LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್‌ನಿಂದ ಹಿಂದುಳಿದವರಿಗೆ ನಂಬಿಕೆ ದ್ರೋಹ – ಬೊಮ್ಮಾಯಿ

ಬೆಂಗಳೂರು: ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದು ಕಾಂಗ್ರೆಸ್  ಪಕ್ಷದ ಮೇಲೆ ಹಾಗೂ ಕರ್ನಾಟಕದ ಚುನಾವಣಾ ರಾಜಕಾರಣದ ಮೇಲೆ ಪರಿಣಾಮ‌ ಬೀರಲಿದೆ. ಕಾಂಗ್ರೆಸ್‌ನಿಂದ ಹಿಂದುಳಿದವರಿಗೆ ನಂಬಿಕೆ ದ್ರೋಹವಾಗಿದ್ದು, ಹಿಂದುಳಿದ ವರ್ಗ ಕಾಂಗ್ರೆಸ್ ವಿರುದ್ಧ ತಿರುಗಿ ಬೀಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ  ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಹಿಂದುಳಿದವರಿಗೆ ನಂಬಿಕೆ ದ್ರೋಹ ಮಾಡಿದಂತಾಗಿದೆ. ವಿಶೇಷವಾಗಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಒಬಿಸಿ ಪರವಾಗಿ ಪ್ರಚಾರ ಮಾಡುತ್ತಾರೆ. ಆದರೆ, ಒಬಿಸಿ ಮುಖ್ಯಮಂತ್ರಿಯನ್ನು ಕಿತ್ತು ಹಾಕಿದ್ದಾರೆ. ಹಿಂದುಳಿದ ವರ್ಗಗಳ ಬಗ್ಗೆ ಅವರು ಮೊಸಳೆ ಕಣ್ಣೀರು ಸುರಿಸುವುದು ಈಗ ಬಹಿರಂಗವಾಗಿದೆ. ಇದರಿಂದ ಹಿಂದುಳಿದ ವರ್ಗದವರು ಬೇಸರಗೊಂಡಿದ್ದು, ಅವರು 2028ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸುವುದಾಗಿ ತೀಕ್ಷ್ಣವಾಗಿ ಪ್ರತಿಕ್ರಿಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಡಳಿತ ಪಕ್ಷವನ್ನು ಅಶಕ್ತಗೊಳಿಸಿದ್ದು, ಬಿಜೆಪಿ ಇನ್ನಷ್ಟು ಬಲಿಷ್ಠವಾಗಿ ನಮ್ಮದೇ ಆದ ಶಕ್ತಿಯೊಂದಿಗೆ 2028ಕ್ಕೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು.

ಪಕ್ಷ ಸಂಘಟನೆಗೆ ಸೂಚನೆ:
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ರಾಜ್ಯಕ್ಕೆ ಭೇಟಿ ನೀಡಿದಾಗ ರಾಜ್ಯ ನಾಯಕರಿಗೆ ನೀಡಿರುವ ಸೂಚನೆಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಷ್ಟ್ರೀಯ ಅಧ್ಯಕ್ಷರು ಪಕ್ಷದ ಸಂಘಟನೆಯನ್ನು ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಸಂಘಟಿಸಲು ಸೂಚಿಸಿದ್ದಾರೆ. ಅಲ್ಲದೆ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಕ್ಷದ ಬಿಎಲ್‌ಎ ಮತ್ತು ಬಿಎಲ್‌ಎ 2 ಹೇಗೆ ಕೆಲಸ ನಿರ್ವಹಿಸಬೇಕೆನ್ನುವುದನ್ನು ಗಂಭೀರವಾಗಿ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಅವರು ಕರ್ನಾಟಕಕ್ಕೆ ಮೇಲಿಂದ ಮೇಲೆ ಭೇಟಿ ನೀಡಲಿದ್ದು, 2028ಕ್ಕೆ ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ಅವರ ಗುರಿಯಾಗಿದೆ ಎಂದು ಹೇಳಿದ್ದಾರೆ.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್‌ನಿಂದ ಹಿಂದುಳಿದವರಿಗೆ ನಂಬಿಕೆ ದ್ರೋಹ – ಬೊಮ್ಮಾಯಿಬಳ್ಳಾರಿ ಪೊಲೀಸರ ಕಾರ್ಯಾಚರಣೆ – ಅಕ್ರಮವಾಗಿ ಸಾಗಿಸುತ್ತಿದ್ದ 5.52 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶಸಿದ್ದರಾಮಯ್ಯ ರಾಜೀನಾಮೆ ವಿರೋಧಿಸಿ ಯಾದಗಿರಿಯಲ್ಲಿ ಪ್ರತಿಭಟನೆ – ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿಅಧಿಕಾರದ ಹಿಂದೆ ಹೋದವನಲ್ಲ, ಆಸ್ತಿ-ಹಣದ ಹಿಂದೆ ಬಿದ್ದಿಲ್ಲ: ಸಿದ್ದರಾಮಯ್ಯ ನೇರ ನುಡಿಯತೀಂದ್ರ ಸಂಪುಟ ಸೇರ್ಪಡೆಗೆ ಕೊನೆಗೂ ಒಪ್ಪಿದ ಸಿದ್ದರಾಮಯ್ಯಸಕಲ ದೋಷ ನೋಡಿಕೊಂಡು ಡಿಕೆಶಿ ಮುನ್ನಡೆಯಬೇಕಾಗುತ್ತೆ – ಕರಿವೃಷಭ ಶಿವಯೋಗೀಶ್ವರ ಸ್ವಾಮೀಜಿ ಎಚ್ಚರಿಕೆಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಂತೋಷ್‌ ಲಾಡ್‌ ಕಣ್ಣೀರುನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆರಾಜೀನಾಮೆ ಬೆನ್ನಲ್ಲೇ ದೆಹಲಿಗೆ ಸಿದ್ದರಾಮಯ್ಯ – ಹೈಕಮಾಂಡ್ ನಾಯಕರ ಭೇಟಿ ಹಿಂದಿನ ಗುಟ್ಟೇನು?ಮುಂದಿನ ಸಿಎಂ ಯಾರು – ಪ್ರಶ್ನೆಗೆ ಉತ್ತರ ನೀಡದೇ ನಗುಮುಖದಿಂದ ಎದ್ದು ಹೋದ ಸಿದ್ದರಾಮಯ್ಯ