LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಲ್ಲಿ ಅಹಿಂದ ಸಮಾವೇಶ ಮಾಡುತ್ತಿಲ್ಲ: ಯತೀಂದ್ರ ಸಿದ್ದರಾಮಯ್ಯ

Advertisement
Advertisement
Advertisement

ರಾಯಚೂರು: ಬೆಂಗಳೂರಲ್ಲಿ ಅಹಿಂದ ಸಮಾವೇಶ  ಮಾಡುತ್ತಿಲ್ಲ. ಹಿಂದುಳಿದ ವರ್ಗಗಳ ಒಕ್ಕೂಟದ ಸಮಾವೇಶ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ  ಹೇಳಿದ್ದಾರೆ.

ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಕ್ಕೂಟದ ರಜತ ಮಹೋತ್ಸವ ಕಾರ್ಯಕ್ರಮ ಮಾಡುತ್ತಿದ್ದಾರೆ. ಅದಕ್ಕೆ ನಮ್ಮ ತಂದೆಯವರನ್ನ ಕರೆದಿದ್ದಾರೆ. ಹಾಗೇ ಹಿಂದುಳಿದ ವರ್ಗಗಳ ನಾಯಕರನ್ನ ಕರೆದಿದ್ದಾರೆ. ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಅದನ್ನ ಮಾಡುತ್ತಿಲ್ಲ. ನಾವು ರಾಜಕೀಯ ಮಾಡುವುದಕ್ಕೆ ಪ್ರತಿಪಕ್ಷಗಳ ವಿರುದ್ಧ ನಾವು ಕಾರ್ಯಕ್ರಮ ಮಾಡುತ್ತಲೇ ಇರುತ್ತೇವೆ. ರಾಯಚೂರಿನಲ್ಲೂ ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಮಾಡೇ ಮಾಡ್ತಿವಿ ಎಂದರು. 

ಇನ್ನು ಬಿಜೆಪಿ ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯಿಸಿ, ಅದೊಂದು ವಿಫಲ ಪಾದಯಾತ್ರೆ. ಪ್ರಚಾರ ಗಿಟ್ಟಿಸಿಕೊಳ್ಳುವ ಪಾದಯಾತ್ರೆ ಮಾಡುತ್ತಿದ್ದಾರೆ. ಮೊದಲು ಪಾದಯಾತ್ರೆ ಉದ್ದೇಶ ಏನಿತ್ತು, ನಾಗೇಂದ್ರ ರಾಜಿನಾಮೆಗೆ ಪಾದಯಾತ್ರೆ ಅಂತ ಹೇಳಿದ್ರು. ಅವರ ಉದ್ದೇಶ ಈಡೇರಿದೆ. ನಾಗೇಂದ್ರ ರಾಜಿನಾಮೆ ಕೊಟ್ಟಿದ್ದಾರೆ. ಆದರೂ ಬೇಕು ಅಂತಾನೆ ರಾಜಕೀಯ ಮಾಡಲು ಇಲ್ಲಸಲ್ಲದ ಆರೋಪ ಮಾಡಿ ಪಾದಯಾತ್ರೆ ಮಾಡುತ್ತಿದ್ದಾರೆ. ಪಾದಯಾತ್ರೆಗೆ ಹೆಚ್ಚು ಜನಾಕೂಡ ಬರುತ್ತಿಲ್ಲ. ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜಿನಾಮೆ ಕೊಟ್ಟಿದ್ದಾರೆ. ವಿಶೇಷ ಅಧಿವೇಷನ ಕರೆದಿರೋದು ಬಿಜೆಪಿ ಪಾದಯಾತ್ರೆ ಇಂಪ್ಯಾಕ್ಟ್ ಅಲ್ಲ. ನಮ್ಮ ಸರ್ಕಾರ ಜನರಿಗೆ ಸ್ಪಂದಿಸುವ ಸರ್ಕಾರ, ಜನರ ಆಶಯದ ಪ್ರಕಾರ ನಡೆದುಕೊಳ್ಳುವ ಸರ್ಕಾರ ಎಂದು ನುಡಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಸಾವು200ಕ್ಕೂ ಹೆಚ್ಚು ಅಲ್ಪಸಂಖ್ಯಾತ ಮತದಾರರ ಹೆಸರು ಅಳಿಸುವ ಹುನ್ನಾರ – ಬಿಜೆಪಿ ಏಜೆಂಟ್‌ ಬಂಧನಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ – ಮಹಿಳೆ ಸಾವು, ನಾಲ್ವರಿಗೆ ಗಾಯತಗಡಿನ ಮನೆಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳುಇರಾನ್-ಇಸ್ರೇಲ್-ಅಮೆರಿಕ ಯುದ್ಧದ ಎಫೆಕ್ಟ್; ಬೆಂಗಳೂರಿನಲ್ಲಿ ಡ್ರೈ ಫ್ರೂಟ್ಸ್ ಬೆಲೆ ಗಗನಕ್ಕೆಬೆಂಗಳೂರಲ್ಲಿ ಅಹಿಂದ ಸಮಾವೇಶ ಮಾಡುತ್ತಿಲ್ಲ: ಯತೀಂದ್ರ ಸಿದ್ದರಾಮಯ್ಯವಿಟ್ಲಪಿಂಡಿ ಉತ್ಸವ ವೇಳೆ ರಥದಿಂದ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಮುಖ್ಯ ಶಿಕ್ಷಕ ಸಾವುಸಚಿವ ಬಾಲಕೃಷ್ಣರ ಕಾರು ತಡೆದು, ದೃಷ್ಟಿ ತೆಗೆದು ಊಟಕ್ಕೆ ಕರೆದ ವೃದ್ಧೆಸರ್ಕಾರಿ ಗೋಮಾಳ, ಕೆರೆ ಜಾಗ ಒತ್ತುವರಿ ಆರೋಪ – ನಾಲ್ಕು ಲಾರಿ, ಟ್ರ‍್ಯಾಕ್ಟರ್ ಸೀಜ್