spot_img
spot_img
spot_img
32.1 C
Belagavi
Tuesday, June 6, 2023
spot_img

ದೇಶ ವಿರೋಧಿ ಚಟುವಟಿಕೆ ತೊಡಗಿದ್ದವರ ಎನ್ ಕೌಂಟರ್ ಮಾಡಿ : ಶಾಸಕ ಅಭಯ್ ಪಾಟೀಲ್

ಬೆಳಗಾವಿ : ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದವರ ಮೇಲೆ ಉತ್ತರ ಪ್ರದೇಶದ ಮಾದರಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಅಭಯ್ ಪಾಟೀಲ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದ ಅವರು, ದೇಶ ವಿರೋಧಿ ಚಟುವಟಿಕೆ ತೊಡಗಿದವರ ಮೇಲೆ ಉಗ್ರ ಕ್ರಮ ಆಗಬೇಕು. ಕೆಲವರು ಪಾಕಿಸ್ತಾನ ಜಿಂದಾಬಾದ್ ಅಂತಿದ್ದಾರೆ. ಇಂತವರ ಮೇಲೆ ಉತ್ತರ ಪ್ರದೇಶದ ಮಾದರಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಇಂತಹ ಕೃತ್ಯಗಳಲ್ಲಿ ತೊಡಗುವವರ ಮೇಲೆ ಕಠಿಣಕ್ರಮ ಕೈಗೊಳ್ಳಲು ಬೇಕಾದ ವಿಶೇಷ ಕಾನೂನು ರೂಪಿಸಬೇಕು. ಅವರನ್ನು ಬಂಧಿಸಿ ಜೈಲಿಗೆ ಕಳುಹಿಸುವ ಕೆಲಸ ಮಾತ್ರ ಆಗಬಾರದು. ಅಂತಹವರನ್ನು ಎನ್ ಕೌಂಟರ್ ಮಾಡಬೇಕು ಜೊತೆಗೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದರು.

ಉಗ್ರ ಚಟುವಟಿಕೆಗಳಲ್ಲಿ ತೊಡಗಿರುವವರಲ್ಲಿ ಅವರದ್ದೇ ಆದ ಅಜೆಂಡಾ ಇರುತ್ತದೆ. ಇವರು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸ ಮಾಡುತ್ತಾರೆ. ಇಂತವರಿಗೆ ಯಾರು ಆಶ್ರಯ ಕೊಡುತ್ತಾರೋ ಅವರ ಮೇಲೆ ಮೊದಲು ಕ್ರಮ ಆಗಬೇಕು. ರಾಜಕೀಯ ಶಕ್ತಿಗಳೇ ಇಂತವರಿಗೆ ಆಶ್ರಯ ಕೊಡುತ್ತಿರುವುದಾಗಿ ಗಂಭೀರ ಆರೋಪ ಮಾಡಿದರು.

Related News

ಪ್ರಿಯತಮೆಯನ್ನು ಕೊಲೆ ಮಾಡಿ ಎಸ್ಕೇಪ್ ಆದ ಪ್ರಿಯಕರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರಿಯಕರನೇ ತನ್ನ ಪ್ರಿಯತಮೆಯನ್ನು ಕೊಲೆ ಮಾಡಿ ಬಳಿಕ ಎಸ್ಕೇಪ್ ಆದ ಘಟನೆ ನಡೆದಿದೆ. ಬೆಂಗಳೂರಿನ ಜೀವನ್ ಭಿಮಾ ನಗರದ ಕೋಡಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹೈದರಾಬಾದ್ ಮೂಲದ ಆಕಾಂಕ್ಷಾ ಮೃತ...

ಬೆಳಗಾವಿಯಲ್ಲಿ ಬ್ರಿಡ್ಜ್ ಮೇಲಿಂದ ಉರುಳಿಬಿದ್ದ ಟ್ಯಾಂಕರ್ ಅದೃಷ್ಟವಶಾತ್ ಬದುಕುಳಿದ ಚಾಲಕ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ವಾಹನವೊಂದು ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಮೇಲಿಂದ ಬಿದ್ದಿರುವ ಘಟನೆ ಎಂ.ಕೆ ಹುಬ್ಬಳ್ಳಿ ಸಮೀಪದಲ್ಲಿ ನಡೆದಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಹಾರಾಷ್ಟ್ರ ಮೂಲದ ರಾಮದಾಸ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -