LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

2ನೇ ಮಗು ಪಡೆದರೆ ₹25 ಸಾವಿರ ಪ್ರೋತ್ಸಾಹಧನ: ನಾಯ್ಡು

ಅಮರಾವತಿ: ಆಂಧ್ರಪ್ರದೇಶದಲ್ಲಿ ಕುಸಿಯುತ್ತಿರುವ ಜನನ ಪ್ರಮಾಣ ಹೆಚ್ಚಿಸಲು ಎರಡನೇ ಮಗು ಪಡೆಯುವ ದಂಪತಿಗೆ ₹25 ಸಾವಿರ 'ಜನನ ಪ್ರೋತ್ಸಾಹಧನ' ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.


ಗುರುವಾರ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು, 'ರಾಜ್ಯದಲ್ಲಿ ಪ್ರಸ್ತುತ ಒಟ್ಟು ಫಲವಂತಿಕೆ ದರ 1.5ರಷ್ಟಿದ್ದು, ಇದು ನಿಗದಿತ ಮಟ್ಟಕ್ಕಿಂತ ಕಡಿಮೆಯಿದೆ.




ಇದನ್ನು 2.1ಕ್ಕೆ ಏರಿಸುವುದು ಸರ್ಕಾರದ ಉದ್ದೇಶವಾಗಿದೆ' ಎಂದು ಹೇಳಿದ್ದಾರೆ.





'ನಾವು ಹೊಸ ವಿಧಾನವನ್ನು ಪರಿಶೀಲಿಸುತ್ತಿದ್ದೇವೆ. ಎರಡನೇ ಮಗು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಪಡೆಯುವ ಪೋಷಕರಿಗೆ ಹೆರಿಗೆಯ ಸಮಯದಲ್ಲಿಯೇ ₹25 ಸಾವಿರ ನೀಡಲಾಗುವುದು. ಇದು ದೊಡ್ಡ ಮಟ್ಟದ ಬದಲಾವಣೆ ತರಲಿದೆ. ಇದು ಸಾಧ್ಯವಾದರೆ, ತುಂಬಾ ಉಪಯುಕ್ತವಾಗಲಿದೆ' ಎಂದು ನಾಯ್ಡು ತಿಳಿಸಿದ್ದಾರೆ.





'ವಯಸ್ಸಾದ ಜನರಿಂದಾಗಿ ಅನೇಕ ದೇಶಗಳು ವಿವಿಧ ಸವಾಲುಗಳನ್ನು ಎದುರಿಸುತ್ತಿವೆ. ರಾಜ್ಯ ಸರ್ಕಾರವು ಮಾರ್ಚ್‌ ಅಂತ್ಯದ ವೇಳೆಗೆ ಜನಸಂಖ್ಯಾ ನಿರ್ವಹಣೆಯ ಕುರಿತು ನೀತಿಯನ್ನು ರೂಪಿಸಿ ಏಪ್ರಿಲ್‌ನಿಂದ ಜಾರಿಗೆ ತರಲು ಚಿಂತನೆ ನಡೆಸಿದೆ' ಎಂದಿದ್ದಾರೆ.



Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಲಿಕೆ ಬಿಜೆಪಿ ಸದಸ್ಯರ ವಿರುದ್ಧ ವಿಜಯೇಂದ್ರಗೆ ವಿವಿಧ ಕನ್ನಡ ಸಂಘಟನೆಗಳ ದೂರುಪಾಲಿಕೆ ವಿರುದ್ಧ ಹೋರಾಟ ಮುಂದುವರಿಸಲು ವಿವಿಧ ಕನ್ನಡ ಸಂಘಟನೆಗಳ ನಿರ್ಧಾರಬೆಳಗಾವಿ ನಗರದ ‘ಸ್ವಚ್ಛ ಶನಿವಾರ’ ಅಭಿಯಾನಕ್ಕೆ ಜಿಪಂ ಆವರಣದಲ್ಲಿ ಚಾಲನೆವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವುಕರ್ನಾಟಕ ಹೈಕೋರ್ಟ್‌ನಲ್ಲಿ ಬೃಹತ್ ನೇಮಕಾತಿ: SSLC ಪಾಸಾದವರಿಗೆ ಸುವರ್ಣಾವಕಾಶ!ಪೊಲೀಸ್ ಠಾಣೆಯಲ್ಲೇ ಪ್ರೇಮಿಗಳ ಕುಟುಂಬದ ಮಧ್ಯೆ ಗಲಾಟೆ, ಗರ್ಭಿಣಿ ಮೇಲೂ ಹಲ್ಲೆ!ರಾಜ್ಯದಲ್ಲಿ ವರುಣನ ರೌದ್ರಾವತಾರಕ್ಕೆ ಇಬ್ಬರು ಬಲಿ: ಮೈಸೂರಲ್ಲಿ ರೈತ ಮಹಿಳೆ, ಬಳ್ಳಾರಿಯಲ್ಲಿ ಯುವಕ ಸಿಡಿಲಿಗೆ ಸಾವು!ಬೆಂಗ್ಳೂರು – ಮೈಸೂರು ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ 26 ಲಕ್ಷ ದೋಚಿದ ಖದೀಮರುಚನ್ನಗಿರಿಯಲ್ಲಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆಡಿಕೆಶಿ ಮುಂದಿನ ಸಿಎಂ ಬ್ಯಾನರ್, ಕಾರ್ಯಕರ್ತರ ಅಭಿಮಾನ ತಡಿಯೋಕೆ ಸಾಧ್ಯವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್