LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಿನೇಶ್ ಗುಂಡೂರಾವ್‌ಗೆ ಕೈತಪ್ಪಿದ ಸಚಿವ ಸ್ಥಾನ – ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು

Advertisement
Advertisement

ಬೆಂಗಳೂರು: ಡಿಕೆ ಶಿವಕುಮಾರ್ ಸಂಪುಟದಲ್ಲಿ ದಿನೇಶ್ ಗುಂಡೂರಾವ್‌ಗೆ (Dinesh Gundu Rao) ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಗಾಂಧಿನಗರ ಕಾರ್ಯಕರ್ತರು ಹಾಗೂ ನೂರಾರು ಅಭಿಮಾನಿಗಳು ಕೆಪಿಸಿಸಿ ಕಚೇರಿಗೆ (ಮುತ್ತಿಗೆ ಹಾಕಿದ್ದಾರೆ.

ಕೆಪಿಸಿಸಿ ಕಚೇರಿ ಮುಂದೆ ದಿನೇಶ್ ಗುಂಡೂರಾವ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. `ಜಸ್ಟೀಸ್ ಫಾರ್ ಲಾಯಲ್ಟಿ’ ಬೋರ್ಡ್‌ನಿಂದ ಬಂದಿರುವ ಗಾಂಧಿನಗರ ಕಾರ್ಯಕರ್ತರು ಅವಕಾಶ ನೀಡದ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಮಹಿಳೆಯರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ದಿನೇಶ್ ಗುಂಡೂರಾವ್ ಅಭಿಮಾನಿಗಳು ಕಚೇರಿ ಮುಂದೆ ಜಮಾವಣೆಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. 

ನಾವು ಸಾಮೂಹಿಕ ರಾಜೀನಾಮೆ ಕೊಡುತ್ತೇವೆ. ಕೂಡಲೇ ಸಚಿವ ಸ್ಥಾನ ಘೋಷಣೆ ಮಾಡಿ, ಇಲ್ಲ ನಮ್ಮ ರಾಜೀನಾಮೆಯನ್ನು ಪಡೆಯಿರಿ. ಸಚಿವ ಸ್ಥಾನ ಕೊಡಲ್ಲ ಅಂತ ಮೊದಲೇ ಹೇಳಬೇಕಿತ್ತು. ಯಾವ ಕಪ್ಪು ಚುಕ್ಕೆ ಇದೆ. ಪಾರದರ್ಶಕ ಆಡಳಿತ ನೀಡಿದ್ರು ಅನ್ಯಾಯ ಯಾಕೆ? ಎಂದು ಘೋಷಣೆ ಕೂಗಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕೆಪಿಸಿಸಿ ಕಚೇರಿಗೆ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಬ್ಯಾರಿಕೇಡ್ ಹಾರಿ ಕಚೇರಿಗೆ ಕಾರ್ಯಕರ್ತರು ನುಗ್ಗಿದ್ದಾರೆ. ಕಚೇರಿಗೆ ಏಕಾಏಕಿ ಕಾರ್ಯಕರ್ತರು ನುಗ್ಗಿದ ಪರಿಣಾಮ ತಳ್ಳಾಟ ನಡೆದಿದೆ. 

ಇನ್ನು ಅರ್ಚಕರ ಸಂಘದವರೂ ದಿನೇಶ್ ಗುಂಡೂರಾವ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಬಾರಿ ಒಂದೇ ಒಂದು ಸ್ಥಾನ ಬ್ರಾಹ್ಮಣ ಸಮುದಾಯಕ್ಕೆ ಕೊಟ್ಟಿಲ್ಲ. ಯಾರಾದ್ರು ಒಬ್ಬ ಶಾಸಕರಿಗಾದರೂ ಅವಕಾಶ ಕೊಡಬೇಕಿತ್ತು. ಇದರಿಂದ ಸಮುದಾಯಕ್ಕೆ ಬೇಸರ ಆಗಿದೆ. ಇದೇ ಕಾರಣಕ್ಕೆ ಇಂದು ಕೆಪಿಸಿಸಿ ಕಚೇರಿಗೆ ನೂರಾರು ಸಂಖ್ಯೆಯಲ್ಲಿ ಮನವಿ ಸಲ್ಲಿಸಲು ಬಂದಿದ್ದೇವೆ. `ಬೇಕೆ ಬೇಕು ನ್ಯಾಯ ಬೇಕು, ನಿಷ್ಠಾವಂತ ಕಾರ್ಯಕರ್ತರಿಗೆ ಗೌರವ ಕೊಡಿ’ ಅಂತ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಎಂ.ಕೃಷ್ಣಪ್ಪ ಅಭಿಮಾನಿಗಳು ಕೂಡ ಕೆಪಿಸಿಸಿ ಮುಂಭಾಗ ಜಮಾಯಿಸಿದ್ದಾರೆ. ಕೆಲ ವಿಜಯನಗರ ಭಾಗದ ಬೆಂಬಲಿಗರು ಹಾಗೂ ಎಂ ಕೃಷ್ಣಪ್ಪ ಹಾಗೂ ಪ್ರಿಯಕೃಷ್ಣ ಬೆಂಬಲಿಗರು ಆಗಮಿಸಿ ಧರಣಿ ನಡೆಸುತ್ತಿದ್ದಾರೆ. ಬ್ಲಾಕ್ ಅಧ್ಯಕ್ಷರು ಕಪ್ಪು ಪಟ್ಟಿ ಧರಿಸಿ ಬಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ಕಾಂಗ್ರೆಸ್‌ ಕಾರ್ಯಕರ್ತರು ಸರಣಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕ ಎನ್‌ವೈ ಗೋಪಾಲಕೃಷ್ಣಗೆ ತಪ್ಪಿದ ಮಂತ್ರಿಗಿರಿ – ಟೈರಿಗೆ ಬೆಂಕಿಯಿಟ್ಟು ಬೆಂಬಲಿಗರ ಆಕ್ರೋಶನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ; ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ: ಪ್ರದೀಪ್ ಈಶ್ವರ್ಖಾಲಿ ಇರೋ ಮಹಿಳಾ ಸಚಿವ ಸ್ಥಾನ ಆದಷ್ಟು ಬೇಗ ಭರ್ತಿ: ಪ್ರಿಯಾಂಕ್ ಖರ್ಗೆಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಎಸ್‌ಆರ್ ಶ್ರೀನಿವಾಸ್ ಬೇಸರ – KSRTC ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಣೆಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನ ಇಲ್ಲ: ಯತೀಂದ್ರ ಸ್ಪಷ್ಟನೆದಿನೇಶ್ ಗುಂಡೂರಾವ್‌ಗೆ ಕೈತಪ್ಪಿದ ಸಚಿವ ಸ್ಥಾನ – ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರುಶಾಸಕರು ರಾಜೀನಾಮೆ ಕೊಟ್ಟರೆ ಎರಡೇ ನಿಮಿಷದಲ್ಲಿ ಅಂಗೀಕಾರ: ಡಿ.ಕೆ ಶಿವಕುಮಾರ್‌ಕೇಂದ್ರ ಸರ್ಕಾರ ಟ್ರಂಪ್‌ ಮುಂದೆ ಮಂಡಿಯೂರಿದೆ – E20 ಇಂಧನ ವಿರೋಧಿಸಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರತಿಭಟನೆದುರಹಂಕಾರವೇ ವಿನಾಶಕ್ಕೆ ದಾರಿ – ಪುತ್ರ ಉದಯನಿಧಿ ರಿಲೀಸ್‌ ಬಳಿಕ ಟಿವಿಕೆ ವಿರುದ್ಧ ಎಂ.ಕೆ ಸ್ಟಾಲಿನ್‌ ಗುಡುಗುಕಾರು ಅಪಘಾತದಲ್ಲಿ ಯುವತಿ ಸಾವು – ಬರ್ತ್‌ಡೇ ಆಚರಣೆಗೆ ಕರೆದು ರೇಪ್‌ಗೆ ಯತ್ನಿಸಿ ಕೊಲೆ ಆರೋಪ