spot_img
spot_img
spot_img
34.1 C
Belagavi
Monday, May 29, 2023
spot_img

ಚರ್ಮ ಕುಶಲಕರ್ಮಿಗಳ ಆಶಾಕಿರಣ ಲಿಡ್ಕರ್ ಶಾಪನ್ನು ಉದ್ಘಾಟಿಸಿದ ಶಾಸಕ ಬೆನಕೆ

ಬೆಳಗಾವಿ : ಉತ್ತರ ಮತಕ್ಷೇತ್ರದ ಶಾಸಕ ಅನಿಲ್ ಬೆನಕೆ ಅವರು ಸಮಾಜ ಕಲ್ಯಾಣ ಇಲಾಖೆ ಡಾಕ್ಟರ್ ಬಾಬು ಜಗಜೀವನ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಅಡಿಯಲ್ಲಿ ಬರುವ ಚರ್ಮ ಕುಶಲಕರ್ಮಿಗಳ ಆಶಾಕಿರಣ ಲಿಡ್ಕರ್ ಶಾಪನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿನ ಚರ್ಮ ಉದ್ಯಮ ಬೆಳವಣಿಗೆ ಮತ್ತು ಪರಿಶಿಷ್ಟ ಜಾತಿಯ ಕುಶಲಕರ್ಮಿಗಳ ಅಭಿವೃದ್ಧಿ ಮೂಲ ಉದ್ದೇಶಗಳೊಂದಿಗೆ ಸರ್ಕಾರ ಸರ್ಕಾರವು 1976 ರಲ್ಲಿ ಡಾಕ್ಟರ್ ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿರುತ್ತದೆ.

ರಾಜ್ಯ ಸರ್ಕಾರದ ದ್ಯೇಯೋದ್ದೇಶಗಳನ್ನು ಗಮನದಲ್ಲಿಟ್ಟುಕೊಂಡು ನಿಗಮವು ಪರಿಶಿಷ್ಟ ಜಾತಿಯ ಚರ್ಮ ಕುಶಲಕರ್ಮಿಗಳ ಆರ್ಥಿಕ ಮತ್ತು ಸಾಮಾಜಿಕ ಬೆಳವಣಿಗಾಗಿ ಹಲವು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ ಎಂದು ತಿಳಿಸಿದರು.
ಮುಂದುವರಿದು ಮಾತನಾಡಿ, ರಾಜ್ಯ ಸರ್ಕಾರವು ಪ್ರತಿ ವರ್ಷವೂ ಸಮಾಜ ಕಲ್ಯಾಣ ಇಲಾಖೆಯ ಆಯವ್ಯಯದಲ್ಲಿ ಅನುದಾನವನ್ನು ನಿಗದಿ ಪಡಿಸುತ್ತಿದೆ.

ಅನುದಾನಕ್ಕೆ ತಕ್ಕಂತೆ ಮತ್ತು ಚರ್ಮ ಕುಶಲಕರ್ಮಿಗಳ ಜನಸಂಖ್ಯೆ ಗನುಗುಣವಾಗಿ ಜಿಲ್ಲಾವಾರು ಗುರಿ ನಿಗದಿ ಪಡಿಸಲಾಗಿದೆ ಕೆಲವು ಮುಂದುವರಿದ ಯೋಜನೆಗಳೊಂದಿಗೆ ಹೊಸ ಯೋಜನೆಗಳನ್ನು ರೂಪಿಸಿ ಸಮರ್ಪಿಸಲಾಗಿದೆ
ಚರ್ಮ ಕುಶಲಕರ್ಮಿಗಳು ಈ ಯೋಜನೆಗಳ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸದೃಢ ಆಗಬೇಕೆಂದು ನಿಗಮವು ಆಶಿಸುತ್ತದೆ ಎಂದರು.

Related News

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ, ಊಹಾಪೋಹಗಳಿಗೆ ಕಿವಿಗೊಡಬೇಡಿ: ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ. ಊಹಾಪೋಹಗಳಿಗೆ ಕಿವಿಗೊಡಬೇಡಿ, ಗಾಬರಿಯಾಗಬೇಡಿ ಯಾರು ಬೇಕಾದರೂ ಟೀಕೆ ಮಾಡಲಿ ಅದಕ್ಕೆ ನಾವು ಬೇಡ ಅನ್ನಲ್ಲ. ಎಲ್ಲರಿಗೂ ವಾಕ್​ ಸ್ವಾತಂತ್ರ್ಯ ಇದೆ. ಮಾತನಾಡುವವರು ನಮ್ಮನ್ನು ತಿದ್ದಲಿ, ನಾವು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -