LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಶ್ವತ ನಿವಾಸಿ ಪ್ರಮಾಣಪತ್ರ ವಿರುದ್ಧ ಬಿಜೆಪಿ ಸಮರ – ರಾಜ್ಯಪಾಲರಿಗೆ ದೂರು

Advertisement
Advertisement

ಬೆಂಗಳೂರು: ರಾಜ್ಯದಲ್ಲಿ ಶಾಶ್ವತ ನಿವಾಸ ಪ್ರಮಾಣ ಪತ್ರ  ನೀಡುವ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದ ಬಿಜೆಪಿ  ಇದೀಗ ರಾಜ್ಯಪಾಲರಿಗೆ  ದೂರು ನೀಡಿದೆ.

ಆರ್.ಅಶೋಕ್, ಛಲವಾದಿ ನಾರಾಯಣ ಸ್ವಾಮಿ, ಸಿಟಿ ರವಿ, ಸುಧಾಕರ್ ಮತ್ತಿತರಿದ್ದ ಬಿಜೆಪಿ ನಿಯೋಗವು ಇಂದು (ಜು.15) ರಾಜ್ಯಪಾಲರಿಗೆ ದೂರು ಸಲ್ಲಿಸಿದೆ. ದೂರಿನಲ್ಲಿ ಪಿಆರ್‌ಸಿ ನೀಡಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ. ಪಿಆರ್‌ಸಿ ದೇಶದ ಭದ್ರತೆಗೆ ಆತಂಕ ತರಲಿದೆ. ಸರ್ಕಾರದ ಪಿಆರ್‌ಸಿಗೆ (PRC) ತಡೆಯೊಡ್ಡಲು ಮಧ್ಯಪ್ರವೇಶ ಮಾಡುವಂತೆ ಮನವಿ ಮಾಡಿದ್ದಾರೆ. 

ಇನ್ನೂ ಪಿಆರ್‌ಸಿ ಜೊತೆಗೆ ಮತ್ತೆರಡು ಪ್ರಕರಣದ ಬಗ್ಗೆಯೂ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದೆ. ಚಿಕ್ಕಮಗಳೂರಿನಲ್ಲಿ ಬಡವರ ಹೆಸರಲ್ಲಿ ನಕಲಿ ಬ್ಯಾಂಕ್ ಖಾತೆ ತೆರೆದು ವಂಚನೆ ಪ್ರಕರಣ ಹಾಗೂ ಮಾಲೂರು ತಾಲೂಕು ಅಗ್ಗಲಕೋಟೆ ಗ್ರಾಮದಲ್ಲಿ ಶಾಲಾ ಜಮೀನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣವನ್ನು ಬಿಜೆಪಿ ರಾಜ್ಯಪಾಲರ ಗಮನಕ್ಕೆ ತಂದು ದೂರು ನೀಡಿದೆ. ಇವರೆಡೂ ಪ್ರಕರಣಗಳ ಸಮಗ್ರ ಹಾಗೂ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದೆ.

ದೂರಿನ ನಂತರ ವಿಪಕ್ಷ ನಾಯಕ ಆರ್.ಅಶೋಕ್  ಮಾತನಾಡಿ, ಅಕ್ರಮವಾಗಿ ಪಿಆರ್‌ಸಿ ಮಾಡಲು ಸರ್ಕಾರ ಹೊರಟಿದೆ. ಇದನ್ನು ತಡೆಯುವಂತೆ ಕೋರಿ ರಾಜ್ಯಪಾಲರಿಗೆ ದೂರು ಕೊಟ್ಟಿದ್ದೇವೆ. ಅಕ್ರಮ ನಿವಾಸಿಗಳಿಗೆ, ಕಾಂಗ್ರೆಸ್‌ಗೆ ವೋಟು ಹಾಕೋರಿಗೆ ಶಾಶ್ವತ ನಿವಾಸ ಪ್ರಮಾಣ ಪತ್ರ ಕೊಡುವ ಸಂಚು ನಡೀತಿದೆ. ಸರ್ಕಾರದ ನಡೆ ದೇಶದ ಭದ್ರತೆಗೆ ಅಪಾಯ. ಬಾಂಗ್ಲಾ ವಾಸಿಗಳು 20-30 ಲಕ್ಷ ಜನ ರಾಜ್ಯದಲ್ಲಿ ಇದ್ದಾರೆ. ಇವರನ್ನು ರಾಜ್ಯದ ಶಾಶ್ವತ ನಿವಾಸಿಗಳಾಗಿ ಮಾಡಲು ಸರ್ಕಾರ ಹೊರಟಿದೆ. ಜಿಬಿಎ, ಜಿ.ಪಂ, ತಾ.ಪಂ, ವಿಧಾನಸಭೆ ಚುನಾವಣೆಗೆ ಅಕ್ರಮವಾಗಿ ಪಿಆರ್‌ಸಿ ಕೊಡಲಾಗ್ತಿದೆ. ಕೂಡಲೇ ಇದನ್ನು ರದ್ದುಪಡಿಸಲು ರಾಜ್ಯಪಾಲರಿಗೆ ಕೋರಿದ್ದೇವೆ. ಪಿಆರ್‌ಸಿ ಕೊಡೋ ಅಧಿಕಾರ ರಾಜ್ಯಕ್ಕೆ ಇಲ್ಲ, ಕೇಂದ್ರಕ್ಕೆ ಮಾತ್ರ ಇರೋದು. ಸರ್ಕಾರಕ್ಕೆ ಎಚ್ಚರಿಸುವುದಾಗಿ ರಾಜ್ಯಪಾಲರು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಲಮಟ್ಟಿ ಡ್ಯಾಂನಿಂದ ಕೆರೆಗಳಿಗೆ ನೀರು ಹರಿಸಿ – ಸಿಎಂ ಡಿಕೆಶಿಗೆ ಮಾಜಿ ಸಚಿವ ಶಿವಾನಂದ ಪಾಟೀಲ್ ಮನವಿಬಿಡದಿ ಟೌನ್‌ಶಿಪ್‌ ಯೋಜನೆಗೆ 2 ತಿಂಗಳು ತಾತ್ಕಾಲಿಕ ಬ್ರೇಕ್‌ – ಸಮಿತಿ ರಚಿಸುತ್ತೇನೆ ಎಂದ ಸಿಎಂಬೆಳಗಾವಿಯಲ್ಲಿ 165 ಕೋಟಿ ವಂಚಿಸಿ ವಿದೇಶಕ್ಕೆ ಪರಾರಿತ್ರಿವಳಿ ಕೊಲೆ ಕೇಸ್ – ಬ್ರೈನ್ ಮ್ಯಾಪಿಂಗ್ ಮುನ್ನವೇ ಮೂವರನ್ನು ಕೊಂದಿದ್ದು ನಾನೇ: ತಪ್ಪೊಪ್ಪಿಕೊಂಡ ಆರೋಪಿಕಿಟಕಿ ರಾಡ್ ಮುರಿದು, ಬಟ್ಟೆಯನ್ನೇ ಹಗ್ಗ ಮಾಡಿ ಗೋಡೆ ಹಾರಿದ್ರು – ಕಲಬುರಗಿ ಜೈಲಿನಿಂದ ಸಿನಿಮಾ ಶೈಲಿ ಕೈದಿಗಳು ಎಸ್ಕೇಪ್ರಾಜ್ಯದಲ್ಲಿ ಮತ್ತೆ ಹೆಚ್ಚಿದ ಕೊರೋನಾ ಭೀತಿ – 32 ಜನರಲ್ಲಿ ಸೋಂಕು ದೃಢರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಂದ ಇಂದು ಉಪದೇಶ- ಎಸ್‌ಪಿ ವಿರುದ್ಧ ಯೋಗಿ ಕಿಡಿNDA ಸೇರ್ಪಡೆಯಾಗದೇ ಮಹಿಳಾ ಮೀಸಲಾತಿ, ಡಿಲಿಮಿಟೇಷನ್‌ ಮಸೂದೆಗೆ ಪವಾರ್ ಬಣ ಬೆಂಬಲ!ಫಿಫಾ ವಿಶ್ವಕಪ್‌ 3ನೇ ಟ್ರೋಫಿ ಕನಸು ಭಗ್ನ – ಅಭಿಮಾನಿಗಳ ಆಕ್ರೋಶಕ್ಕೆ ಹೊತ್ತಿ ಉರಿದ ಫ್ರಾನ್ಸ್‌5 ನಿವೇಶನ, 4 ಫ್ಲಾಟ್‌, ಕಂತೆ ಕಂತೆ ನೋಟು, ಚಿನ್ನಾಭರಣ; 100 ಕೋಟಿ ಆಸ್ತಿ ಪತ್ತೆ – ಎಂಜಿನಿಯರ್‌ ಅರೆಸ್ಟ್‌