spot_img
spot_img
spot_img
spot_img
spot_img
spot_img
spot_img
20.7 C
Belagavi
Monday, December 11, 2023
spot_img

ರಮೇಶ ಜಾರಕಿಹೊಳಿ ನಿವಾಸಕ್ಕೆ ಕಿಡಗೇಡಿಗಳಿಂದ ಅಶ್ಲೀಲ ಪೋಸ್ಟರ್ ಅಂಟಿಸಿದ ಕಿಡಗೇಡಿಗಳು

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಪೋಸ್ಟರ್ ವಾರ್ ಶುರುವಾದಂತಿದೆ. ಬೆಂಗಳೂರಿನ ಸದಾಶಿವನಗರದ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಅವಾಚ್ಯ ಪದ ಬಳಕೆ ಮಾಡಿರುವ ಪೋಸ್ಟರ್ ಗಳನ್ನು ಕಿಡಿಗೇಡಿಗಳು ಅಂಟಿಸಿ ಹೋಗಿದ್ದಾರೆ.

ಪೋಸ್ಟರ್ ನಲ್ಲಿ ಏಕವಚನದಲ್ಲಿ ನಿಂದನೆ ಜೊತೆಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ. ಇದೇ ನಿನ್ನ ಸಂಸ್ಕೃತಿ ಎಂದು ಪದ ಬಳಸಿದ್ದಾರೆ. ಇದರಿಂದ ಎಚ್ಚೆತ್ತ ಪೊಲೀಸರು ಕೂಡಲೇ ಅಂಟಿಸಿದ್ದ ಪೋಸ್ಟರ್ ತೆರವುಮಾಡಿದ್ದಾರೆ. ಈ ಪೋಸ್ಟರ್ ಬಗ್ಗೆ ಇದೀಗ ಭಾರೀ ಚರ್ಚೆ ಶುರುವಾಗಿದೆ.

ಸೋಮವಾರ ಡಿಸಿಎಂ ಡಿಕೆಶಿ ವಿರುದ್ಧ ರಮೇಶ್ ಜಾರಕಿಜೊಳಿ ಸುದ್ದಿಗೋಷ್ಠಿ ನಡೆಸಿ ಡಿಕೆ ಹೆದರು ಪುಕ್ಕಲ, ಮೋಸಗಾರ ಎಂದು ಜರೆದಿದ್ದರು. ರಾಜ್ಯ ಸರ್ಕಾರದ ಪತನಕ್ಕೆ ಬಿಜೆಪಿ ಸ್ಕೆಚ್ ಹಾಕಿಲ್ಲ. ಆಪರೇಷನ್ ಕಮಲವನ್ನು ನಾವು ಮಾಡ್ತಿಲ್ಲ. ಸುಳ್ಳು ಗ್ಯಾರಂಟಿ ಕೊಟ್ಟಿದ್ದನ್ನ ಈಡೇರಿಸಲು ಆಗದ ಕಾರಣ ಆಪರೇಷನ್ ಕಮಲ ಮಾಡುತ್ತಿದ್ದಾರೆ ಅಂತಾ ಡಿಕೆ ಗ್ಯಾಂಗ್ ಹೇಳ್ತಿದೆ ಎಂದು ಪ್ರತ್ಯಾರೋಪ ಮಾಡಿದ್ದರು. 2019ರಲ್ಲಿ ಅನಿವಾರ್ಯ ಇತ್ತು ಆಪರೇಷನ್ ಮಾಡಿದ್ವಿ. ಅಂದು ಡಿಕೆಶಿಯ ಸರ್ವಾಧಿಕಾರಿ ಧೋರಣೆ ಮತ್ತು ಸೊಕ್ಕಿನಿಂದ ಸರ್ಕಾರವನ್ನು ಬೀಳಿಸಬೇಕಾಯಿತು ಅಂದಿದ್ದರು.

Related News

ಡಿ.15ರ ವರೆಗೆ ಬೆಳಗಾವಿ ಕೋಟೆ ಕೆರೆಯಲ್ಲಿ ಜಲ ಸಾಹಸ ಕ್ರೀಡಾ ಯೋಜನೆ

ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...

ಜಾತ್ರೆ ಹಿನ್ನೆಲೆಯಲ್ಲಿ ಬೆನಕನಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...

Latest News

- Advertisement -
- Advertisement -
- Advertisement -
- Advertisement -