spot_img
spot_img
spot_img
32.1 C
Belagavi
Tuesday, June 6, 2023
spot_img

2018 ರ ಚುನಾವಣೆಯ ದಾಖಲಾದ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಶಾಸಕ ಬೆನಕೆ ಆರೋಪಮುಕ್ತ 

ಬೆಳಗಾವಿ : 2018 ರ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಬೆಳಗಾವಿ ಉತ್ತರ ಮತಕ್ಷೇತ್ರದಿಂದ ಬಿ.ಜೆ.ಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದ ಅನಿಲ ಬೆನಕೆ ಇವರ ಪ್ರಚಾರಾರ್ಥವಾಗಿ ಕೇಂದ್ರ ಗೃಹ ಸಚಿವ ಅಮಿತ ಶಾ ರವರ ಆಗಮನದ ವೇಳೆ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 197/2018 ಹಾಗೂ ಖಡೆಬಜಾರ ಪೊಲೀಸ್ ಠಾಣೆ 119/2018 ಎಂದು ಕಲಂ 127(ಎ) ಪ್ರಜಾಪ್ರತಿನಿಧಿ ಕಾಯ್ದೆ ಹಾಗೂ ಕಲಂ 3&4 ಕೆ.ಪಿ.ಡಿ.ಪಿ ಕಾಯ್ದೆಯಡಿಯಲ್ಲಿ ಶಾಸಕ ಅನಿಲ ಬೆನಕೆ ಹಾಗೂ ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ಆಗಿದ್ದ ಶಶಿಕಾಂತ ಪಾಟೀಲ ಇವರುಗಳ ಮೇಲೆ ಪ್ರಕರಣಗಳು ದಾಖಲಾಗಿತ್ತು. ಇಂದು ಬೆಂಗಳೂರಿನ ಪ್ರಜಾಪ್ರತಿನಿಧಿ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಒಟ್ಟು 18 ಸಾಕ್ಷಿಗಳ ವಿಚಾರಣೆ ನಂತರ ವಿಶೇಷ ನ್ಯಾಯಾಲಯವು ಶಾಸಕ ಅನಿಲ ಬೆನಕೆ ಹಾಗೂ ಶಶಿಕಾಂತ ಪಾಟೀಲ ಇಬ್ಬರನ್ನು ಆರೋಪಮುಕ್ತ ಎಂದು ದಿನಾಂಕ 16.12.2022 ರಂದು ತೀರ್ಪು ಪ್ರಕಟಿಸಿದೆ.

ಸದರಿ ಪ್ರಕರಣದಲ್ಲಿ ಶಾಸಕ ಅನಿಲ ಬೆನಕೆ ಹಾಗೂ ಶಶಿಕಾಂತ ಪಾಟೀಲ ಇವರ ಪರವಾಗಿ ಭಾರತೀಯ ಜನತಾ ಪಕ್ಷದ ಕಾನೂನು ಪ್ರಕೋಷ್ಠ ರಾಜ್ಯ ಸಮಿತಿ ಸದಸ್ಯ ಹಾಗೂ ವಕೀಲರಾದ ದೇವರಾಜ ಬಸ್ತವಾಡೆ ಇವರು ವಾದವನ್ನು ಮಂಡಿಸಿದರು ಹಾಗೂ ಬೆಳಗಾವಿ ಮಹಾನಗರದ ಕಾನೂನು ಪ್ರಕೋಷ್ಠದ ಸಹ ಸಂಚಾಲಕ ಮತ್ತು ವಕೀಲರಾದ ಸಂದೀಪ ಎಸ್. ಇವರು ಹಾಜರಿದ್ದರು.

 

 

 

Related News

ಬೆಳಗಾವಿಯಲ್ಲಿ ಬ್ರಿಡ್ಜ್ ಮೇಲಿಂದ ಉರುಳಿಬಿದ್ದ ಟ್ಯಾಂಕರ್ ಅದೃಷ್ಟವಶಾತ್ ಬದುಕುಳಿದ ಚಾಲಕ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ವಾಹನವೊಂದು ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಮೇಲಿಂದ ಬಿದ್ದಿರುವ ಘಟನೆ ಎಂ.ಕೆ ಹುಬ್ಬಳ್ಳಿ ಸಮೀಪದಲ್ಲಿ ನಡೆದಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಹಾರಾಷ್ಟ್ರ ಮೂಲದ ರಾಮದಾಸ್...

ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಐವರ ಸಾವು

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಚಿ) ನಲ್ಲಿ ನಡೆದಿದೆ. ಮುನೀರ್(40), ನಯಾಮತ್ (40), ಮುದ್ದತ್ ಶಿರ್ (12), ರಮಿಜಾ ಬೇಗಂ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -