spot_img
spot_img
spot_img
34.1 C
Belagavi
Monday, May 29, 2023
spot_img

ಸರ್ವೆ ಪ್ರಕ್ರಿಯೆ ಇನ್ನಷ್ಟು ಆಧುನೀಕರಣಕ್ಕೆ ಕ್ರಮ: ಸಚಿವ ಆರ್.ಅಶೋಕ್

ಬೆಳಗಾವಿ : ದೂರುಗಳು ಬಾರದಂತೆ, ಸರಳೀಕರಣಗೊಳಿಸುವ ಭಾಗವಾಗಿ ಸರ್ವೆ ಪ್ರಕ್ರಿಯೆಯನ್ನು ಇನ್ನಷ್ಟು ಆಧುನೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವರಾದ ಆರ್.ಅಶೋಕ ಅವರು ಹೇಳಿದರು.

ಪರಿಷತ್ತಿನಲ್ಲಿ ಇಂದು ಸದಸ್ಯರಾದ ಗೋವಿಂದರಾಜು ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾವು ಈಗಾಗಲೇ ಸ್ವಾವಲಂಬಿ ಆಪ್ ಮಾಡಿದ್ದೇವೆ. ಭೂ-ಪರಿವರ್ತನೆ ಬಯಸುವವರು ಸ್ಕೆಚ್ ಮಾಡಿಕೊಂಡು ಆಧಾರ್ ನಂಬರ್ ಸಹಿತ ಈ ಸ್ವಾವಲಂಬಿ ಆಪ್‍ಗೆ ಹಾಕಿದಲ್ಲಿ ಅದನ್ನು ಸಬ್ ರಿಜಿಸ್ಟರ್ ಕಚೇರಿಗೆ ಕಳುಹಿಸುತ್ತೇವೆ. ಇಲ್ಲಿ ತಿದ್ದುಪಡಿಗೆ ಅವಕಾಶವಿಲ್ಲ. ಈ ಪ್ರಕ್ರಿಯೆಯನ್ನು ಪ್ರಾಯೋಗಿಕವಾಗಿ ಬಳ್ಳಾರಿ ಜಿಲ್ಲೆಯಲ್ಲಿ ಆರಂಭಿಸಲು ತಿಳಿಸಿದ್ದೇವೆ. ಬಳಿಕ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಸಚಿವರು ತಿಳಿಸಿದರು.

ಪಿ ಸರ್ವೆ ತೊಂದರೆ ಇತ್ಯರ್ಥಕ್ಕೆ ಕ್ರಮ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿನ ಪಿ ಸರ್ವೆ ನಂಬರ್ ತೊಂದರೆಯನ್ನು ಸಹ ಬೇಗ ಸರಿಪಡಿಸಲಾಗುವುದು ಎಂದು ಸಚಿವ ಆರ್.ಅಶೋಕ ಅವರು ಸದಸ್ಯರಾದ ಎಂ.ಎಲ್.ಅನೀಲ್ ಕುಮಾರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕಾನೂನು ತೊಡಕು ಸರಿಪಡಿಸ್ತೇವೆ: ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅನಾದಿಕಾಲದಿಂದ ಅನುಭವಿಸಿಕೊಂಡು ಬರುತ್ತಿರುವ ಕಾನೆ, ಬಾನೆ, ಕುಮ್ಕಿ ಜಮೀನುಗಳನ್ನು ಮಂಜೂರು ಮಾಡುವ ಬಗ್ಗೆ ನೀತಿಯೊಂದನ್ನು ರೂಪಿಸಲು ಸಕಾರಾತ್ಮಕ ಧೋರಣೆ ಹೊಂದಿದೆ.

ಸದ್ಯದಲ್ಲೆ ಚುನಾಯಿತ ಪ್ರತಿನಿಧಿಗಳ ಸಭೆ ಕರೆದು ಸುಧೀರ್ಘ ಚರ್ಚಿಸಿ ಇರುವ ಕಾನೂನು ತೊಡಕುಗಳನ್ನು ಸರಿಪಡಿಸಲಾಗುವುದು ಎಂದು ಸಚಿವರಾದ ಆರ್ ಅಶೋಕ ಅವರು, ಸದಸ್ಯರಾದ ಪ್ರತಾಪ್ ಸಿಂಹ್ ನಾಯಕ ಕೆ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

Related News

ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ವಂದೇ ಭಾರತ್ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಅಸ್ಸಾಂನ ಗುವಾಹಟಿಗೆ ಹೊರಟಿದೆ. ಈ...

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -