LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮದಲ್ಲಿ ಮೊಸಳೆ ಪ್ರತ್ಯಕ್ಷ; ಮನೆಗಳ ಬಳಿಯೇ ಮರಿಗಳ ಓಡಾಟ

Advertisement
Advertisement
Advertisement

ಗದಗ: ತುಂಗಭದ್ರಾ ನದಿ ಸಮೀಪದಲ್ಲಿರುವ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ಮೊಸಳೆ ಹಾಗೂ ಮೊಸಳೆ ಮರಿಗಳು ಪದೇಪದೆ ಕಾಣಿಸಿಕೊಳ್ಳುತ್ತಿರುವುದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.

ಗ್ರಾಮದ ದುರಗಪ್ಪ ಸ್ವಾಮಿ ಎಂಬುವರ ಮನೆಯ ಹಿತ್ತಲಿನ ಬಳಿ ಇಂದು ಮೊಸಳೆ ಕಾಣಿಸಿಕೊಂಡಿದೆ. ಇದನ್ನು ನೋಡಿದ ಸ್ಥಳೀಯರು ಕೂಗಾಡುತ್ತಿದ್ದಂತೆ ದೊಡ್ಡ ಮೊಸಳೆ ಅಲ್ಲಿಂದ ತಪ್ಪಿಸಿಕೊಂಡಿದೆ. ಆದರೆ, ಒಂದು ಮೊಸಳೆ ಮರಿಯನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ.

ಗ್ರಾಮದ ಸುತ್ತಮುತ್ತ ಪದೇಪದೆ ಮೊಸಳೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಜನರು ಭಯದಲ್ಲಿದ್ದಾರೆ. ಈ ಭಾಗದಲ್ಲಿ ಸುಮಾರು ಏಳೆಂಟು ಮೊಸಳೆಗಳು ಇವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದರ ನಡುವೆ ತುಂಗಭದ್ರಾ ಹಿನ್ನೀರಿನಿಂದ ವಿಠಲಾಪುರ ಸೇರಿದಂತೆ ಮೂರು ಗ್ರಾಮಗಳು ಮುಳುಗಡೆಯಾಗುವ ಆತಂಕವೂ ಇದೆ. ಹಮ್ಮಗಿ ಬಳಿ 3 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯದ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಲಾಗಿದೆ. ಸದ್ಯ ಇಲ್ಲಿ ಸುಮಾರು ಒಂದೂವರೆ ಟಿಎಂಸಿ ನೀರು ಮಾತ್ರ ಸಂಗ್ರಹವಾಗುತ್ತಿದೆ. 

ಮುಂದೆ 3 ಟಿಎಂಸಿ ನೀರು ಸಂಗ್ರಹಿಸಿದರೆ ವಿಠಲಾಪುರ, ಗುಮ್ಮಗೋಳ ಮತ್ತು ಬಿದರಳ್ಳಿ ಗ್ರಾಮಗಳನ್ನು ಸ್ಥಳಾಂತರಿಸಬೇಕು ಎಂಬ ಆದೇಶವಿದೆ. 2010ರಲ್ಲೇ ಈ ಬಗ್ಗೆ ಆದೇಶವಾಗಿದ್ದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಳೆಗಾಲ ಬಂದಾಗ ಗ್ರಾಮದಲ್ಲಿ ಹಲವು ಸಮಸ್ಯೆಗಳು ಎದುರಾಗುತ್ತಿವೆ. ಸರೀಸೃಪಗಳ ಕಾಟವೂ ಹೆಚ್ಚಾಗಿದ್ದು, ಮನೆಗಳಲ್ಲಿ ತೇವಾಂಶದಿಂದ ಅನಾರೋಗ್ಯದ ಸಮಸ್ಯೆಗಳು ಕಾಡುತ್ತಿವೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಮೊಸಳೆಗಳ ಓಡಾಟ ಹಾಗೂ ಹಿನ್ನೀರಿನ ಸಮಸ್ಯೆಯಿಂದ ಗ್ರಾಮಸ್ಥರು ಆತಂಕದಲ್ಲಿದ್ದು, ಆದಷ್ಟು ಬೇಗ ಗ್ರಾಮವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
SIR ನಮೂನೆ ಹಿಂದಿರುಗಿಸಲು ಇಂದೇ ಕೊನೆಯ ದಿನ; ತಪ್ಪಿದ್ರೆ ಮತದಾರರ‌ ಪಟ್ಟಿಯಿಂದ ಹೆಸರು ಡಿಲೀಟ್ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು – ನಿವೃತ್ತ ಶಿಕ್ಷಕನ ಬರ್ಬರ ಹತ್ಯೆಅಪಾರ್ಟ್‌ಮೆಂಟ್ ಮನೆ ಬೀಗ ಮುರಿದು 1.55 ಲಕ್ಷ ಮೌಲ್ಯದ ಲ್ಯಾಪ್‌ಟಾಪ್, ಮೊಬೈಲ್ ಕಳವುಹೆಂಡತಿಯ ಹತ್ಯೆಗೈದ BSF ಯೋಧ – ಮಹಡಿಯಿಂದ ಬಿದ್ದು ಸಾವು ಎಂದು ಬಿಂಬಿಸಲು ಯತ್ನಗ್ರಾಮದಲ್ಲಿ ಮೊಸಳೆ ಪ್ರತ್ಯಕ್ಷ; ಮನೆಗಳ ಬಳಿಯೇ ಮರಿಗಳ ಓಡಾಟಗಂಡ ಅಂತ್ಯಸಂಸ್ಕಾರಕ್ಕೆ ಬರಬಾರದು – ಡೆತ್‌ನೋಟ್ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ2 ಕೋಟಿ ಮೌಲ್ಯದ ಕಟ್ಟಿಂಗ್ ಟೂಲ್ಸ್ ಕಳ್ಳತನ – ಐವರು ಅರೆಸ್ಟ್‌ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ; ನಾಲ್ವರು ಮೀನುಗಾರರ ರಕ್ಷಣೆಕಾನೂನು ಹೇಳಿದಂತೆ ನಡೆಯುತ್ತೇವೆ – ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಡಿಕೆಶಿ ಪ್ರತಿಕ್ರಿಯೆಕೊಲೆ ಆರೋಪಿ ಪವಿತ್ರಾಗೌಡ ಜೈಲಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌