spot_img
spot_img
spot_img
34.1 C
Belagavi
Monday, May 29, 2023
spot_img

ಪ್ರಸಿದ್ಧ ಶ್ರೀಸಿದ್ದೇಶ್ವರ ದೇವಸ್ಥಾನದ ಅಭಿವೃಧ್ದಿ ಕುರಿತು ಶಾಸಕ ಬೆನಕೆ ಸಭೆ

ಬೆಳಗಾವಿ : ಕಣಬರ್ಗಿಯ ಶ್ರೀ. ಸಿದ್ದೇಶ್ವರ ಮಂದಿರದ ಮೂಲಭೂತ ಸೌಲಭ್ಯಗಳು ಹಾಗೂ ಅಲ್ಲಿನ ಅಭಿವೃಧ್ದಿ ಕಾಮಗಾರಿಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ದೇವಸ್ಥಾನದ ಪಂಚ ಕಮೀಟಿ ಅವರೊಂದಿಗೆ ಶಾಸಕ ಅನಿಲ ಬೆನಕೆರವರು ಸಭೆ ನಡೆಸಿದರು.

ಬೆಳಗಾವಿ ನಗರದ ಸುಪ್ರಸಿದ್ದ ಹಾಗೂ ಪುರಾತನ ದೇವಸ್ಥಾನವಾದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ರಸ್ತೆ, ಶುಧ್ದ ಕುಡಿಯುವ ನೀರಿನ ಘಟಕ, ವಿದ್ಯುತ್ ದೀಪ, ಶೌಚಾಲಯ ವ್ಯವಸ್ಥೆ, ಪೇವರ್ಸ ಅಳವಡಿಕೆ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮಾಡುವ ಕುರಿತು ದೇವಸ್ಥಾನದ ಪಂಚರು ಹಾಗೂ ಪ್ರಮುಖರೊಂದಿಗೆ ಚರ್ಚೆ ನಡೆಸಿದರು. ನಂತರದಲ್ಲಿ ಬರುವ ಸೋಮವಾರದಂದು ಸಂಬಂಧಿತ ಅಧಿಕಾರಿಗಳೊಂದಿಗೆ ಬೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆಯನ್ನು ನೀಡಿದರು.

ಸುಪ್ರಸಿದ್ದ ಶ್ರಿ ಸಿದ್ದೇಶ್ವರ ದೇವಸ್ಥಾನದ ಸರ್ವಾಂಗೀಣ ಅಭಿವೃಧ್ದಿಗೆ ಪಣತೊಟ್ಟಿದ್ದು, ಅಗತ್ಯ ಅನುದಾನ ಬಿಡುಗಡೆ ಮಾಡಿ ನಗರದ ಪುರಾತಣ ದೇವಸ್ಥಾನವನ್ನು ಅಭಿವೃಧ್ದಿಗೊಳಿಸಿ ಇನ್ನಷ್ಟು ಮೆರಗು ನೀಡಿ ಪ್ರವಾಸಿತಾಣವಾಗಿ ಮಾಡುವುದಾಗಿ ತಿಳಿಸಿದರು. ಶಾಸಕರ ಈ ಪ್ರಯತ್ನಕ್ಕೆ ಗ್ರಾಮದ ಪಂಚರು ಮತ್ತು ಮುಖಂಡರು ಹಾಗೂ ಹಿರಿಯರು ಬೆಂಬಲದೊಂದಿಗೆ ಸಂತಸವನ್ನು ವ್ಯಕ್ತಪಡಿಸಿದರು.

Related News

ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ವಂದೇ ಭಾರತ್ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಅಸ್ಸಾಂನ ಗುವಾಹಟಿಗೆ ಹೊರಟಿದೆ. ಈ...

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -