LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಮೀನಿಗಾಗಿ 20 ವರ್ಷಗಳಿಂದ ಅಲೆದಾಟ – ಕಾರ್ಗಿಲ್‌ ಯುದ್ಧದಲ್ಲಿ ಹೋರಾಡಿದ್ದ ಯೋಧನಿಂದ ಆತ್ಮಹತ್ಯೆಗೆ ಯತ್ನ

Advertisement
Advertisement
Advertisement

ಚಿಕ್ಕಬಳ್ಳಾಪುರ: ಜಮೀನಿಗಾಗಿ 20 ವರ್ಷಗಳ ಕಾಲ ಅಲೆದಾಡಿ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಮಾಜಿ ಯೋಧರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಂತಾಮಣಿಯಲ್ಲಿ ನಡೆದಿದೆ.

ರಾಯಪಲ್ಲಿ ನಿವಾಸಿ ಮಾಜಿ ಸೈನಿಕ ಶಿವಾನಂದ ರೆಡ್ಡಿ ವಿಷ ಸೇವಿಸಿದ ಮಾಜಿ ಯೋಧ. 1987ರಲ್ಲಿ ಭಾರತೀಯ ಸೇನೆ ಸೇರಿದ್ದ ಇವರು, 1999ರ ಕಾರ್ಗಿಲ್ ಯುದ್ಧದ ವೇಳೆ ಜಮ್ಮು-ಕಾಶ್ಮೀರದ ಪೂಂಚ್ ಸೆಕ್ಟರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಗಂಭೀರವಾಗಿ ಗಾಯಗೊಂಡಿದ್ದರು. ಕಾಲಿಗೆ ಫ್ರ‍್ಯಾಕ್ಚರ್ ಆಗಿ ವಿಕಲಚೇತನರಾಗಿ ಕೊನೆಗೆ 2004ರಲ್ಲಿ ನಿವೃತ್ತರಾಗಿದ್ದರು. 

ಸೇನೆಯಲ್ಲಿದ್ದಾಗಲೇ ಅವರಿಗೆ ಸರ್ಕಾರದ ನಿಯಮದಡಿ ಕೃಷಿ ಜಮೀನು ಮಂಜೂರು ಮಾಡಲು ಸೇನೆಯ ಹಿರಿಯ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಆದರೆ ನಿವೃತ್ತಿಯಾದ ನಂತರ ಆರಂಭವಾದ ಸರ್ಕಾರಿ ಕಚೇರಿಗಳ ಅಲೆದಾಟ ಇಂದಿಗೂ ಮುಗಿದಿಲ್ಲ. 2004ರಿಂದ ಇಲ್ಲಿಯವರೆಗೂ ನಿರಂತರವಾಗಿ ಚಿಂತಾಮಣಿ ತಹಶೀಲ್ದಾರ್ ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಕಂದಾಯ ಇಲಾಖೆ ಸೇರಿದಂತೆ ಹಲವು ಕಚೇರಿಗಳಿಗೆ ಅಲೆದಾಡಿದರೂ, ಸರ್ಕಾರಿ ಜಮೀನು ಸಿಕ್ಕಿಲ್ಲ. ಇದ್ರಿಂದ ಕೆಲವು ದಿನಗಳ ಹಿಂದೆ ಚಿಂತಾಮಣಿ ತಾಲೂಕು ಕಚೇರಿ ಮುಂದೆ ಧರಣಿ ನಡೆಸಿದ್ದರು.

ಹೋರಾಟದ ಬಳಿಕ ಚಿಂತಾಮಣಿ ತಹಶಿಲ್ದಾರ್ ಕಚೇರಿ ಅಧಿಕಾರಿಗಳು ಜಮೀನು ಗುರುತಿಸಿದ್ದರು. ಆದರೆ ಜಮೀನು ಸರ್ವೆ ನಡೆಸಿ ದಾಖಲೆ ನೀಡಲು ಕೆಲವು ತಿಂಗಳ ಹಿಂದೆ ಅಧಿಕಾರಿಗಳು 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ 5 ಲಕ್ಷ ರೂ. ನೀಡುವುದಾಗಿ ಹೇಳಿ, ಶಿವಾನಂದ ರೆಡ್ಡಿಯವರು ಲೋಕಾಯುಕ್ತ ಪೊಲೀಸರಿಗೆ ಕಂದಾಯ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿದುಕೊಟ್ಟಿದ್ದರು. ಇದರಿಂದ ಇಬ್ಬರು ಅಧಿಕಾರಿಗಳು ಅಮಾನತಾಗಿದ್ದರು.

ಇದೇ ದ್ವೇಷದಿಂದ ಈಗ ಸಿಬ್ಬಂದಿ, ಅಧಿಕಾರಿಗಳು, ಶಿವಾನಂದರೆಡ್ಡಿ ಅವರಿಗೆ ತಾಲೂಕಿನಲ್ಲಿ ಸರ್ಕಾರಿ ಜಮೀನು ಇಲ್ಲವೆಂದು ಎನ್.ಒ.ಸಿ ನೀಡಿ ಅನ್ಯಾಯ ಮಾಡಲು ಹೊರಟಿರುವ ಆರೋಪ ಕೇಳಿ ಬಂದಿದೆ. ಇದರಿಂದ ನೊಂದ ಮಾಜಿ ಸೈನಿಕ ಇಂದು (ಆ.28) ತಾಲೂಕು ಕಚೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರ ಆರೋಗ್ಯ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ದೇಶಕ್ಕಾಗಿ ಜೀವವನ್ನೇ ಪಣಕ್ಕಿಟ್ಟು ಹೋರಾಡಿದ ಮಾಜಿ ಯೋಧನೊಬ್ಬ, ತನ್ನ ಹಕ್ಕಿನ ಜಮೀನು ಪಡೆಯಲು 20 ವರ್ಷಗಳ ಕಾಲ ಸರ್ಕಾರಿ ಕಚೇರಿಗಳ ಅಲೆದಾಡಬೇಕಾಯಿತು. ಲಂಚದ ವಿರುದ್ಧ ಹೋರಾಡಿದರೂ, ಧರಣಿ ನಡೆಸಿದರೂ, ಪಾದಯಾತ್ರೆ ಮಾಡಿದರೂ, ಉಪವಾಸ ಸತ್ಯಾಗ್ರಹ ಮಾಡಿದರೂ ನ್ಯಾಯ ಸಿಗಲಿಲ್ಲ. ಈಗ ವಿಷ ಸೇವಿಸಿ ಆಸ್ಪತ್ರೆ ಸೇರಿರುವುದು ನಿಜಕ್ಕೂ ದುರಾದೃಷ್ಟ ಸಂಗತಿ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ನಿ ಕೊಂದು ತಾನೂ ನೇಣಿಗೆ ಶರಣಾದ ಪತಿ‌ಪಾಕ್‌ನ ಐಎಸ್‌ಐಗೆ ಸೂಕ್ಷ್ಮ ಮಾಹಿತಿ, ಸಿಮ್‌ಗಳನ್ನು ರವಾನಿಸುತ್ತಿದ್ದ ದಂಪತಿ ಅರೆಸ್ಟ್‌ಯುವತಿಯರ ಒಳಉಡುಪು, ಸ್ಯಾನಿಟರಿ ಪ್ಯಾಡ್‌ ಕಳ್ಳತನ; ವಿಚಿತ್ರವಾಗಿ ಜೋಡಿಸಿ ಲೈಂಗಿಕತೃಪ್ತಿ ಪಡ್ತಿದ್ದ ಕಾಮುಕರಾತ್ರಿ ಹೊತ್ತು ಗ್ರಾಮಕ್ಕೆ ನುಗ್ಗಿ ಕುರಿ, ನಾಯಿ ಹೊತ್ತೊಯ್ಯುತ್ತಿದ್ದ ಚಿರತೆ ಸೆರೆ; ನಿಟ್ಟುಸಿರು ಬಿಟ್ಟ ಜನಹನೂರು ಎನ್‌ಕೌಂಟರ್ ಪ್ರಕರಣ – ಸರ್ಕಾರಕ್ಕೆ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸಲ್ಲಿಕೆನಾಗೇಂದ್ರ ರಾಜೀನಾಮೆ; ವ್ಯಕ್ತಿಯಲ್ಲ ವ್ಯವಸ್ಥೆ ವಿರುದ್ಧ ನಮ್ಮ ಹೋರಾಟ: ಸಿ‌.ಸಿ ಪಾಟೀಲಫುಡ್‌ ಪ್ರೊಸೆಸಿಂಗ್‌ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಆಹಾರ ಪದಾರ್ಥ ಸೀಜ್ಜಮೀನಿಗಾಗಿ 20 ವರ್ಷಗಳಿಂದ ಅಲೆದಾಟ – ಕಾರ್ಗಿಲ್‌ ಯುದ್ಧದಲ್ಲಿ ಹೋರಾಡಿದ್ದ ಯೋಧನಿಂದ ಆತ್ಮಹತ್ಯೆಗೆ ಯತ್ನ101 ತಾಲೂಕುಗಳಲ್ಲಿ ಬರ; ವಿಬಿಜಿ ರಾಮ್ ಜಿ ಯೋಜನೆಯಲ್ಲಿ 15 ದಿನದೊಳಗೆ ಕೂಲಿ ಪಾವತಿಗೆ ಈಶ್ವರ ಖಂಡ್ರೆ ಸೂಚನೆಸಾಕು ನಾಯಿಯನ್ನು ಕಚ್ಚಿದ ಬೀದಿನಾಯಿಗೆ ಗುಂಡಿಕ್ಕಿ ಹತ್ಯೆ – ಆರೋಪಿ ಅರೆಸ್ಟ್‌