LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ‌ ನಾಲ್ವರ ಬಂಧನ

Advertisement

ನವದೆಹಲಿ: ದೆಹಲಿ–ಎನ್‌ಸಿಆರ್ ಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಬೆಂಬಲಿತ ಜಾಲವನ್ನು ದೆಹಲಿ ಪೊಲೀಸ್ ವಿಶೇಷ ಘಟಕ ಭೇದಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಭದೀಪ್ ಸಿಂಗ್, ಗುರ್ಜಂತ್ ಸಿಂಗ್, ಸಜನ್ ಸಿಂಗ್ ಹಾಗೂ ಗಗನ್‌ಪ್ರೀತ್ ಸಿಂಗ್ ಹೆಸರಿನ ಶಂಕಿತರನ್ನು ಬಂಧಿಸಲಾಗಿದೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಂಧಿತರು ಐಎಸ್‌ಐ ಹ್ಯಾಂಡ್ಲರ್ ಶಹಜಾದ್ ಭಟ್ ಹಾಗೂ ಆತನ ಸಹಚರರ ಸೂಚನೆಯಂತೆ ಕಾರ್ಯನಿರ್ವಹಿಸುತ್ತಿದ್ದರು. ತಮ್ಮ ಗುರುತು ಪತ್ತೆಯಾಗದಂತೆ ನೋಡಿಕೊಳ್ಳಲು ಪಾಕಿಸ್ತಾನದಲ್ಲಿದ್ದ ಹ್ಯಾಂಡ್ಲರ್‌ಗಳು ಒದಗಿಸಿದ್ದ ವಿದೇಶಿ ಮೊಬೈಲ್ ಸಂಖ್ಯೆಗಳ ಮೂಲಕವೇ ಪರಸ್ಪರ ಸಂಪರ್ಕದಲ್ಲಿದ್ದು, ಸೂಚನೆಗಳನ್ನು ಪಡೆದುಕೊಳ್ಳುತ್ತಿದ್ದರು ಎಂದು ತನಿಖೆಯಲ್ಲಿ ಬಹಿರಂಗವಾಗಿದೆ. 

ಆರೋಪಿಗಳು ದೆಹಲಿ–ಎನ್‌ಸಿಆರ್‌ನ ಪ್ರಮುಖ ಸಾರ್ವಜನಿಕ ಸ್ಥಳಗಳು ಮತ್ತು ಜನಸಂದಣಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಉಗ್ರ ಕೃತ್ಯ ನಡೆಸಲು ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಹಲವು ದಿನಗಳಿಂದ ಗುಪ್ತಚರ ಮಾಹಿತಿ ಸಂಗ್ರಹಿಸಿ ವಿಶೇಷ ಕಾರ್ಯಾಚರಣೆ ನಡೆಸಿದ ಬಳಿಕ ನಾಲ್ವರನ್ನು ಬಂಧಿಸಲಾಗಿದೆ.

ಬಂಧಿತರಿಂದ ವಿದೇಶಿ ಪಿಸ್ತೂಲ್, ಜೀವಂತ ಗುಂಡುಗಳು, ಮೊಬೈಲ್ ಫೋನ್‌ಗಳು, ಡಿಜಿಟಲ್ ಸಾಧನಗಳು ಹಾಗೂ ಇತರ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಫೊರೆನ್ಸಿಕ್ ಪರೀಕ್ಷೆ ನಡೆಸಲಾಗುತ್ತಿದೆ. ಆರೋಪಿಗಳ ಮೂಲಕ ದೇಶದೊಳಗೆ ಕಾರ್ಯನಿರ್ವಹಿಸುತ್ತಿರುವ ಇತರ ಐಎಸ್‌ಐ ಜಾಲಗಳ ಸಂಪರ್ಕ ಹಾಗೂ ಸಹಚರರ ಬಗ್ಗೆ ಮಾಹಿತಿ ಕಲೆಹಾಕುವ ಕಾರ್ಯ ಮುಂದುವರಿದಿದೆ. 

ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸ್ ವಿಶೇಷ ಘಟಕವು ಕೇಂದ್ರ ಗುಪ್ತಚರ ಸಂಸ್ಥೆಗಳ ಸಹಯೋಗದೊಂದಿಗೆ ಮುಂದುವರಿಸಿದ್ದು, ದೆಹಲಿ–ಎನ್‌ಸಿಆರ್ ಪ್ರದೇಶದಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇದೇ ಜೂಲೈ 4 ರಂದು ಬಿ.ವಿ.ವಿ.ಸಂಘದ ಎಸ್.ಸಿ. ನಂದಿಮಠ ಕಾನೂನು ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭವಚನ ಸಾಹಿತ್ಯ ಬದುಕಿನ ಮೌಲ್ಯಶಿಕ್ಷಣ ನೀಡುತ್ತದೆ: ಸುಷ್ಮಾ ಒಡೆಯರವಚನ ಸಾಹಿತ್ಯ ಉಳಿಸಿ ಬೆಳೆಸಿದ ಮಹನೀಯ ಡಾ. ಫ.ಗು. ಹಳಕಟ್ಟಿ: ಕಮಲಾ ರುದ್ರಾಕ್ಷಿಸಾರಿಗೆ ನೌಕರರಿಗೆ ಸಿಹಿ ಸುದ್ದಿ – ಈ ತಿಂಗಳಿನಿಂದಲೇ ಅಕೌಂಟ್‌ಗೆ ಪರಿಷ್ಕೃತ ವೇತನ ಜಮೆಬೆಳಗಾವಿಯಲ್ಲಿ ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆಕಲ್ಲು ಕ್ವಾರಿ ದುರಂತ – ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಲಿ: ಹೆಚ್‌ಡಿಕೆಬದುಕು ಕಟ್ಟಿಕೊಳ್ಳಲು ಬಂದಿದ್ದ ಯಾದಗಿರಿ ಕಾರ್ಮಿಕ ಕಲ್ಲು ಕ್ವಾರಿ ದುರಂತದಲ್ಲಿ ಸಾವುಸತೀಶ್ ಕಡತನಮಲೆಗೆ ಶಾಕ್ – ಬಿಜೆಪಿಯಿಂದ 6 ವರ್ಷ ಉಚ್ಚಾಟನೆಕಲ್ಲು ಕ್ವಾರಿ ದುರಂತ – ಅಧಿಕೃತ ವರದಿ ಬಂದ ಬಳಿಕ ಕ್ರಮಗಳ ಬಗ್ಗೆ ತೀರ್ಮಾನ: ಡಿಕೆಶಿಚಿಕ್ಕಮಗಳೂರು ಕೋರ್ಟ್‌ಗೆ ಬಾಂಬ್‌ ಬೆದರಿಕೆ – ಕಲಾಪ ನಿಲ್ಲಿಸದೇ ತಪಾಸಣೆಗೆ ಸೂಚಿಸಿದ ಜಡ್ಜ್‌