Ad imageAd image

ಸರ್ಕಾರ ವೈಫಲ್ಯಗಳನ್ನು ಮುಚ್ಚಿ ಹಾಕಲು ಪ್ರಯತ್ನ ಮಾಡುತ್ತಿದೆ: ಮುರುಘೇಂದ್ರ ಗೌಡ ಪಾಟೀಲ್

ratnakar
ಸರ್ಕಾರ ವೈಫಲ್ಯಗಳನ್ನು ಮುಚ್ಚಿ ಹಾಕಲು ಪ್ರಯತ್ನ ಮಾಡುತ್ತಿದೆ: ಮುರುಘೇಂದ್ರ ಗೌಡ ಪಾಟೀಲ್
WhatsApp Group Join Now
Telegram Group Join Now

ಬೆಳಗಾವಿ: ಮಾಜಿ ಸಂಸದ ಡಿಕೆ ಸುರೇಶ್ ಅವರ ಹೇಳಿಕೆಯನ್ನು ಖಂಡಿಸಿ ಬೆಳಗಾವಿ ಭಾರತೀಯ ಜನತಾ ಪಕ್ಷದ ನಾಯಕ ಮುರುಘೇಂದ್ರ ಗೌಡ ಪಾಟೀಲ ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷದ 27 ಕಾರ್ಯಕರ್ತರು ಬೆಳಗಾವಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಭವನಕ್ಕೆ ಮುತ್ತಿಗೆ ಹಾಕುವ ಪ್ರಕರಣದಲ್ಲಿ ಕೇಸ್ ದಾಖಲು ಮಾಡಲಾಗಿತ್ತು ಅದರಂತೆ ಇಂದು ನ್ಯಾಯಕ್ಕೆ 27 ಬಿಜೆಪಿ ಕಾರ್ಯಕರ್ತರು ಹಾಜರಾಗಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಮುರುಘೇಂದ್ರ ಗೌಡ ಪಾಟೀಲ ಸುದ್ದಿಗಾರರ ಜೋತೆ ಮಾತನಾಡಿ ಕರ್ನಾಟಕದ ಕಾಂಗ್ರೆಸ್ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಲು ಕಾರ್ಯಕರ್ತರು ಹಾಗೂ ಭಾರತೀಯ ಜನತಾ ಪಕ್ಷದ ನಾಯಕರಗಳ ಮೇಲೆ ಕಾನೂನಾತ್ಮಕ ಕ್ರಮ ಕೈಗೊಂಡು ಸರ್ಕಾರದ ಭ್ರಷ್ಟಾಚಾರವನ್ನು ಮುಚ್ಚಿ ಹಾಕಲು ಪ್ರಯತ್ನ ನಡೆಯುತ್ತಿದೆ. ಸರ್ಕಾರ ಹಿಂದುಳಿದ SC / ST ಅನುದಾನ ದುರ್ಬಳಕೆ , ಮೂಡಾ ಹಗರಣ, ಭ್ರಷ್ಟಾಚಾರ ಪ್ರಕರಣಗಳಲ್ಲಿ ಸರ್ಕಾರ ಆರೋಪ ಎದುರಿಸುತ್ತಿದೆ.

ಈ ವೈಫಲ್ಯಗಳನ್ನು ಮುಚ್ಚಿ ಹಾಕಲು ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರಗಳ ಮೇಲೆ ಕಾನೂನಾತ್ಮಕ ಕ್ರಮ ಕೈಗೊಳ್ಳುತ್ತಿರುವುದು ದುರದೃಷ್ಟ ಎಂದು ಸರಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿಗಳು ವಿರುದ್ಧ ವಾಗ್ದಾಳಿ ನಡೆಸಿದರು.

WhatsApp Group Join Now
Telegram Group Join Now
Share This Article