spot_img
spot_img
spot_img
34.1 C
Belagavi
Monday, May 29, 2023
spot_img

1 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬೆನಕೆ 

ಬೆಳಗಾವಿ : ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ರವರು ಕ್ಷೇತ್ರದಲ್ಲಿ ಅಭಿವೃಧ್ದಿಯ ಪರ್ವವನ್ನು ಮುಂದುವರೆಸಿದ್ದು, ಅದರಂತೆಯೇ ಇಂದು ಬೆಳಗಾವಿ ನಗರದ ಮುಖ್ಯ ರಸ್ತೆ ಎನಿಸಿಕೊಂಡಿರುವ ಮಹಾಂತೇಶ ನಗರದ ಬ್ರಿಡ್ಜ ದಿಂದ ಕಣಬರ್ಗಿ ರಸ್ತೆ (ಸುರಭಿ ಹೊಟೆಲ್) ವರೆಗಿನ 2 ಕಿ.ಮೀ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯಡಿ 1 ಕೋಟಿ ರೂಪಾಯಿ ಅನುದಾನದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಅವರ ಅಮೃತ ಹಸ್ತದಿಂದ ಭೂಮಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ಈಗಾಗಲೇ ನಗರದಲ್ಲಿ ಎಲ್ಲ ಕಡೆಗಳಲ್ಲಿ ಅಭಿವೃಧ್ದಿ ಕಾಮಗಾರಿಗಳು ಚಾಲ್ತಿಯಲ್ಲಿವೆ ಅದರಂತೆಯೇ ಇಂದು ನಗರದ ಮುಖ್ಯ ರಸ್ತೆಯಾಗಿರುವ ಮಹಾಂತೇಶ ನಗರ ಬ್ರಿಡ್ಜ ಕಡೆಗಿನ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪಲೈನ್ ಕಾಮಗಾರಿಯು ನಡೆಯುತ್ತಿದ್ದರಿಂದ ರಸ್ತೆ ನಿರ್ಮಾಣ ಕಾಮಗಾರಿಯು ತಡವಾಗಿತ್ತು. ಆದ್ದರಿಂದ ಸದ್ಯ ಮಹಾಂತೇಶ ನಗರ ಬ್ರಿಡ್ಜ ರಸ್ತೆ ಯಿಂದ ಕಣಬರ್ಗಿ ರಸ್ತೆ (ಸುರಭಿ ಹೊಟೆಲ್) ವರೆಗಿನ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಡಿಯ 1 ಕೋಟಿ ರೂಪಾಯಿ ಅನುದಾನದಲ್ಲಿ ಕಾಮಗಾರಿಯನ್ನು ಕೈಗೊಳ್ಳಲು ಭೂಮಿ ಪೂಜೆಯನ್ನು ನೆರವೇರಿಸಲಾಗಿದೆ ಎಂದು ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ನಗರ ಸೇವಕರು, ಅಲ್ಲಿನ ರಹವಾಸಿಗಳು ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಅರವಿಂದ ದ್ಯಾಮನ್ನವರ, ಗುತ್ತಿಗೆದಾರ ಭರತೇಶ ಬುಡವಿ ಹಾಗೂ ಇತರರು ಉಪಸ್ಥಿತರಿದ್ದರು.

 

Related News

ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ವಂದೇ ಭಾರತ್ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಅಸ್ಸಾಂನ ಗುವಾಹಟಿಗೆ ಹೊರಟಿದೆ. ಈ...

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -