LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ; ನಾಲ್ವರು ಮೀನುಗಾರರ ರಕ್ಷಣೆ

Advertisement
Advertisement
Advertisement

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಅಳಿವೆಯಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್‌ವೊಂದು ಹೂಳಿನಲ್ಲಿ ಸಿಲುಕಿ ಮುಳುಗಡೆಯಾಗಿದೆ. ಅದೃಷ್ಟವಶಾತ್ ಬೋಟ್‌ನಲ್ಲಿದ್ದ ನಾಲ್ವರು ಮೀನುಗಾರರನ್ನು ರಕ್ಷಿಸಲಾಗಿದೆ.

ತದಡಿ ಬಂದರಿನಿಂದ ಮೋಹನ್ ಕಿಮಾನಿ ಎಂಬುವರಿಗೆ ಸೇರಿದ ‘ಶ್ರೀದೇವಿ’ ಹೆಸರಿನ ಬೋಟ್‌ ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆ ತದಡಿ ಅಳಿವೆಯಲ್ಲಿನ ಹೂಳಿನಲ್ಲಿ ಸಿಲುಕಿಕೊಂಡಿದೆ. ಇದರಿಂದ ಬೋಟ್‌ನ ತಳಭಾಗಕ್ಕೆ ಹಾನಿಯಾಗಿದ್ದು, ಬಳಿಕ ಅಳಿವೆಯಲ್ಲೇ ಬೋಟ್‌ ಮುಳುಗಡೆಯಾಗಿದೆ.

ಬೋಟ್‌ನಲ್ಲಿದ್ದ ನಾಲ್ವರು ಮೀನುಗಾರರು ಅಪಾಯಕ್ಕೆ ಸಿಲುಕಿದ್ದರು. ಕೂಡಲೇ ಸ್ಥಳೀಯ ಮೀನುಗಾರರು ನೆರವಿಗೆ ಧಾವಿಸಿ ಅವರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ.

 

ಬೋಟ್‌ ಮುಳುಗಡೆಯಿಂದ 15 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ ಎನ್ನಲಾಗಿದೆ. ಬೋಟ್‌ನ ಜೊತೆಗೆ ಮೀನುಗಾರಿಕೆಗೆ ಬಳಸುತ್ತಿದ್ದ ಬಲೆ ಸೇರಿದಂತೆ ಹಲವು ವಸ್ತುಗಳು ಕೂಡ ಸಮುದ್ರ ಪಾಲಾಗಿವೆ. 

ತದಡಿ ಬಂದರಿನ ಬಳಿ ಹಲವು ವರ್ಷಗಳಿಂದ ಹೂಳು ತುಂಬಿಕೊಂಡಿದೆ. ಇದರಿಂದ ಆಗಾಗ್ಗೆ ಬೋಟ್‌ಗಳು ಹಾನಿಗೊಳಗಾಗುತ್ತಿದ್ದು, ಕೆಲವೊಮ್ಮೆ ಮುಳುಗಡೆಯಾಗುತ್ತಿರುವ ಘಟನೆಗಳೂ ನಡೆಯುತ್ತಿವೆ.

ಹೀಗಾಗಿ ತದಡಿ ಬಂದರಿನಲ್ಲಿರುವ ಹೂಳನ್ನು ಕೂಡಲೇ ತೆರವುಗೊಳಿಸಿ, ಮೀನುಗಾರರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಮೀನುಗಾರರು ಮೀನುಗಾರಿಕಾ ಇಲಾಖೆಯನ್ನು ಒತ್ತಾಯಿಸಿದ್ದಾರೆ

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
SIR ನಮೂನೆ ಹಿಂದಿರುಗಿಸಲು ಇಂದೇ ಕೊನೆಯ ದಿನ; ತಪ್ಪಿದ್ರೆ ಮತದಾರರ‌ ಪಟ್ಟಿಯಿಂದ ಹೆಸರು ಡಿಲೀಟ್ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು – ನಿವೃತ್ತ ಶಿಕ್ಷಕನ ಬರ್ಬರ ಹತ್ಯೆಅಪಾರ್ಟ್‌ಮೆಂಟ್ ಮನೆ ಬೀಗ ಮುರಿದು 1.55 ಲಕ್ಷ ಮೌಲ್ಯದ ಲ್ಯಾಪ್‌ಟಾಪ್, ಮೊಬೈಲ್ ಕಳವುಹೆಂಡತಿಯ ಹತ್ಯೆಗೈದ BSF ಯೋಧ – ಮಹಡಿಯಿಂದ ಬಿದ್ದು ಸಾವು ಎಂದು ಬಿಂಬಿಸಲು ಯತ್ನಗ್ರಾಮದಲ್ಲಿ ಮೊಸಳೆ ಪ್ರತ್ಯಕ್ಷ; ಮನೆಗಳ ಬಳಿಯೇ ಮರಿಗಳ ಓಡಾಟಗಂಡ ಅಂತ್ಯಸಂಸ್ಕಾರಕ್ಕೆ ಬರಬಾರದು – ಡೆತ್‌ನೋಟ್ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ2 ಕೋಟಿ ಮೌಲ್ಯದ ಕಟ್ಟಿಂಗ್ ಟೂಲ್ಸ್ ಕಳ್ಳತನ – ಐವರು ಅರೆಸ್ಟ್‌ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ; ನಾಲ್ವರು ಮೀನುಗಾರರ ರಕ್ಷಣೆಕಾನೂನು ಹೇಳಿದಂತೆ ನಡೆಯುತ್ತೇವೆ – ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಡಿಕೆಶಿ ಪ್ರತಿಕ್ರಿಯೆಕೊಲೆ ಆರೋಪಿ ಪವಿತ್ರಾಗೌಡ ಜೈಲಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌