LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ವಿಭಾಗೀಯ ಪೀಠ ಷರತ್ತುಬದ್ಧ ಅನುಮತಿ

Advertisement
ಕಲಬುರಗಿ/ಬೀದರ್: ಜೂನ್ 28ರಂದು ಬೀದರ್‌ನ  ಬಸವಕಲ್ಯಾಣದಲ್ಲಿ  ನಡೆಯಲಿರುವ ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ಕರ್ನಾಟಕ ಹೈಕೋರ್ಟ್‌ ಕಲಬುರಗಿ ವಿಭಾಗೀಯ ಪೀಠವು  ಷರತ್ತುಬದ್ಧ ಅನುಮತಿ ನೀಡಿದೆ.
ಕಾರ್ಯಕ್ರಮದಲ್ಲಿ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಭಾಗವಹಿಸಲು ಅವಕಾಶ ನೀಡಿದ್ದು, ಅವರು ಭಾಷಣ ಮಾಡದಂತೆ ಅಫಿಡವಿಟ್ ಸಲ್ಲಿಸಿರುವ ಹಿನ್ನೆಲೆ ನ್ಯಾಯಾಲಯ ಈ ಅನುಮತಿ ನೀಡಿದೆ. ಕಾರ್ಯಕ್ರಮದಲ್ಲಿ ಗರಿಷ್ಠ 2,500 ಜನರು ಭಾಗವಹಿಸಬಹುದೆಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. 
ಸಮಾವೇಶದ ವೇಳೆ ಯಾವುದೇ ರೀತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕಾರ್ಯಕ್ರಮವನ್ನು ನಡೆಸಬೇಕು. ಒಂದು ವೇಳೆ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದರ ಸಂಪೂರ್ಣ ಹೊಣೆಗಾರಿಕೆಯನ್ನು ಕಾರ್ಯಕ್ರಮದ ಆಯೋಜಕರೇ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಕನ್ನೇರಿಯ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಪರವಾಗಿ ಹಿರಿಯ ವಕೀಲ ವೆಂಕಟೇಶ್ ದಳವಾಯಿ ವಾದ ಮಂಡಿಸಿದರೆ, ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರು ಸಮಾವೇಶಕ್ಕೆ ಷರತ್ತುಬದ್ಧ ಅನುಮತಿ ನೀಡಿ, ಆದೇಶ ಹೊರಡಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಲ್‌ಆರ್‌ಐ ಯಾತ್ರೆ, ಖೇತ್ ಬಚಾವೋ ಅಭಿಯಾನಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಚಾಲನೆಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಗೂ ಅಗ್ನಿವೀರರ ಪೋಲಿಸ್ ವಿಚಾರಣೆ ಪ್ರಕ್ರಿಯೆ ವಿಳಂಬ - ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ ಮನವಿಫೋಟೊ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಜಲಸಮಾಧಿಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ವಿಭಾಗೀಯ ಪೀಠ ಷರತ್ತುಬದ್ಧ ಅನುಮತಿಮತ್ತೆ ಸುಪ್ರೀಂ ಮೆಟ್ಟಿಲೇರಿದ ದರ್ಶನ್ – ಒಂದು ವರ್ಷ ಜಾಮೀನು ಅರ್ಜಿ ಸಲ್ಲಿಸದಂತೆ ನೀಡಿದ್ದ ಆದೇಶ ಮಾರ್ಪಾಡಿಗೆ ಮನವಿ133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ಬಸವಕಲ್ಯಾಣದ ‘ಬಸವಾದಿ ಶರಣರ ಹಿಂದೂ ಸಮಾವೇಶ’ ರದ್ದತಿಗೆ ಬಸವಪರ ಸಂಘಟನೆಗಳ ಒತ್ತಾಯಉಚಗಾಂವ ರಸ್ತೆ ಕಾಮಗಾರಿಗೆ ಭೂಮಿಪೂಜೆ, ಬೆನಕನಹಳ್ಳಿಯಲ್ಲಿ ದೇವಸ್ಥಾನ ಮೇಲ್ಚಾವಣಿ ಕಾಮಗಾರಿಗೆ ಚಾಲನೆಬೈಕ್-ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ:  ಓರ್ವ ಸಾವುಒಂದೇ ತಿಂಗಳಲ್ಲಿ 2ನೇ ಬಾರಿ ಗದಗ ಸರ್ಕಾರಿ ಆಸ್ಪತ್ರೆಯಲ್ಲಿ ಪೈಪ್‌ ಕಳ್ಳತನ – ಆಪರೇಷನ್ ಥಿಯೇಟರ್ ಬಂದ್