spot_img
spot_img
spot_img
spot_img
spot_img
spot_img
spot_img
spot_img
spot_img
26.1 C
Belagavi
Friday, September 22, 2023
spot_img

ಸಂಗೀತ ಮತ್ತು ಯೋಗ ಸ್ವಾಸ್ಥ್ಯ ಜೀವನದ ಮೂಲ: ಪಂ.ಸಿದ್ದರಾಮಯ್ಯ ಮಠಪತಿ

ಬಾಗಲಕೋಟೆ: ಸಂಗೀತ ಮತ್ತು ಯೋಗದಲ್ಲಿ ತೊಡಗಿಸಿಕೊಳ್ಳುವುದರಿಂದ ವ್ಯಕ್ತಿತ್ವ ವಿಕಸನದ ಜೊತೆಗೆ ಏಕಾಗ್ರತೆಯನ್ನು ಬೆಳಸಿಕೊಳ್ಳಲು ಸಾಧ್ಯ ಎಂದು ಡಾ. ಪುಟ್ಟರಾಜ ಗವಾಯಿ ಸ್ಕೂಲ್ ಆಫ್ ಮ್ಯೂಸಿಕ್ ಸಂಯೋಜಕರಾದ ಪಂ.ಸಿದ್ದರಾಮಯ್ಯ ಮಠಪತಿ ಹೇಳಿದರು.

ಬಿವ್ಹಿವ್ಹಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಡಾ.ಪುಟ್ಟರಾಜ ಗವಾಯಿ ಸ್ಕೂಲ್ ಆಫ್ ಮ್ಯೂಜಿಕ್, ಐಕ್ಯೂಎಸಿ ಮತ್ತು ಸಂಸ್ಕೃತಿಕ ವಿಭಾಗ ಹಾಗೂ ಸಂಗೀತ ವಿಭಾಗದ ಸಹಯೋಗದಲ್ಲಿ ಬುದುವಾರ ಹಮ್ಮಿಕೊಳ್ಳಲಾದ ಅಂತರಾಷ್ಟ್ರೀಯ ಸಂಗೀತ ಮತ್ತು ಯೋಗ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಕರ್ನಾಟಕದಲ್ಲಿಯೇ ಮೋದಲ ಭಾರಿಗೆ ಅಂತರಾಷ್ಟ್ರೀಯ ಸಂಗೀತ ದಿನಾಚರಣೆ ಮಾಡಿದ ಹೆಮ್ಮೆ ಬಾಗಲಕೋಟೆಯ ಜಿಲ್ಲಾ ಸಂಗೀತಗಾರರಿಗೆ ಸಲ್ಲುತ್ತದೆ. ಸಂಗೀತ ಕ್ಷೇತ್ರದಲ್ಲಿ ಹೇರಳ ಅವಕಾಶಗಳಿದ್ದು ವಿದ್ಯಾರ್ಥಿಗಳು ಸಂಗೀತ ಕ್ಷೇತ್ರದತ್ತ ಒಲವು ತೋರಬೇಕು. ಮಹಾವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಲ್ಲದೆ ಸಂಗೀತ ವಿಭಾಗಗಳು ಮುಚ್ಚುತ್ತಿರುವುದು ಖೇದಕರ ಸಂಗತಿ ಎಂದರು.

ಸಂಗೀತವು ಸರ್ವವ್ಯಾಪಿಯಾಗಿದ್ದು ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಸರಕಾರ ಮತ್ತು ಸಂಗೀತಾಸಕ್ತರು ಕಾರ್ಯತಪ್ತರಾಗಬೇಕು. ಪದವಿ ಮತ್ತು ಸ್ನಾತಕ ಮಟ್ಟದಲ್ಲಿ ಹೆಚ್ಚು ಸಂಖ್ಯೆಯಲ್ಲಿ ಸಂಗೀತ ವಿಭಾಗಗಳನ್ನು ಪ್ರಾರಂಭಿಸಬೇಕು. ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಮಾರ್ಗದರ್ಶಕರನ್ನಾಗಿಸಿಕೊಂಡು ಸಂಗೀತಕ್ಕೆ ತಮ್ಮದೆಯಾದ ಕೊಡುಗೆಯನ್ನು ನೀಡಲು ಪ್ರಯತ್ನಿಸಿದಾಗ ಮಾತ್ರ ಅರ್ಥಗರ್ಭಿತ ದಿನಾಚರಣೆಯಾಗಲು ಸಾಧ್ಯ ಎಂದರು.

ಪ್ರಾಚಾರ್ಯರಾದ ಎಸ್.ಆರ್ ಮುಗನೂರಮಠ ಅವರು ಅಧ್ಯಕ್ಷೀಯವಾಗಿ ಮಾತನಾಡಿ ಯೋಗ ಮತ್ತು ಸಂಗೀತಾಭ್ಯಾಸಗಳು ಸೃಜನಶೀಲತೆಯ ಮೂಲವಾಗಿದ್ದು ಇವುಗಳೆರಡೂ ಶ್ವಾಸ ಕ್ರಿಯೆಯಿಂದ ಹುಟ್ಟುವ ಒಂದೇ ಆಯಾಮದ ಎರಡು ಮುಖಗಳಾಗಿವೆ. ಯೋಗ ಮತ್ತು ಸಂಗೀತದಿಂದ ಭಾವನಾತ್ಮಕ ನಿಯಂತ್ರಣ, ಮಾನಸಿಕ ನೆಮ್ಮದಿ ಮತ್ತು ಆರೋಗ್ಯ ವೃದ್ಧಿ ಮಾಡಿಕೊಳ್ಳಲು ಸಾಧ್ಯ ಎಂದರು.

ಯೋಗಿ, ಋಷಿಮುನಿಗಳು ಧ್ಯಾನದ ಮೂಲವಾಗಿ ಸಂಗೀತ ಮತ್ತು ಯೋಗವನ್ನು ಅಭ್ಯಾಸ ಮಾಡುತ್ತಾ ಬಂದಿದ್ದು ಇದೀಗ ನಾವು ಎರಡು ವಿಧಗಳಾಗಿ ವಿಂಗಡಿಸಿ ಅಭ್ಯಾಸದಲ್ಲಿ ತೊಡಗಿದ್ದೆವೆ ಇವುಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಯಶಸ್ಸು ಪಡೆಯಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಗೀತ ವಿಭಾಗದ ಮುಖ್ಯಸ್ಥರಾದ ಡಾ. ಕೆ.ವಿ ಮಠ ಪ್ರಾಸ್ಥಾವಿಕವಾಗಿ ಮಾತನಾಡಿದರು. ಐಕ್ಯೂಎಸಿ ಸಂಯೋಜಕರಾದ ಅಪ್ಪು ರಾಠೋಡ, ಪ್ರಾದ್ಯಾಪಕರುಗಳಾದ ಆರ್.ಎಮ್ ಬೆನ್ನೂರ, ಸಿ.ಎಮ್ ಮಠದ ಸೇರಿದಂತೆ ವಿವಿಧ ವಿಭಾಗದ ಪ್ರಾದ್ಯಾಪಕರುಗಳು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿದ್ಯಾರ್ಥಿಗಳಿಂದ ಗೀತಗಾಯನ ಮತ್ತು ಯೋಗ ಪ್ರದರ್ಶನ:ಕಾರ್ಯಕ್ರಮದಲ್ಲಿ ಯೋಗ ದಿನಾಚರಣೆ ಅಂಗವಾಗಿ ಮಹಾವಿದ್ಯಾಲಯದ ವಿದ್ಯಾರ್ಥಿನಿಯಾದ ಕಾವ್ಯಾ ಹಡಪದ ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶನ ಮಾಡಿದರು. ಸಂಗೀತ ದಿನದ ಅಂಗವಾಗಿ ಡಾ. ಪುಟ್ಟರಾಜ ಗವಾಯಿ ಸ್ಕೂಲ್ ಆಫ್ ಮ್ಯೂಜಿಕ್ ಅಕ್ಕನ ಬಳಗದ ಸದಸ್ಯರಿಂದ ಮತ್ತು ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಸಾಮೂಹಿಕ ಗೀತಗಾಯನ ಪ್ರದರ್ಶನ ಮಾಡಲಾಯಿತು. ಡಾ. ಕೆ.ವಿ ಮಠ ಸಿತಾರ ವಾದನ, ಆರ್. ಎಮ್ ಬೆನ್ನೂರ ತಬಲಾ ಸಾಥಿಯಾದರು, ಡಾ. ಸಿದ್ದರಾಮಯ್ಯ ಮಠಪತಿ, ಸಿ.ಎಮ್ ಮಠದ ಗಾಯನ ಸುಧೆ ನೀಡಿದರು.

Related News

ಬೆಳಗಾವಿ ಜಿಲ್ಲೆಯಲ್ಲಿ 14 ಗ್ರಾ.ಪಂಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ. ಖಾನಾಪುರ – ಬೇಕವಾಡ, ಕಿತ್ತೂರು –...

ಚಂದ್ರಯಾನ-3 ಮೇಲೆ ಇಸ್ರೋ ಕಣ್ಣು ಇಂದು ಎಚ್ಚೆತ್ತುಕ್ಕೊಳ್ಳುತ್ತಾ ಲ್ಯಾಂಡರ್ ಮತ್ತು ರೋವರ್

ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -