LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಇರ್ಫಾನ್ ಅರೆಸ್ಟ್‌

Advertisement
Advertisement

ಮಂಗಳೂರು: ಚಲಿಸುತ್ತಿದ್ದ ಬಸ್​ನಲ್ಲೇ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ, ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಖಾಸಗಿ ಬಸ್ ಕಂಡಕ್ಟರ್‌ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಾಮುಕ ಕಂಡಕ್ಟರ್ ಇರ್ಫಾನ್ (32) ಬಂಧಿತ ಆರೋಪಿ. ಈತ ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ಕಲ್ಲೇರಿ ನಿವಾಸಿಯಾಗಿದ್ದು, ಪ್ರಸ್ತುತ ಉಪ್ಪಿನಂಗಡಿಯ ಕರ್ವೇಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಾನೆ. ಈತ ಮಂಗಳೂರು ಮತ್ತು ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್​​ನಲ್ಲಿ (Private Bus) ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ.

 

ಏನಿದು ಕೇಸ್‌?
ಜುಲೈ 9 ರ ಗುರುವಾರ ಸಂಜೆ ಸುಮಾರು 5 ಗಂಟೆ ಸುಮಾರಿಗೆ ಮಂಗಳೂರು – ವಿಟ್ಲ ನಡುವೆ ಸಂಚರಿಸುವ ವೇಳೆ ಸೆಲಿನ ಬಸ್ ನಲ್ಲಿ ಘಟನೆ ನಡೆದಿದೆ. ಬಸ್​ನಲ್ಲಿದ್ದ ಕಾಲೇಜು ವಿದ್ಯಾರ್ಥಿನಿಯರನ್ನ ಗುರಿಯಾಗಿಸಿಕೊಂಡು ಕಂಡಕ್ಟರ್ ಇರ್ಫಾನ್, ವಿಕೃತವಾಗಿ ವರ್ತಿಸಲು ಆರಂಭಿಸಿದ್ದಾನೆ. ವಿದ್ಯಾರ್ಥಿನಿಯರ ಮುಂದೆ ತನ್ನ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪಿ, ಅತ್ಯಂತ ಅಸಭ್ಯವಾಗಿ ಸನ್ನೆ ಮಾಡಿದ್ದಾನೆ. ಅಷ್ಟೇ ಅಲ್ಲದೇ, ವಿದ್ಯಾರ್ಥಿನಿಯರನ್ನು ಬಸ್​ನ ಹಿಂದಿನ ಸೀಟಿಗೆ ಬರುವಂತೆ ಕರೆದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಲಾಗಿದೆ.

ಕಂಡಕ್ಟರ್‌ನ ವಿಕೃತ ವರ್ತನೆಯಿಂದ ಆಘಾತಕ್ಕೊಳಗಾದ ವಿದ್ಯಾರ್ಥಿನಿಯರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕಾಮುಕ ಕಂಡಕ್ಟರ್‌ನನ್ನ ಬಂಧಿಸಿದ್ದಾರೆ. ತನಿಖೆ ಮುಂದುವರಿದಿದೆ. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಆದಾಯ ಪ್ರಮಾಣಪತ್ರ ಸಲ್ಲಿಕೆ – KPSC ಅಧ್ಯಕ್ಷರ ಪುತ್ರಿ ವಿರುದ್ಧ ಎಫ್‌ಐಆರ್ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ಆರೋಪ – ಕಾಸು ಕೊಟ್ರೆ ತಪಾಸಣೆಯೆ ಇಲ್ವಂತೆ!ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್‌ – ಗುಂಡು ಹಾರಿಸಿಕೊಂಡು ಕೊಡಗಿನ ಯುವಕ ಆತ್ಮಹತ್ಯೆಶಾಶ್ವತ ನಿವಾಸ ಪ್ರಮಾಣಪತ್ರ ರಾಜ್ಯ ಸರ್ಕಾರ ಯಾಕೆ ಕೊಡಬಾರದು – ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆತನ್ನ ಪರ ತೀರ್ಪು ಕೊಡಲಿ ಅಂತ ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಾಟಮಂತ್ರ – ಮಹಿಳೆ ಬಂಧನಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಇರ್ಫಾನ್ ಅರೆಸ್ಟ್‌ಬೆಂಗಳೂರಿನಲ್ಲಿ ಮತ್ತೆ ತ್ರಿವಳಿ ಕೊಲೆ – ತಾಯಿ, ಅಜ್ಜಿ, ಮಾವನನ್ನು ಕೊಂದು ಪರಾರಿಯಾಗಬೇಕಿದ್ದವ ಸೂಸೈಡ್‌ಪ್ರಶಾಂತ್ ಕಿಶೋರ್ ವಿರುದ್ಧ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಯನ್ನು ಬಿಜೆಪಿ ದಿಢೀರ್‌ ಬದಲಾಯಿಸಿದ್ದು ಯಾಕೆ?ತೆಲಂಗಾಣದಲ್ಲಿ ಪೋಕ್ಸೋ ಆರೋಪಿಯಿಂದ ಮಾರಣಹೋಮ – ಪತ್ನಿ, ಮಕ್ಕಳು, ಸಂತ್ರಸ್ತೆ ಸೇರಿ 6 ಜನರ ಬರ್ಬರ ಹತ್ಯೆಮಹಾರಾಷ್ಟ್ರದಲ್ಲಿ ತಗ್ಗಿದ ಮಳೆ – ಚಿಕ್ಕೋಡಿ ವ್ಯಾಪ್ತಿಯ 3 ಪ್ರಮುಖ ಸೇತುವೆಗಳು ಸಂಚಾರಕ್ಕೆ ಮುಕ್ತ