LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುವ ಮತದಾರರತ್ತ ಬಿಜೆಪಿ ಚಿತ್ತ – ‘Gen Z’ ಸಂಪರ್ಕಕ್ಕೆ ವಿಶೇಷ ತಂಡ

Advertisement
Advertisement
Advertisement
ನವದೆಹಲಿ: ಯುವಜನತೆ ಅದರಲ್ಲೂ Gen Z ಮತದಾರರೊಂದಿಗೆ ನೇರ ಸಂಪರ್ಕ ಸಾಧಿಸುವ ಉದ್ದೇಶದಿಂದ ಬಿಜೆಪಿ  ವಿಶೇಷ ತಂಡವೊಂದನ್ನು ರಚಿಸಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ನೇತೃತ್ವದಲ್ಲಿ ರೂಪಿಸಿರುವ ತಂಡದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸ್ಮೃತಿ ಇರಾನಿ  ಮತ್ತು ವಿನೋದ್ ತಾವಡೆ ಸೇರಿದಂತೆ ಹಲವು ಪ್ರಮುಖ ನಾಯಕರು ಸ್ಥಾನ ಪಡೆದಿದ್ದಾರೆ. ಗುಜರಾತ್ ಸಚಿವ ಹರ್ಷ್ ಸಾಂಘ್ವಿ ಹಾಗೂ ಛತ್ತೀಸ್‌ಗಢ ಸಚಿವ ಒ.ಪಿ. ಚೌಧರಿ ಕೂಡ ತಂಡದ ಭಾಗವಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

ದೇಶದಾದ್ಯಂತ ಯುವಜನರೊಂದಿಗೆ ನೇರ ಹಾಗೂ ನಿರಂತರ ಸಂವಾದ ನಡೆಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. Gen Z ಯುವಕರ ಆಕಾಂಕ್ಷೆಗಳು, ಸಮಸ್ಯೆಗಳು ಮತ್ತು ನಿರೀಕ್ಷೆಗಳನ್ನು ನೇರವಾಗಿ ತಿಳಿದುಕೊಳ್ಳುವುದು ಕಾರ್ಯಕ್ರಮದ ಪ್ರಮುಖ ಗುರಿಯಾಗಿದೆ. ಯುವಜನರು ಬಿಜೆಪಿ ನಾಯಕರೊಂದಿಗೆ ನೇರವಾಗಿ ಸಂವಾದ ನಡೆಸಿ, ತಮ್ಮ ಅಭಿಪ್ರಾಯ ಹಾಗೂ ಪ್ರಶ್ನೆಗಳನ್ನು ಮಂಡಿಸಲು ವೇದಿಕೆ ಕಲ್ಪಿಸುವ ಉದ್ದೇಶವನ್ನೂ ಪಕ್ಷ ಹೊಂದಿದೆ.

ಸಂವಾದ, ಚರ್ಚೆ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳ ಮೂಲಕ ಯುವ ಮತದಾರರನ್ನು ತಲುಪಲು ಬಿಜೆಪಿ ಮುಂದಾಗಿದೆ. ಹೊಸ ತಲೆಮಾರಿನೊಂದಿಗೆ ಪಕ್ಷದ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಯುವಜನರ ರಾಜಕೀಯ ಭಾಗವಹಿಸುವಿಕೆಯನ್ನು ಹೆಚ್ಚಿಸುವುದು ಈ ಅಭಿಯಾನದ ಉದ್ದೇಶವಾಗಿದೆ.

Gen Z ಸಂಪರ್ಕ ಅಭಿಯಾನದ ನಿಖರ ವೇಳಾಪಟ್ಟಿ, ಕಾರ್ಯಕ್ರಮಗಳ ಸ್ವರೂಪ ಹಾಗೂ ಸ್ಥಳಗಳ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ. ಈ ಬೆಳವಣಿಗೆ, ಮುಂಬರುವ ಚುನಾವಣಾ ಸವಾಲುಗಳ ಹಿನ್ನೆಲೆಯಲ್ಲಿ ಯುವ ಮತದಾರರತ್ತ ಬಿಜೆಪಿ ಹೆಚ್ಚಿನ ಗಮನ ಹರಿಸುತ್ತಿರುವುದರ ಸೂಚನೆಯಾಗಿದೆ.

ಇದೇ ವೇಳೆ, ನಿತಿನ್ ನಬೀನ್ ಅವರು ಶನಿವಾರ (ಆ.22) ಬಿಜೆಪಿಯ ನೂತನ ರಾಷ್ಟ್ರೀಯ ಪದಾಧಿಕಾರಿಗಳ ಮೊದಲ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪಕ್ಷದ ಸಂಘಟನೆಯನ್ನು ಮತ್ತಷ್ಟು ಚುರುಕುಗೊಳಿಸುವುದು ಮತ್ತು ಚುನಾವಣಾ ಸಿದ್ಧತೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು: 200 ರೂ. ಕೊಡ್ಲಿಲ್ಲ ಅಂತ ಮಂಗಳಮುಖಿ ಬರ್ಬರ ಹತ್ಯೆ – ಆರೋಪಿ ಅರೆಸ್ಟ್‌ಪತ್ನಿ ಕುಟುಂಬಸ್ಥರಿಂದ ಥಳಿತ; ಸಾಫ್ಟ್‌ವೇರ್‌ ಕಂಪನಿಯಲ್ಲಿ ವರ್ಷಕ್ಕೆ 60 ಲಕ್ಷ ಪ್ಯಾಕೇಜ್‌ ಹೊಂದಿದ್ದ ಟೆಕ್ಕಿ ಸಾವು105 ವರ್ಷದ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆಯಿಂದ ಮುಕ್ತಿ ನೀಡಿದ ಸುಪ್ರೀಂಯುವ ಮತದಾರರತ್ತ ಬಿಜೆಪಿ ಚಿತ್ತ – ‘Gen Z’ ಸಂಪರ್ಕಕ್ಕೆ ವಿಶೇಷ ತಂಡಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ – ಪ್ರಮುಖ ಆರೋಪಿ ನ್ಯಾಯಾಂಗ ಬಂಧನಕ್ಕೆ, ನಾಲ್ವರು ಪೇದೆ ಅಮಾನತುವಾಲ್ಮೀಕಿ ನಿಗಮದಿಂದ ಹಿಡಿದು ರಸ್ತೆ ಗುಂಡಿ ಮುಚ್ಚೋಕೂ ಕೋಟ್ಯಂತರ ಹಣ ಲೂಟಿ – ಛಲವಾದಿಕೇಂದ್ರ ಸಚಿವರಾಗಿ ಟೋಲ್‌ ಕಟ್ಟಬೇಡಿ ಅಂತ ಪ್ರಚೋದನೆ ಕೊಡೋದು ಸರಿಯಲ್ಲ: ಪ್ರಿಯಾಂಕ್ ಖರ್ಗೆ ಕಿಡಿರಾಜ್ಯದಲ್ಲಿ ಬರ ಘೋಷಿಸಿ, 10 ಸಾವಿರ ಕೋಟಿ ಪ್ಯಾಕೇಜ್ ನೀಡಿ: ರವಿಕುಮಾರ್ ಆಗ್ರಹಇದು ದಲಿತರನ್ನು ರಕ್ಷಿಸದ ಸರ್ಕಾರ: ಛಲವಾದಿ ಕಿಡಿಬರಗಾಲದ ಎಫೆಕ್ಟ್ – ಗಗನಕ್ಕೇರಿದ ‘ಸಕ್ಕರೆ ನಾಡಿನ’ ಬೆಲ್ಲದ ಬೆಲೆ