spot_img
spot_img
spot_img
34.1 C
Belagavi
Monday, May 29, 2023
spot_img

1.40 ಕೋಟಿ ರೂ. ವೆಚ್ಚದ ಬೆಳಗುಂದಿ- ಬೆಳಗಾವಿ ರಸ್ತೆಗೆ ಶಾಸಕಿ ಹೆಬ್ಬಾಳಕರ್ ಚಾಲನೆ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿ ಗ್ರಾಮದಿಂದ ಬೆಳಗಾವಿ ವರೆಗೆ ರಸ್ತೆಯನ್ನು ನಿರ್ಮಾಣ ಮಾಡುವ ಉದ್ದೇಶದಿಂದ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ 1.40 ಕೋಟಿ ರೂ,ಗಳನ್ನು ಮಂಜೂರು ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಕಲ್ಲೆಹೋಳ ಕಾರ್ನರ್ ವಡ್ರಾಂಗಿ ಪ್ರದೇಶದಲ್ಲಿ ಸೋಮವಾರ ಭೂಮಿ ಪೂಜೆಯನ್ನು ಕೈಗೊಂಡು ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಕ್ಷೇತ್ರದಲ್ಲಿ ಬಹುಕೋಟಿ ವೆಚ್ಚದಲ್ಲಿ ಈವರೆಗೆ ಅನೇಕ ರಸ್ತೆಗಳನ್ನು ಅಭಿವೃದ್ಧಿಪಡಿಸಿದ್ದು ರಾಜ್ಯದಲ್ಲೇ ಮಾದರಿ ಕ್ಷೇತ್ರವಾಗಿ ರೂಪುಗೊಳಿಸಲಾಗುತ್ತಿದೆ. ಇನ್ನೂ ಹೆಚ್ಚು ಅಭಿವೃದ್ಧಿಯ ಗುರಿ ಹೊಂದಿದ್ದು ಸಾರ್ವಜನಿಕರ ಸಹಕಾರ ಅಗತ್ಯ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮನೋಹರ್ ಬೆಳಗಾಂವ್ಕರ್, ಮಹೇಶ ಪಾಟೀಲ, ನಾಮದೇವ ಮೋರೆ, ಮಲ್ಲಪ್ಪ ಪಾಟೀಲ, ಶಿವಾಜಿ ಪಾಟೀಲ, ಬಾಗಣ್ಣ ನರೋಟಿ, ಪರಶುರಾಮ ಬಾಸ್ಕಳ, ಮನೋಹರ ಪಾಟೀಲ, ರೆಹಮಾನ್ ತಹಶಿಲ್ದಾರ, ಶಿವಾಜಿ ಬೆಟಗೇರಿಕರ್, ಶಿವಾಜಿ ಬೋಕಡೆ, ಮಹಾದೇವ ಪಾಟೀಲ, ಪ್ರಭಾಕರ್ ಚಿರಮುರ್ಕರ್, ನಿಂಗೂಲಿ ಚೌಹಾನ್, ವನಿತಾ ಪಾಟೀಲ, ಮಾರುತಿ ಪಾಟೀಲ, ಮದನ ಬಿಜಗಿರಕರ್, ಪರುಶರಾಮ ಯಳ್ಳೂರಕರ್, ವಿಲಾಸ ಪಾಟೀಲ, ದಾಕಳು ಪಾಟೀಲ, ಯಲ್ಲಪ್ಪ ಕಲಕಾಂಬ್ಕರ್, ಕಲ್ಲಪ್ಪ ಕನ್ನೂರಕರ್, ರವಿ ಜಾಧವ್, ರಂಜನಾ ಗಾವಡೆ, ಆಪ್ತ ಸಹಾಯಕರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related News

ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ವಂದೇ ಭಾರತ್ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಅಸ್ಸಾಂನ ಗುವಾಹಟಿಗೆ ಹೊರಟಿದೆ. ಈ...

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -