LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂಡೋ – ಪಾಕ್‌ ವಿವಾದದ ನಡುವೆ ಚುಟುಕು ಕ್ರಿಕೆಟ್‌ ಕದನ – ಇಂದಿನಿಂದ ವಿಶ್ವಕಪ್‌ ಹಬ್ಬ









ಮುಂಬೈ: ಕ್ರಿಕೆಟ್‌ ಪ್ರೇಮಿಗಳ ನೆಚ್ಚಿನ ಟಿ20 ʻವಿಶ್ವಕಪ್‌ ಹಬ್ಬ ಇಂದಿನಿಂದ ಶುರುವಾಗುತ್ತಿದೆ. ಈ ಬಾರಿ ವಿವಾದಗಳಿಂದಲೇ ಸದ್ದು ಮಾಡಿದ 10ನೇ ಆವೃತ್ತಿಯ ಚುಟುಕು ಕ್ರಿಕೆಟ್‌ ಸಮರಕ್ಕೆ ಚಾಲನೆ ಸಿಗಲಿದೆ. ಮುಸ್ತಾಫಿಜುರ್‌ ರೆಹಮಾನ್‌ ಅವರನ್ನ ಐಪಿಎಲ್‌ನಿಂದ ಅಮಾನತುಗೊಳಿಸಿದ ಬಳಿಕ ಶುರುವಾದ ವಿವಾದ ಭಾರತ ಮತ್ತು ಪಾಕಿಸ್ತಾನದ ನಡುವೆ ಬಂದುನಿಂತಿದೆ. ಹೀಗಾಗಿ ಈ ಬಾರಿಯ ವಿಶ್ವಕಪ್‌ ರೋಚಕ ಎಂದೇ ಹೇಳಬಹುದು.

ಭಾರತದ 5 ಹಾಗೂ ಶ್ರೀಲಂಕಾದ  3 ನಗರಗಳ ಆತಿಥ್ಯದಲ್ಲಿ ನಡೆಯಲಿರುವ ಈ ಬಾರಿ ವಿಶ್ವಕಪ್‌ನಲ್ಲಿ 10 ತಂಡಗಳು ಕಪ್‌ಗಾಗಿ ಸೆಣಸಾಡಲಿವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ…



ಟಿ20 ವಿಶ್ವಕಪ್‌ಗೆ ಈಗ 20 ವರ್ಷದ ಸಂಭ್ರಮ
ಐಸಿಸಿ ಟಿ20 ವಿಶ್ವಕಪ್‌ ಈಗ 20 ವರ್ಷದ ಸಂಭ್ರಮದಲ್ಲಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಮೊದಲ ಬಾರಿ ಟೂರ್ನಿ ಆಯೋಜಿಸಿದ್ದು 2007ರಲ್ಲಿ. ಅದರಲ್ಲಿ ಭಾರತ ಗೆದ್ದಿತ್ತು. 2007-2024ರ ನಡುವೆ ಒಟ್ಟು 9 ಬಾರಿ ಟಿ20 ವಿಶ್ವಕಪ್‌ ನಡೆದಿದೆ. ಪ್ರತಿ 2 ವರ್ಷಕ್ಕೊಮ್ಮೆ ಟೂರ್ನಿ ನಡೆಯುತ್ತದೆ. ಈ ಬಾರಿ 10ನೇ ಆವೃತ್ತಿ. ಭಾರತ ಸೇರಿದಂತೆ ಒಟ್ಟು 6 ತಂಡಗಳು ಈವರೆಗೂ ಕನಿಷ್ಠ ಒಮ್ಮೆಯಾದರೂ ಚಾಂಪಿಯನ್‌ ಆಗಿವೆ.

ಭಾರತ-ಶ್ರೀಲಂಕಾ ಆತಿಥ್ಯದಲ್ಲಿ ನಡೆಯಲಿರುವ ಈ ಬಾರಿ ವಿಶ್ವಕಪ್‌ನಲ್ಲಿ ಪಂದ್ಯ, ಟ್ರೋಫಿ, ಸ್ಟಾರ್‌ ಆಟಗಾರರು, ಚಾಂಪಿಯನ್‌ ಟೀಮ್‌ ಅಥವಾ ಕ್ರೀಡಾಂಗಣಕ್ಕಿಂತ ಜಾಸ್ತಿ ಪಾಕಿಸ್ತಾನ, ಬಾಂಗ್ಲಾದೇಶ ವಿವಾದವೇ ಹೆಚ್ಚು ಸದ್ದು ಮಾಡಿತು. ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಹಿಂಸಾಚಾರ ಹಾಗೂ ಭಾರತೀಯರ ಮೇಲಿನ ದೌರ್ಜನ್ಯ ನಡೆಯುತ್ತಿದ್ದಾಗಲೇ ಬಾಂಗ್ಲಾದೇಶ ತಂಡದ ವೇಗಿ ಮುಸ್ತಾಫಿಜುರ್‌ ರೆಹಮಾನ್‌ ಅವರನ್ನ ಐಪಿಎಲ್‌ನಿಂದ ಅಮಾನತು ಮಾಡಲಾಯಿತು. ಬಳಿಕ ಬಾಂಗ್ಲಾದೇಶ ಭಾರತದಿಂದ ಹೊರಗೆ ಪಂದ್ಯಗಳನ್ನ ನಿಯೋಜಿಸುವಂತೆ ಪಟ್ಟು ಹಿಡಿದಿತ್ತು. ಇದಕ್ಕೆ ಒಪ್ಪದ ಐಸಿಸಿ ಬಾಂಗ್ಲಾದೇಶ ತಂಡವನ್ನೇ ಟೂರ್ನಿಯಿಂದ ಹೊರದಬ್ಬಿತ್ತು. ಬಾಂಗ್ಲಾ ತಂಡ ಹೊರದಬ್ಬಿದ ಬಳಿಕ ಸ್ಕಾಟ್‌ಲೆಂಡ್‌ಗೆ ಅವಕಾಶ ನೀಡಲಾಯಿತು. ಆದ್ರೆ ಈ ವಿಷಯದಲ್ಲಿ ಮೂಗು ತೂರಿಸಿದ ಪಾಕಿಸ್ತಾನ ಮೊದಲು ಟೂರ್ನಿ ಬಹಿಷ್ಕರಿಸೋದಾಗಿ ಹೇಳಿತ್ತು. ಆ ನಂತರ ಟೂರ್ನಿ ಆಡುತ್ತೇವೆ, ಆದ್ರೆ ಭಾರತದ ವಿರುದ್ಧ ಆಡಲ್ಲ ಎಂದು ಹೇಳಿದೆ. ಆದಾಗ್ಯೂ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಂಡಿದ್ದು, ವಿಶ್ವಕಪ್‌ ಆಡಲು ತೆರಳಲಿದೆ.





ಭಾರತ ಟಿ20 ವಿಶ್ವಕಪ್‌ಗೆ 3ನೇ ಬಾರಿ ಆತಿಥ್ಯ ವಹಿಸುತ್ತಿದೆ. 2016ರಲ್ಲಿ ಮೊದಲ ಬಾರಿ ಭಾರತದಲ್ಲಿ ಪಂದ್ಯಗಳು ನಡೆದಿದ್ದವು. 2021ರಲ್ಲಿ ಆತಿಥ್ಯ ಹಕ್ಕು ಭಾರತಕ್ಕೆ ಸಿಕ್ಕರೂ ಪಂದ್ಯಗಳು ಕೋವಿಡ್‌ ಕಾರಣದಿಂದಾಗಿ ಯುಎಇ ಹಾಗೂ ಒಮಾನ್‌ನಲ್ಲಿ ಆಯೋಜನೆಗೊಂಡಿದ್ದವು. ಈ ಬಾರಿ ಭಾರತ-ಶ್ರೀಲಂಕಾ ಜಂಟಿಯಾಗಿ ಟೂರ್ನಿ ನಡೆಸುತ್ತಿವೆ. ಟೂರ್ನಿ ಆಯೋಜನೆಗೆ ಆರಂಭದಲ್ಲಿ ಶ್ರೀಲಂಕಾ ಮಾತ್ರ ಆಸಕ್ತಿ ತೋರಿತ್ತು. 2021ರಲ್ಲಿ ಈ ಬಗ್ಗೆ ಘೋಷಣೆ ಹೊರಡಿಸಿದ್ದ ಐಸಿಸಿ, ಟೂರ್ನಿ ಲಂಕಾದಲ್ಲಿ ನಡೆಯುವುದಾಗಿ ತಿಳಿಸಿತ್ತು. ಆದರೆ ಟೂರ್ನಿಯ ವಿಸ್ತರಣೆ ಹಾಗೂ ಲಂಕಾದಲ್ಲಿ ಕ್ರೀಡಾಂಗಣಗಳ ಕೊರತೆಯ ಕಾರಣದಿಂದಾಗಿ ಭಾರತದ ಜಂಟಿ ಆತಿಥ್ಯದಲ್ಲಿ ವಿಶ್ವಕಪ್‌ ಆಯೋಜಿಸಲು ಐಸಿಸಿ ನಿರ್ಧರಿಸಿತು. ಶ್ರೀಲಂಕಾ ಈ ಹಿಂದೆ 2012ರಲ್ಲಿ ವಿಶ್ವಕಪ್ ಆಯೋಜಿಸಿತ್ತು.
ಟೂರ್ನಿಯಲ್ಲಿ ಒಟ್ಟು 20 ತಂಡಗಳಿವೆ. ಇದನ್ನು ತಲಾ 5 ತಂಡಗಳ 4 ಗುಂಪುಗಳನ್ನಾಗಿ ವಿಂಗಡಿಸಲಾಗಿದೆ. ಗುಂಪಿನಲ್ಲಿ ಪ್ರತಿ ತಂಡಗಳು ಇತರ 4 ತಂಡಗಳ ವಿರುದ್ಧ ಒಮ್ಮೆ ಆಡಲಿವೆ. ಪ್ರತಿ ಗುಂಪಿನ ಅಗ್ರ-2 ತಂಡಗಳು ಸೂಪರ್‌-8 ಹಂತ ಪ್ರವೇಶಿಸಲಿವೆ. ಈ 8 ತಂಡಗಳನ್ನು ಮತ್ತೆ ತಲಾ 4 ತಂಡಗಳ 2 ಗುಂಪುಗಳನ್ನಾಗಿ ವಿಂಗಡಿಸಲಾಗುತ್ತದೆ. ಗುಂಪಿನ ತಂಡಗಳು ತಲಾ 1 ಬಾರಿ ಪರಸ್ಪರ ಆಡಲಿವೆ. ಗುಂಪಿನಲ್ಲಿ ಅಗ್ರ-2 ಸ್ಥಾನ ಪಡೆದ ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ. ಸೆಮೀಸ್‌ನಲ್ಲಿ ಗೆದ್ದ ತಂಡಗಳು ಫೈನಲ್‌ ಆಡಲಿವೆ.


Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಲಿಕೆ ಬಿಜೆಪಿ ಸದಸ್ಯರ ವಿರುದ್ಧ ವಿಜಯೇಂದ್ರಗೆ ವಿವಿಧ ಕನ್ನಡ ಸಂಘಟನೆಗಳ ದೂರುಪಾಲಿಕೆ ವಿರುದ್ಧ ಹೋರಾಟ ಮುಂದುವರಿಸಲು ವಿವಿಧ ಕನ್ನಡ ಸಂಘಟನೆಗಳ ನಿರ್ಧಾರಬೆಳಗಾವಿ ನಗರದ ‘ಸ್ವಚ್ಛ ಶನಿವಾರ’ ಅಭಿಯಾನಕ್ಕೆ ಜಿಪಂ ಆವರಣದಲ್ಲಿ ಚಾಲನೆವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವುಕರ್ನಾಟಕ ಹೈಕೋರ್ಟ್‌ನಲ್ಲಿ ಬೃಹತ್ ನೇಮಕಾತಿ: SSLC ಪಾಸಾದವರಿಗೆ ಸುವರ್ಣಾವಕಾಶ!ಪೊಲೀಸ್ ಠಾಣೆಯಲ್ಲೇ ಪ್ರೇಮಿಗಳ ಕುಟುಂಬದ ಮಧ್ಯೆ ಗಲಾಟೆ, ಗರ್ಭಿಣಿ ಮೇಲೂ ಹಲ್ಲೆ!ರಾಜ್ಯದಲ್ಲಿ ವರುಣನ ರೌದ್ರಾವತಾರಕ್ಕೆ ಇಬ್ಬರು ಬಲಿ: ಮೈಸೂರಲ್ಲಿ ರೈತ ಮಹಿಳೆ, ಬಳ್ಳಾರಿಯಲ್ಲಿ ಯುವಕ ಸಿಡಿಲಿಗೆ ಸಾವು!ಬೆಂಗ್ಳೂರು – ಮೈಸೂರು ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ 26 ಲಕ್ಷ ದೋಚಿದ ಖದೀಮರುಚನ್ನಗಿರಿಯಲ್ಲಿ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆಡಿಕೆಶಿ ಮುಂದಿನ ಸಿಎಂ ಬ್ಯಾನರ್, ಕಾರ್ಯಕರ್ತರ ಅಭಿಮಾನ ತಡಿಯೋಕೆ ಸಾಧ್ಯವಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್