LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೊಲ್ಲ ನಿಗಮ ಸ್ಥಾಪನೆಗೆ ಸಿಎಂ ಜತೆ ಚರ್ಚೆ: ಶಿವರಾಜ್ ತಂಗಡಗಿ

Advertisement
Advertisement
Advertisement

ಬೆಂಗಳೂರು: ಗೊಲ್ಲ ಸಮುದಾಯಕ್ಕೆ  ಪ್ರತ್ಯೇಕ ಯಾದವ ನಿಗಮ ಸ್ಥಾಪಿಸುವ ಸಂಬಂಧ ಸಿಎಂ ಜೊತೆ ಚರ್ಚಿಸಿ, ನಿಗಮ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ  ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಗಮನ ಸೆಳೆಯುವ ಸೂಚನೆಯ ಮೂಲಕ ಕಾಂಗ್ರೆಸ್ ಸದಸ್ಯ ನಾಗರಾಜ್ ಯಾದವ್ ಈ ವಿಚಾರವನ್ನು ಪ್ರಸ್ತಾಪಿಸಿದರು. ರಾಜ್ಯದಲ್ಲಿ ಗೊಲ್ಲ ಸಮುದಾಯಕ್ಕೆ ಪ್ರತ್ಯೇಕ ಯಾದವ ನಿಗಮ ಸ್ಥಾಪಿಸಬೇಕು. ಸಮುದಾಯದಲ್ಲಿ 26 ಉಪಜಾತಿಗಳಿವೆ. ನಾವು ಅತಿ ಹಿಂದುಳಿದವರು ಹಾಗೂ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿದ್ದೇವೆ. ನಮ್ಮ ಸಮುದಾಯದ ಜನಸಂಖ್ಯೆ 1 ಕೋಟಿ ಇದೆ. ನಮಗೆ ಇರುವ ಮೀಸಲಾತಿ ಪ್ರಮಾಣ ಸಾಲುತ್ತಿಲ್ಲ. ಶೇ.4ರಷ್ಟು ಮೀಸಲಾತಿ ಸಾಕಾಗುತ್ತಿಲ್ಲ. ಇದನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

60ರಿಂದ 70 ಕ್ಷೇತ್ರಗಳಲ್ಲಿ ನಮ್ಮ ಸಮುದಾಯ ಪ್ರಬಲವಾಗಿದೆ. ಮರಾಠ, ಲಿಂಗಾಯತ, ಒಕ್ಕಲಿಗ ಸಮುದಾಯಗಳಿಗೆ ನಿಗಮ ಸ್ಥಾಪಿಸಿರುವಂತೆ ಯಾದವ ನಿಗಮವನ್ನೂ ಸ್ಥಾಪಿಸಬೇಕು. ನಮಗೆ ಪ್ರತ್ಯೇಕ ನಿಗಮ ಬೇಕು. ಸಚಿವರು ಈ ಬಗ್ಗೆ ಆಶ್ವಾಸನೆ ನೀಡಬೇಕು. ಇಲ್ಲವಾದರೆ ಗೊಲ್ಲರ ಶಾಪ ತಟ್ಟುತ್ತದೆ. ಕಳೆದ ನಾಲ್ಕು ವರ್ಷಗಳಿಂದ ನಮಗೆ ಮೋಸ ಮಾಡಲಾಗುತ್ತಿದೆ. ಯಾದವ ನಿಗಮ ಸ್ಥಾಪನೆ ಮಾಡಲೇಬೇಕು. ನಾವು ಈ ದೇಶದ ಜನರಲ್ಲವಾ? ಈಗಲೇ ನಿಗಮ ಸ್ಥಾಪನೆ ಘೋಷಣೆ ಮಾಡಬೇಕು ಎಂದು ನಾಗರಾಜ್ ಯಾದವ್ ಒತ್ತಾಯಿಸಿದರು. 

ಇದಕ್ಕೆ ಉತ್ತರಿಸಿದ ಸಚಿವ ಶಿವರಾಜ್ ತಂಗಡಗಿ, ರಾಜ್ಯದಲ್ಲಿ ಈಗಾಗಲೇ 16 ನಿಗಮಗಳಿವೆ. ಗೊಲ್ಲ ಸಮುದಾಯಕ್ಕೆ ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮ ಈಗಾಗಲೇ ಇದೆ. ಯಾದವ ಸಮುದಾಯಕ್ಕೆ ಪ್ರತ್ಯೇಕ ನಿಗಮ ಬೇಕು ಎಂದು ಮನವಿ ಮಾಡಲಾಗಿದೆ. ನಿಗಮ ಸ್ಥಾಪಿಸುವುದು ಸಿಎಂ ಅವರ ವ್ಯಾಪ್ತಿಗೆ ಬರುತ್ತದೆ. ಈ ವಿಚಾರವನ್ನು ಸಿಎಂ ಅವರ ಗಮನಕ್ಕೆ ತಂದು ನಿಗಮ ಸ್ಥಾಪಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
NIA ची देशभरात छापेमारी, पुणे शहरातही शिजत होता भयंकर कट? दहशतवाद प्रकरणात…ಐಪಿಸಿ ಕಂಪನಿಯಿಂದ 83 ಸಾವಿರ ಕೋಟಿ ರೂ. ಹೂಡಿಕೆಗೆ ಒಲವು: ಎಂ.ಬಿ ಪಾಟೀಲ್ಹಾವೇರಿ ಜಿಲ್ಲೆಗೆ 2 ತಿಂಗಳು ಪ್ರಮೋದ್ ಮುತಾಲಿಕ್ ಪ್ರವೇಶ ನಿರ್ಬಂಧಕಾವೇರಿ ತೀರ್ಥೋದ್ಭವ ಆಚರಣೆಗೆ 2 ಕೋಟಿ ರೂ. ಅನುದಾನ – ಡಿಕೆಶಿ ಘೋಷಣೆಭೀಮಾ ನದಿಯಲ್ಲಿ ಸ್ನಾನ ಮಾಡಲು ಹೋದ ಯುವಕ ನಾಪತ್ತೆಇನ್‌ಸ್ಟಾ ಪ್ರೇಯಸಿಗೆ ಎಂಗೇಜ್‌ಮೆಂಟ್; ಆರನೇ ಮಹಡಿಯಿಂದ ಜಿಗಿಯಲು ಮುಂದಾದ ಅಪ್ರಾಪ್ತಕೋಲಾರದಲ್ಲಿ 1,71,034 ಮತದಾರರು ಕರಡು ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೆ: ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್ರಾಜ್ಯದ 224 ಕ್ಷೇತ್ರಗಳಲ್ಲಿ ಅಂತರ್ಜಲ ಹೆಚ್ಚಳಕ್ಕೆ ಶಿರಪುರ ಮಾದರಿ: ಅಜಯ್ ಸಿಂಗ್ಅವ್ರು IAS ಮಾಡಿದ್ರೆ ಜನ ನನ್ನನ್ನು 6 ಬಾರಿ ಶಾಸಕನನ್ನಾಗಿ ಮಾಡಿದ್ದಾರೆ: ಹಾಸನ ಡಿಸಿ ವಿರುದ್ಧ ರೇವಣ್ಣ ಕಿಡಿಕಂಟ್ರಾಕ್ಟರ್ ಆಗಿ ಅದಾನಿ ಸಿಎಂ ಭೇಟಿಯಾಗಿದ್ದಾರೆ: ಪ್ರಿಯಾಂಕ್ ಖರ್ಗೆ