spot_img
spot_img
spot_img
34.1 C
Belagavi
Monday, May 29, 2023
spot_img

ಕ್ಷೇತ್ರದ ಅಭಿವೃದ್ಧಿಗೆ ಮತ್ತೆ ಒಂದು ಹೆಜ್ಜೆ ಮುಂದೆ ಇಟ್ಟು ಶಾಸಕ ಬೆನಕೆ

ಬೆಳಗಾವಿ, : ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಹಲವಾರು ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ, ಮತ್ತೆ ಕ್ಷೇತ್ರದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇಂದು ಶಾಸಕ ಅನಿಲ ಬೆನಕೆ ಅವರು, ಸದಾಶಿವ ನಗರದ ಸ್ಮಶಾನ ಭೂಮಿಯಲ್ಲಿ ಬರ್ನಿಂಗ್ ಸ್ಟಾಂಡ್, ಪೆವರ್ಸ ಅಳವಡಿಕೆ ಹಾಗೂ ಆಸನ ಅಳವಡಿಕೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಸದಾಶಿವ ನಗರದ ಲಿಂಗಾಯತ ರುದ್ರ ಭೂಮಿಯಲ್ಲಿ ಪೆವರ್ಸ ಅಳವಡಿಕೆ, ಶೌಚಾಲಯ, ಶೆಡ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

ಬಳಿಕ ನ್ಯೂ ಗಾಂಧಿ ನಗರ, ಅಮನ ನಗರ, ಮಾರುತಿ ನಗರ ಹಾಗೂ ಬಸವನ ಕುಡಚಿಯಲ್ಲಿ ಜನರ ಸಮಸ್ಯೆ ಅಲಿಸಿದ ಶಾಸಕ ಅನಿಲ ಬೆನಕೆ ಅವರು, ರಸ್ತೆ, ಚರಂಡಿ, ಡ್ರೇನೆಜ್ ಹಾಗೂ ನಾಲಾ ಕಾಮಗಾರಿಗೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಶಾಸಕ ಅನಿಲ ಬೆನಕೆ ಅವರು, ಇಂದು ಕ್ಷೇತ್ರದಲ್ಲಿ ಹಲವಾರು ಕಾಮಗಾರಿಗೆ ಚಾಲನೆ ನೀಡಲಾಗಿದೆ. ಒಟ್ಟು 3 ಕೋಟಿಗೂ ಹೆಚ್ಚು ವೆಚ್ಚದ ಕಾಮಗಾರಿಗೆ ಲೋಕೋಪಯೋಗಿ ಇಲಾಖೆ ವತಿಯಿಂದ ಚಾಲನೆ ನೀಡಲಾಗಿದೆ. ಈ ಪ್ರದೇಶದಲ್ಲಿ ಹಲವಾರು ಸಮಸ್ಯೆ ಇದ್ದು, ಮುಂದಿನ ದಿನಗಳಲ್ಲಿ ಪರಿಹಾರ ನೀಡುತ್ತೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರೊಂದಿಗೆ ನ್ಯೂ ಗಾಂಧೀ ನಗರದಲ್ಲಿ ಜೈ ಕರ್ನಾಟಕ ಜನಪರ ವಿಧಿಕೆಯ ಜಿಲ್ಲಾಧ್ಯಕ್ಷರು ಇರ್ಫಾನ ಅತ್ತಾರ, ಸಮಾಜಸೇವಕರು ಸಮೀರ ಮಿರ್ಝಾ, ಬಿಜೆಪಿ ಯುವಾನೆತೆ ನಿಖೀಲ ಮುರಕುಟೆ, ಮಾನವ ಹಕ್ಕ ಅಧಿಕಾರಿಗಳು ಜಿಲ್ಲಾಧಿಕಾರಿಗಳು ಸುಧೀರ ಸಂಭಾಜಿ, ಸಮಾಜಸೆವಕರು ವಸೀಮ ನದಾಫ ಮತ್ತು ರಹಿವಾಸಿಗಳು ಉಪಸ್ಥಿತರಿದ್ದರು.

 

Related News

ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ವಂದೇ ಭಾರತ್ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಅಸ್ಸಾಂನ ಗುವಾಹಟಿಗೆ ಹೊರಟಿದೆ. ಈ...

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -