LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಯುವಕರ ರಕ್ತ ಹೀರಿ ಬದುಕುತ್ತಿದೆ: ಛಲವಾದಿ ನಾರಾಯಣಸ್ವಾಮಿ

Advertisement
Advertisement

ಬೆಂಗಳೂರು: ಕಾಂಗ್ರೆಸ್ ಪಕ್ಷವು ಯುವಜನರ ರಕ್ತ ಹೀರಿ ಬದುಕುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಡಿಸಿಎಂ ಸಿ.ಎನ್. ಅಶ್ವಥ್ ನಾರಾಯಣ ಅವರ ಕಚೇರಿಗೆ ಯೂತ್ ಕಾಂಗ್ರೆಸ್  ಕಾರ್ಯಕರ್ತರು ಪೋಸ್ಟರ್ ಅಂಟಿಸಿದ ಪ್ರಕರಣವನ್ನು ಖಂಡಿಸಿದರು. ಸದಾ ಪೋಸ್ಟರ್ ಚಳವಳಿ ಮಾಡುವುದೇ ಕಾಂಗ್ರೆಸ್‌ನ ಸಂಸ್ಕೃತಿಯಾಗಿದೆ. ಜೆನ್ ಜೀ (Gen Z) ಯುವಸಮೂಹ ಈ ದೇಶದ ಭವಿಷ್ಯ. ನಾವು ಯುವಕರ ಪರವಾಗಿ ನಿಲ್ಲುತ್ತೇವೆ ಎಂದರು.

ರಾಜ್ಯದಲ್ಲಿನ ಪರೀಕ್ಷಾ ಅಕ್ರಮಗಳ ಕುರಿತು ಪ್ರಶ್ನಿಸಿದ ಅವರು, ಪ್ರಶ್ನೆ ಪತ್ರಿಕೆ ಸೋರಿಕೆ ಕೇವಲ ನೀಟ್  ಪರೀಕ್ಷೆಯಲ್ಲಿ ಮಾತ್ರ ಆಗಿದೆಯೇ? ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಾಲೇಜಿನಲ್ಲಿ ಹಾಗೂ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆಯಲ್ಲೂ ಪೇಪರ್ ಸೋರಿಕೆಯಾಗಿದೆ, ಅದಕ್ಕೆ ಸರ್ಕಾರದ ಬಳಿ ಉತ್ತರವಿದೆಯೇ? KPSC ಅಕ್ರಮ ಖಂಡಿಸಿ, ಪಶುವೈದ್ಯರು ಹಾಗೂ ಕೃಷಿ ವಿವಿ ಅಭ್ಯರ್ಥಿಗಳು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಅಕ್ರಮಗಳನ್ನು ಸರ್ಕಾರ ಸಿಬಿಐ ತನಿಖೆಗೆ ಏಕೆ ನೀಡುತ್ತಿಲ್ಲ ಎಂದು ಕಿಡಿಕಾರಿದರು. 

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆಗೆ ಕಾಂಗ್ರೆಸ್ ತೀವ್ರ ಒತ್ತಡ ಹೇರುತ್ತಿದೆ ಎಂದು ಆರೋಪಿಸಿದ ನಾರಾಯಣಸ್ವಾಮಿ, ಮುಖ್ಯಮಂತ್ರಿಗಳು ಎರಡು ಬಾರಿ ಹೊರಟ್ಟಿ ಅವರಿಗೆ ಕರೆ ಮಾಡಿ ರಾಜೀನಾಮೆ ಕೇಳಿದ್ದಾರೆ. ನಿನ್ನೆ ತಮ್ಮ ಮನೆಗೆ ಕರೆಸಿಕೊಂಡು ರಾಜೀನಾಮೆಗೆ ಒತ್ತಡ ಹೇರಿದ್ದಾರೆ. ಸಭಾಪತಿಗಳನ್ನು ಮುಖ್ಯಮಂತ್ರಿಗಳು ತಮ್ಮ ಮನೆಗೆ ಕರೆಸಿಕೊಂಡಿದ್ದು ಶಿಷ್ಟಾಚಾರದ ಉಲ್ಲಂಘನೆ. ಸಿಎಂ ಅವರೇ ಸಭಾಪತಿಗಳ ಮನೆಗೆ ಹೋಗಿದ್ದರೆ ಅದು ಸಭ್ಯತೆಯಾಗುತ್ತಿತ್ತು ಎಂದರು.

ಹಿಂದೆ ವಿರೋಧ ಪಕ್ಷದವರು ಸಭಾಪತಿಯಾಗಿದ್ದಾಗ ಅವರನ್ನು ತೆಗೆದುಹಾಕದ ಪರಂಪರೆ ಇತ್ತು. ಆದರೆ ಕಾಂಗ್ರೆಸ್ ಈಗ ಸಭಾಪತಿಗಳ ವಿರುದ್ಧ ಅವಿಶ್ವಾಸ ನಿರ್ಣಯ ತರುವುದಾಗಿ ಬೆದರಿಸುತ್ತಿದೆ. ಎಐಸಿಸಿ ಲೆಟರ್ ಹೆಡ್‌ನಲ್ಲಿ ಸಭಾಪತಿಗಳ ಹೆಸರು ಉಲ್ಲೇಖಿಸಿ ಕಳುಹಿಸುವ ಮೂಲಕ ಸದನ ಮತ್ತು ಸಂವಿಧಾನಕ್ಕೆ ಅಪಮಾನ ಎಸಗಲಾಗಿದೆ. ಈ ಜವಾಬ್ದಾರಿಯನ್ನು ಹೊತ್ತು ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬಸವರಾಜ ಹೊರಟ್ಟಿ ಅವರು ಯಾವುದೇ ಕಾರಣಕ್ಕೂ ಬೆದರಬಾರದು. ನಾವು ನಿಮ್ಮ ಪರವಾಗಿದ್ದೇವೆ. ಧೈರ್ಯವಾಗಿ ನಿಯಮಗಳ ಪ್ರಕಾರ ಕಾರ್ಯನಿರ್ವಹಿಸಿ, ನಮ್ಮ ಬೆಂಬಲ ನಿಮಗಿದೆ ಎಂದು ಅವರು ಧೈರ್ಯ ತುಂಬಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಲಮಂಗಲ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ – ಗ್ರಾಹಕರ ಸೋಗಿನಲ್ಲಿ ಬಂದು ದರೋಡೆಗೆ ಯತ್ನತಿಮ್ಮಾಪುರ್-ನಂಜಯ್ಯಮಠ ಆಡಿಯೋ ಬಗ್ಗೆ ಛಲವಾದಿ ದೂರು ಕೊಡಲಿ: ಪ್ರಿಯಾಂಕ್ ಖರ್ಗೆಕಾಂಗ್ರೆಸ್ ಯುವಕರ ರಕ್ತ ಹೀರಿ ಬದುಕುತ್ತಿದೆ: ಛಲವಾದಿ ನಾರಾಯಣಸ್ವಾಮಿʻಕೆಲಸ ಮಾಡದಿದ್ರೆ, ಸಂಬಳ ಇಲ್ಲʼ – ಮುಷ್ಕರ ಹಿಂಪಡೆಯುವಂತೆ ವೈದ್ಯರಿಗೆ ಬಾಂಬೆ ಹೈಕೋರ್ಟ್‌ ಖಡಕ್ ಸೂಚನೆಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ: ಈಶ್ವರ ಖಂಡ್ರೆ ಸೂಚನೆಮುಳ್ಳಯ್ಯನಗಿರಿ ಬಳಿ ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಮರ – ಕೂದಲೆಳೆ ಅಂತರದಲ್ಲಿ ಪ್ರವಾಸಿಗ ಬಚಾವ್‌ನಾನು ಡಿಕೆಶಿ ಮನೆಮಗ, ನಾನೇ ಸಿಎಂ ಇದ್ದಂತೆ: ಶಿವಗಂಗಾ ಬಸವರಾಜ್ಕಾಂಗ್ರೆಸ್‌ನಿಂದ ಸಾಂವಿಧಾನಿಕ ಹುದ್ದೆ ಹೈಜಾಕ್‌- ಆ.14ಕ್ಕೆ ಸಭಾಪತಿ ಸ್ಥಾನಕ್ಕೆ ರಾಜೀನಾಮೆ: ಬಸವರಾಜ ಹೊರಟ್ಟಿಉಪಮುಖ್ಯಮಂತ್ರಿಗಳಾದಡಾ. ಜಿ. ಪರಮೇಶ್ವರ್ ಅವರ ಜನ್ಮದಿನದ ಅಂಗವಾಗಿ   ಸರ್ಕಾರಿ ವಸತಿ ಶಾಲೆಗಳಿಗೆ ಗೌತಮ ಬುದ್ಧ ಪ್ರತಿಮೆಗಳ ವಿತರಣೆಆರೋಪಿ ದರ್ಶನ್‌ಗೆ ಅತಿದೊಡ್ಡ ಸಂಕಷ್ಟ; ಪ್ರಕರಣದ ಎ-14 ಪ್ರದೋಷ್‌ನಿಂದ ಮಾಫಿ ಸಾಕ್ಷಿಗೆ ಅರ್ಜಿ