಡಿಕೆ ಜನತಾ ದರ್ಶನದಲ್ಲಿ ಹೇಳಿಕೆ: ಭರವಸೆ

ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -