LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಒಂದು ತಿಂಗಳೊಳಗೆ ಭಾರತ್‌ ಜೋಡೋ ಯುವ ಸಂಘಗಳು ಅಸ್ತಿತ್ವಕ್ಕೆ: ಪರಮೇಶ್ವರ್‌

Advertisement
Advertisement

ಬೆಂಗಳೂರು: ಯವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಭಾರತ್‌ ಜೋಡೋ ಯುವ ಸಂಘಗಳನ್ನು  ಸ್ಥಾಪಿಸಲು ತೀರ್ಮಾನಿಸಿದ್ದೇವೆ. ಪ್ರತಿ ಸಂಘಕ್ಕೆ ತಲಾ 10 ಲಕ್ಷ ರೂ. ಅನುದಾನವನ್ನು ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದರು.

ನಗರದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ರಾಹುಲ್‌ ಗಾಂಧಿಯವರು ದೇಶದ ಯುವಜನತೆಗೆ ಭಾರತದ ವೈವಿಧ್ಯಮಯ ಸಂಸ್ಕೃತಿ ಮತ್ತು ಇತಿಹಾಸದ ಸಂದೇಶವನ್ನು ತಲುಪಿಸುವ ಉದ್ದೇಶದಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 3 ಸಾವಿರಕ್ಕೂ ಹೆಚ್ಚು ಕಿ.ಮೀ.ಗಳಷ್ಟು ಭಾರತ್‌ ಜೋಡೋ ಯಾತ್ರೆಯನ್ನು ಕೈಗೊಂಡಿದ್ದರು. ಅದರ ನೆನಪಿಗಾಗಿ ವಿಶೇಷ ಕಾರ್ಯಕ್ರಮವನ್ನು ಘೋಷಿಸುವುದಾಗಿ ನಾವು ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೆವು. ಇದೀಗ ಮುಖ್ಯಮಂತ್ರಿಗಳು ಪ್ರಸ್ತಾವನೆಯನ್ನು ಪುನರ್‌ಪರಿಶೀಲಿಸಿ, ಚರ್ಚೆಯ ಬಳಿಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಾರೆ ಎಂದು ವಿವರಿಸಿದರು. 

ಈ ಯೋಜನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮುಖಾಂತರ ಅನುಷ್ಠಾನ ಮಾಡಲಾಗುವುದು. ಇದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಕಾರ ನೀಡಲಿದೆ. ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲೂ ಸ್ಥಳೀಯ ಮಟ್ಟದ ಸಂಘ ರಚನೆಗೆ ಅಗತ್ಯವಾದ ಮಾರ್ಗಸೂಚಿಗಳನ್ನು ಜು.13 ರಂದು ಬಿಡುಗಡೆಗೊಳಿಸಿರುವುದಾಗಿ ತಿಳಿಸಿದರು.

100 ರಿಂದ 250 ಸದಸ್ಯರೊಳಗಿನ ಸಂಘವನ್ನು ರಚಿಸಲಾಗುತ್ತದೆ. ಈ ಸಂಘಗಳು ಕ್ರೀಡಾ ಚಟುವಟಿಕೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಹಬ್ಬಗಳ ಮಹತ್ವವನ್ನು ಯುವಕರಿಗೆ ತಿಳಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು. ಪ್ರತಿ ವರ್ಷ ಪ್ರತಿ ಸಂಘಕ್ಕೆ ತಲಾ 10 ಲಕ್ಷ ರೂ. ಅನುದಾನ ನೀಡಲು ನಾವು ತೀರ್ಮಾನಿಸಿದ್ದೇವೆ. ಯುವಕರ ಸಬಲೀಕರಣಕ್ಕಾಗಿ ಸಾವಿರ ಕೋಟಿಯವರೆಗೆ ಅನುದಾನ ವ್ಯಯಿಸಿದರೂ ಅದರಲ್ಲಿ ತಪ್ಪಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ನೇತೃತ್ವದ ಸಚಿವ ಸಂಪುಟದಲ್ಲಿ ಸುದೀರ್ಘವಾಗಿ ಚರ್ಚಿಸಿರುವುದಾಗಿ ಮಾಹಿತಿ ನೀಡಿದರು.

ಕ್ರೀಡಾ ಇಲಾಖೆಯಿಂದ ಸಮಿತಿಗಳ ಸದಸ್ಯತ್ವದ ಕುರಿತು ಮಾರ್ಗಸೂಚಿಗಳನ್ನು ಸಹ ಬಿಡುಗಡೆ ಮಾಡಿದ್ದೇವೆ. ಸದಸ್ಯತ್ವವನ್ನು ಹೇಗೆ ನೀಡಬೇಕು, ಯಾರು ಸದಸ್ಯರಾಗಬೇಕು, ಎಲ್ಲ ಸಮುದಾಯಗಳಿಗೂ ಅವಕಾಶ ಸಿಗುವಂತೆ ಸಮಿತಿಗಳನ್ನು ಹೇಗೆ ರಚಿಸಬೇಕು ಎಂಬುದರ ಬಗ್ಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಲಾಗಿದೆ. ಈ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರುವ ಉದ್ದೇಶ ಹೊಂದಿದ್ದೇವೆ. ಮುಂದಿನ 15 ರಿಂದ 20 ದಿನದೊಳಗೆ, ಗರಿಷ್ಠ ಒಂದು ತಿಂಗಳ ಕಾಲಾವಧಿಯಲ್ಲಿ ರಾಜ್ಯದಾದ್ಯಂತ ಸಮಿತಿಗಳ ರಚನೆಯನ್ನು ಪೂರ್ಣಗೊಳಿಸಿ, ಅವುಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಂದು ತಿಂಗಳೊಳಗೆ ಭಾರತ್‌ ಜೋಡೋ ಯುವ ಸಂಘಗಳು ಅಸ್ತಿತ್ವಕ್ಕೆ: ಪರಮೇಶ್ವರ್‌ರಾಜಕೀಯ ಬೇರೆ, ಕೆಲಸ ಬೇರೆ – ಕೃಷ್ಣ ಬೈರೇಗೌಡ ಕಾರ್ಯವೈಖರಿಗೆ ಹೆಚ್‌ಡಿಡಿ ಶ್ಲಾಘನೆಉತ್ತರ ಕರ್ನಾಟಕದಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ – ಮಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆಬಿಡದಿ ಟೌನ್‌ಶಿಪ್ ಹೋರಾಟಗಾರರ ಮೇಲಿನ FIR ವಾಪಸ್ ಪಡೆಯಬೇಕು: ನಿಖಿಲ್ ಆಗ್ರಹಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ AI ವಿವಿ ಸ್ಥಾಪನೆ: ಡಿಕೆಶಿಸುಪ್ರೀಂನಲ್ಲಿ ಲಾಲೂಗೆ ಬಿಗ್‌ ರಿಲೀಫ್‌ – ಸಿಬಿಐ ಅರ್ಜಿ ವಜಾ50 ಲಕ್ಷಕ್ಕಾಗಿ ಪತ್ನಿ, ಮಾವನ ಮೇಲೆ ಹಲ್ಲೆಗೆ ಯತ್ನ – PSIಗೆ ಪರಸ್ತ್ರೀ ವ್ಯಾಮೋಹ, ಕಾಮಪುರಾಣ ಬಯಲುಸಿದ್ದರಾಮಯ್ಯ ಇಳಿಸಲು ಹೈಕಮಾಂಡ್‌ಗೆ ಕೊಟ್ಟ ಭರವಸೆಯಂತೆ ಟೌನ್‌ಶಿಪ್‌ – ಡಿಕೆಶಿ ವಿರುದ್ಧ ಹೆಚ್‌ಡಿಡಿ ಸ್ಫೋಟಕ ಆರೋಪಕಲಾದಗಿಗೆ ಮೋಹನ್ ಭಾಗವತ್ ಭೇಟಿ- ಯುವ ಕಾರ್ಯಕರ್ತನ ಮನೆಯಲ್ಲಿ ಚಹಾ ಸೇವನೆCWMA ಸಭೆ ಬಳಿಕ ನಾಲೆಗಳಿಗೆ ನೀರು; ಈ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ