spot_img
spot_img
spot_img
36.1 C
Belagavi
Tuesday, June 6, 2023
spot_img

ಕೈಗಾರಿಕೆ ಸ್ಥಾಪನೆಗೆ ಬೆಳಗಾವಿ ಹೊರವಲಯದ 700 ಎಕರೆ ರಕ್ಷಣಾ ಭೂಮಿ ಕೋರಿ ಕೇಂದ್ರಕ್ಕೆ ಪ್ರಸ್ತಾವ : ಸಚಿವ ನಿರಾಣಿ

ಬೆಳಗಾವಿ: ಬೆಳಗಾವಿ ನಗರದ ಹೊರವಲಯದಲ್ಲಿರುವ ರಕ್ಷಣಾ ಇಲಾಖೆಗೆ ಸೇರಿದ ಸುಮಾರು 700 ಎಕರೆ ಭೂಮಿಯನ್ನು ಕೈಗಾರಿಕೆಗಳ ಸ್ಥಾಪನೆಗೆ ಒದಗಿಸಿದರೆ,ರಾಜ್ಯ ಸರ್ಕಾರದಿಂದ ಪರ್ಯಾಯವಾಗಿ ಖಾನಾಪುರ ತಾಲೂಕಿನಲ್ಲಿ ಒಂದು ಸಾವಿರ ಎಕರೆ ಭೂಮಿ ಒದಗಿಸಲಾಗುವುದು ಎಂಬ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮಕೈಗಾರಿಕೆ ಸಚಿವಅಭಯ್ ಪಾಟೀಲ ಹೇಳಿದರು.

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿಂದು ಬೆಳಗಾವಿ ದಕ್ಷಿಣಕ್ಷೇತ್ರದ ಶಾಸಕ ಅಭಯ್ ಪಾಟೀಲ ಅವರ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು,

ಇತ್ತೀಚೆಗೆ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಬೆಂಗಳೂರಿನ ಆಚೆ ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಉದ್ದಿಮೆದಾರರಿಗೆ ಹೆಚ್ಚು ಪ್ರೋತ್ಸಾಹ,ಸೌಕರ್ಯಗಳನ್ನು ಒದಗಿಸುವುದಾಗಿ ಘೋಷಿಸಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಫೌಂಡ್ರಿ,ಮಿಷನ್ ಕಾಂಪೊನೆಂಟ್ಸ್, ಸಿಮೆಂಟ್, ಸಕ್ಕರೆ, ಬೆಲ್ಲ, ಜನರಲ್ ಇಂಜಿನಿಯರಿಂಗ್,ಜವಳಿ ಹಾಗೂ ಕೃಷಿ ಆಧಾರಿತ ಕೈಗಾರಿಕೆಗಳು 52 ಉದ್ಯಮಗಳು ಕಾರ್ಯ ನಿರ್ವಹಿಸುತ್ತವೆ.

ಹೊನಗಾ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಗೋಲ್ಡ್ಗ್ಲಾಸ್‍ ಕಂಪೆನಿಯು ಮೊದಲ ಹಂತದಲ್ಲಿ 2500 ಕೋಟಿರೂ.ಗಳನ್ನು ಹೂಡಿಕೆ ಮಾಡಿ,8 ತಿಂಗಳ ಅವಧಿಯಲ್ಲಿ ಘಟಕ ಸ್ಥಾಪನೆ ಮಾಡಿದೆ. ರಷ್ಯಾ ಮೂಲದ ಇಲೆಕ್ಟ್ರಿಕಲ್ ವಾಹನ ಉದ್ಯಮ ಸಂಸ್ಥೆಯೊಂದು ಬೆಂಗಳೂರಿನಲ್ಲಿ ಬೃಹತ್ಘ ಟಕ ಸ್ಥಾಪಿಸಲು ಇಚ್ಛೆ ವ್ಯಕ್ತಪಡಿಸಿ ಮುಂದೆ ಬಂದಿದೆ.

ಎರಡನೇ ಹಂತದ ನಗರಗಳಾಗಿರುವ ಮೈಸೂರು,ಹುಬ್ಬಳ್ಳಿ-ಧಾರವಾಡ,ಬೆಳಗಾವಿ,ಕಲಬುರ್ಗಿಯಂತಹ ನಗರಗಳಲ್ಲಿ ಸ್ಥಾಪಿಸಲು ಅವರಿಗೆ ಸಲಹೆ ನೀಡಲಾಗಿದೆ.ಬೆಳಗಾವಿ ಬಳಿ ಗೋಲ್ಡ್‍ಕ್ಲಾಸ್ ಸ್ಟಾರ್‍ಕೆಟಗರಿಯ ವಿಶೇಷ ಕೈಗಾರಿಕಾಭಿವೃದ್ಧಿ ಪ್ರದೇಶ ಸ್ಥಾಪಿಸಿ,ಗಡಿ ಭಾಗದ ಯುವ ಜನರಿಗೆ ಉದ್ಯೋಗ ಒದಗಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದು ಸಚಿವರು ತಿಳಿಸಿದರು.

ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆಕಾಗೇರಿ ಮಾತನಾಡಿ, ಎರಡನೇ ಹಂತದ ನಗರಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡುವ ಮಾದರಿಯಲ್ಲಿಯೇ ಗಡಿಭಾಗಗಳಲ್ಲಿ ಕೈಗಾರಿಕೆ ಸ್ಥಾಪಿಸುವವರಿಗೆ ವಿಶೇಷ ಸೌಕರ್ಯಗಳನ್ನು ಸರ್ಕಾರ ನೀಡಬೇಕುಎಂದು ಸಲಹೆ ನೀಡಿದರು.

ಶಾಸಕ ಅನಿಲ ಬೆನಕೆ ಮಾತನಾಡಿ,ಬೆಳಗಾವಿ ಸಮೀಪದ 700 ಎಕರೆರಕ್ಷಣಾ ಭೂಮಿಯಲ್ಲಿ ಐಟಿ ಉದ್ಯಮಗಳನ್ನು ಸ್ಥಾಪಿಸಿದರೆ ಈ ಭಾಗದ ಯುವ ಇಂಜಿನಿಯರಿಂಗ್ ಪದವೀಧರರು ಪುಣೆ ಹಾಗೂ ಬೆಂಗಳೂರಿಗೆ ವಲಸೆ ಹೋಗುವುದು ತಪ್ಪುತ್ತದೆ.ಸ್ಥಳೀಯವಾಗಿ ಉದ್ಯೋಗಗಳು ಸೃಜನೆಯಾಗುತ್ತವೆಎಂದರು.

ಹರಿಹರ ಶಾಸಕ ಎಸ್.ರಾಮಪ್ಪ ಮಾತನಾಡಿ,ದಾವಣಗೆರೆ ಜಿಲ್ಲೆಯಲ್ಲಿ ಕಾಟನ್ ಮಿಲ್,ಜವಳಿ ಉದ್ಯಮಗಳನ್ನು ಸ್ಥಾಪಿಸಬೇಕು ಎಂದರು. ಬೀದರ್‍ ಶಾಸಕ ಬಂಡೆಪ್ಪಕಾಶೆಂಪೂರ ಮಾತನಾಡಿ, ಕೇಂದ್ರ ಸರ್ಕಾರವು ಒಂದು ಜಿಲ್ಲೆಒಂದು ಬೆಳೆ ಕಾರ್ಯಕ್ರಮದಡಿ ಬೀದರ್ ಜಿಲ್ಲೆಯ ಶುಂಠಿ ಬೆಳೆ ಗುರುತಿಸಿದೆ. ಶುಂಠಿಯ ಸಂಸ್ಕರಣಾ ಘಟಕಗಳ ಸ್ಥಾಪನೆ ಹಾಗೂ ಮೌಲ್ಯವರ್ಧನೆ ಚಟುವಟಿಕೆಗಳಿಗೆ ಉತ್ತೇಜನ ನೀಡಬೇಕು ಎಂದರು.

Related News

ಅಂತೆ ಕಂತೆಗಳಿಗೆ ಕಿವಿಗೊಡಬೇಡಿ, ಸರಕಾರ ನಿಮ್ಮ ಜೊತೆಗಿದೆ – ಜನರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಯ

ಬೆಳಗಾವಿ: ಭರವಸೆ ನೀಡಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು. ಯಾವುದೇ ಅಂತೆ ಕಂತೆಗಳಿಗೆ ಕಿವಿಗೊಡಬೇಡಿ. ಸರಕಾರ ನಿಮ್ಮ ಜೊತೆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಹಿರಿಯ ನಾಗರಿಕರು ಮತ್ತು...

ಪ್ರಿಯತಮೆಯನ್ನು ಕೊಲೆ ಮಾಡಿ ಎಸ್ಕೇಪ್ ಆದ ಪ್ರಿಯಕರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರಿಯಕರನೇ ತನ್ನ ಪ್ರಿಯತಮೆಯನ್ನು ಕೊಲೆ ಮಾಡಿ ಬಳಿಕ ಎಸ್ಕೇಪ್ ಆದ ಘಟನೆ ನಡೆದಿದೆ. ಬೆಂಗಳೂರಿನ ಜೀವನ್ ಭಿಮಾ ನಗರದ ಕೋಡಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹೈದರಾಬಾದ್ ಮೂಲದ ಆಕಾಂಕ್ಷಾ ಮೃತ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -