LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ದಾಸ್ತಾನು ಮಾಡಿದ್ದ 600 ಬ್ಯಾಗ್ ಯೂರಿಯಾ ರಸಗೊಬ್ಬರ ಜಪ್ತಿ

ಮೈಸೂರು: ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಕೊಡಗಳ್ಳಿ ಗ್ರಾಮದಲ್ಲಿರುವ ಕೋಳಿ ಫಾರ್ಮ್ ಒಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 600 ಬ್ಯಾಗ್ ಯೂರಿಯಾ ರಸಗೊಬ್ಬರವನ್ನ  ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಜಪ್ತಿ ಮಾಡಲಾದ ರಸಗೊಬ್ಬರದ  ಅಂದಾಜು ಮೌಲ್ಯ ಸುಮಾರು 14,40,000 ರೂ. ಎಂದು ಅಂದಾಜಿಸಲಾಗಿದೆ. ರೈತರಿಗೆ ವಿತರಿಸಬೇಕಾದ ರಸಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸಿ ಕೃತಕ ಅಭಾವ ಸೃಷ್ಟಿಸಲು ಯತ್ನಿಸಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ ಅಧಿಕಾರಿಗಳು ತಕ್ಷಣ ಕಾರ್ಯಾಚರಣೆ ನಡೆಸಿದರು. 
ಕಾರ್ಯಾಚರಣೆಯಲ್ಲಿ ಕೃಷಿ ಇಲಾಖೆಯ  ಉಪ ನಿರ್ದೇಶಕರು, ಮೈಸೂರು, ಸಹಾಯಕ ನಿರ್ದೇಶಕರು, ಟಿ. ನರಸೀಪುರ ಹಾಗೂ ಕೃಷಿ ಅಧಿಕಾರಿ, ಬನ್ನೂರು ಇದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ಮೂಲಕ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ರಾಜ್ಯ ಸರ್ಕಾರ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು, ರೈತರ ಹಿತಾಸಕ್ತಿಗೆ ಧಕ್ಕೆ ಉಂಟುಮಾಡುವ ಅಕ್ರಮ ರಸಗೊಬ್ಬರ ದಾಸ್ತಾನು ಹಾಗೂ ಕಾಳಸಂತೆ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. 

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಜಿಲ್ಲೆಯ ಹಳ್ಳಿಗಳಲ್ಲಿ ಬೀಜೋಪಚಾರ ಆಂದೋಲನಯಲ್ಲಮ್ಮನಗುಡ್ಡ ಕ್ಷೇತ್ರ; ಸಸಿ ನೆಟ್ಟು, ಪೋಷಿಸಲು ಶಾಸಕ ವಿಶ್ವಾಸ್ ವೈದ್ಯ ಕರೆನೀರಾವರಿ ಯೋಜನೆಗೆ ಒತ್ತಾಯಿಸಿ ಪ್ರತಿಭಟನೆ: ಸಂಕೇಶ್ವರ ಬಂದ್‌ಗೆ ಉತ್ತಮ ಸ್ಪಂದನೆಧಾರವಾಡಕ್ಕೆ ಪ್ರತ್ಯೇಕ ಪಾಲಿಕೆಗಾಗಿ ಹೋರಾಟ: 12 ಕಾಂಗ್ರೆಸ್‌ ಸದಸ್ಯರು ರಾಜೀನಾಮೆಭಟ್ಕಳ ದುರಂತ: ಮೃತರ ಕುಟುಂಬಕ್ಕೆ ₹2 ಲಕ್ಷ, ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ ಮೋದಿಸುವರ್ಣಸೌಧದಲ್ಲೇ ಈ ಬಾರಿ ಮುಂಗಾರು ಅಧಿವೇಶನ?; ಜಿಲ್ಲಾಡಳಿತದಿಂದ ಭರ್ಜರಿ ಸಿದ್ಧತೆ!ಇಂದಿನಿಂದಲೇ ಭಿನ್ನಾಭಿಪ್ರಾಯ ಬಿಟ್ಟು ಪಕ್ಷ ಸಂಘಟನೆಗೆ ಒತ್ತು ನೀಡಲಿದ್ದೇವೆ: ಬಾಲಚಂದ್ರ ಜಾರಕಿಹೊಳಿಸಂತೆಯಲ್ಲಿ ನುಗ್ಗಿ ಕಳ್ಳತನ: ಐವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನರುಬೆಳಗಾವಿಯಲ್ಲಿ ಯುವಕನ ಭೀಕರ ಕೊಲೆ: ಆರೋಪಿಗಳು ಅರೆಸ್ಟ್ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ರಾಷ್ಟ್ರೀಯ ಅಧ್ಯಕ್ಷರಿಂದ ಸಲಹೆ: ಸಿ.ಟಿ ರವಿ